Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಅತ್ಯಂತ ಉದ್ದದ ಸೆಲ್ಫಿ ಸ್ಟಿಕ್,...

ಉಡುಪಿ : ಅತ್ಯಂತ ಉದ್ದದ ಸೆಲ್ಫಿ ಸ್ಟಿಕ್, ಅರ್ಮಾನ್‌ರಿಂದ ಗಿನ್ನೆಸ್ ದಾಖಲೆಗೆ ಯತ್ನ

ಅತ್ಯಂತ ಉದ್ದದ ಸೆಲ್ಫಿ ಸ್ಟಿಕ್:

ವಾರ್ತಾಭಾರತಿವಾರ್ತಾಭಾರತಿ11 April 2016 8:29 PM IST
share
ಉಡುಪಿ : ಅತ್ಯಂತ ಉದ್ದದ ಸೆಲ್ಫಿ ಸ್ಟಿಕ್, ಅರ್ಮಾನ್‌ರಿಂದ ಗಿನ್ನೆಸ್ ದಾಖಲೆಗೆ ಯತ್ನ

ಉಡುಪಿ, ಎ.11: ಮಣಿಪಾಲ ಎಂಐಟಿಯ ಎಲೆಕ್ಟ್ರಿಕಲ್ ಆ್ಯಂಡ್ ಇಲೆ ಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಮೂರನೆ ವರ್ಷದ ಆರನೆ ಸೆಮಿಸ್ಟರ್ ವಿದ್ಯಾರ್ಥಿ ಮಂಗಳೂರು ಹಂಪನಕಟ್ಟೆಯ ಅರ್ಮಾನ್(20) ಅತ್ಯಂತ ಉದ್ದದ ಮೊಬೈಲ್ ಫೋನ್ ಸೆಲ್ಫಿ ಸ್ಟಿಕ್ ತಯಾರಿಸಿ ಬಳಸುವ ಮೂಲಕ ಗಿನ್ನೆಸ್ ದಾಖಲೆಗೆ ಯತ್ನಿಸಿದ್ದಾರೆ.
ಈವರೆಗಿನ ಗಿನ್ನೆಸ್ ದಾಖಲೆಯು ಅಮೆರಿಕಾದ ಹಾಲಿವುಡ್ ನಟ ಬೆನ್ ಸ್ಟಿಲ್ಲರ್ ಹೆಸರಿನಲ್ಲಿದ್ದು, ಇವರು 8.56 ಮೀಟರ್ ಉದ್ದದ ಸೆಲ್ಫಿ ಸ್ಟಿಕ್‌ನ್ನು ತಯಾರಿಸಿದ್ದರು. ಇದೀಗ ಅರ್ಮಾನ್ ಅದನ್ನು ಮೀರಿಸುವ 10.36 (ಮೊಬೈಲ್ ಸಹಿತ 10.39) ಮೀಟರ್ ಉದ್ದ ಸೆಲ್ಫಿ ಸ್ಟಿಕ್ ತಯಾರಿಸುವ ಮೂಲಕ ಗಿನ್ನೆಸ್ ದಾಖಲೆಯಲ್ಲಿ ಹೆಸರು ಪಡೆಯಲು ಹೊರಟಿದ್ದಾರೆ.
ಇಂದು ಮಣಿಪಾಲ ಎಂಐಟಿಯ 10ನೆ ಬ್ಲಾಕ್‌ನಲ್ಲಿರುವ ಮೈದಾನದಲ್ಲಿ ಗಿನ್ನೆಸ್ ದಾಖಲೆಯ ಪ್ರಯತ್ನವನ್ನು ನಡೆಸಿದ ಅರ್ಮಾನ್ 10.39 ಮೀ. ಉದ್ದದ ಸೆಲ್ಫಿ ಸ್ಟಿಕ್‌ನ್ನು ಪ್ರದರ್ಶಿಸಿದರು. ಉಡುಪಿ ಉಪವಿಭಾಗದ ಡಿವೈಎಸ್ಪಿ ಕುಮಾರಸ್ವಾಮಿ, ಎಂಐಟಿಯ ನಿರ್ದೇಶಕ ಡಾ.ಜಿ.ಕೆ.ಪ್ರಭು, ಜಂಟಿ ನಿರ್ದೇಶಕ ಡಾ.ಬಿ.ಎಚ್.ವಿ.ಪೈ, ಸ್ಟುಡೆಂಟ್ ವೆಲ್‌ಫೇರ್ ಅಸೋಸಿಯೇಟ್ ಡೈರೆಕ್ಟರ್ ಡಾ.ನಾರಾಯಣ ಶೆಣೈ, ಎಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ವಿಭಾಗದ ಪ್ರೊ.ಬಿ.ಕೆ.ಸಿಂಗ್, ಜಯಕರಶೆಟ್ಟಿ ಇಂದ್ರಾಳಿ ಇದಕ್ಕೆ ಸಾಕ್ಷಿ ಯಾದರು. ಎಂಐಟಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ನಾಗರಾಜ್ ಸ್ಟಿಕ್‌ನ ಸರ್ವೆ ನಡೆಸಿದರು.
  ಆರಂಭದಲ್ಲಿ ನಾನು ಸ್ಟೀಲ್ ಮೆಟಲ್‌ನಿಂದ ಸ್ಟಿಕ್ ಮಾಡಿದೆ. ಆದರೆ 10 ಮೀಟರ್ ಉದ್ದದ ಸ್ಟಿಕ್ ಮಾಡುವಾಗ ಅದು ಬಾಗಲು ಆರಂಭಿಸಿತು. ಅದಕ್ಕೆ ಅಲ್ಯುಮಿನಿಯಂ ಮೆಟಲ್ ಉಪಯೋಗಿಸಿದೆ. ಅದು ಹಗುರವಾಗಿ ರುವುದರಿಂದ ಯಶಸ್ವಿಯಾಯಿತು. ಈ ಸ್ಟಿಕ್‌ನ ಸುತ್ತಳತೆ ಅರ್ಧ, ಮುಕ್ಕಾಲು, 5/8 ಇಂಚು ಹೊಂದಿದೆ. ಈ ಸ್ಟಿಕ್‌ನ ಕೆಳಗಡೆ ಅಳವಡಿಸಿದ ಬಟನ್ ಪ್ರೆಸ್ ಮಾಡಿದರೆ 10ಮೀಟರ್ ಉದ್ದದ ಸ್ಟಿಕ್‌ನ ತುದಿಯಲ್ಲಿ ಅಳವಡಿಸಲಾದ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆಯಬಹುದಾಗಿದೆ ಎಂದು ಅರ್ಮಾನ್ ತಿಳಿಸಿದರು.
ಸಾಮಾನ್ಯವಾಗಿ 1.5ಮೀ. ಉದ್ದದ ಸ್ಟಿಕ್ ಬರುವುದು. ಆದರೆ ನನಗೆ ಇದರಲ್ಲಿ ಸಾಧನೆ ಮಾಡಬೇಕೆಂಬ ಮನಸ್ಸಾಯಿತು. ಇಂಟರ್‌ನೆಟ್ ಮೂಲಕ ಗಿನ್ನೆಸ್ ದಾಖಲೆ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದೆ. ಇದನ್ನು ಸ್ವೀಕರಿಸಿದ ಗಿನ್ನೆಸ್ ಸಂಸ್ಥೆಯವರು ಕೆಲವು ಕಾರ್ಯವಿಧಾನಗಳನ್ನು ನೀಡಿದರು. ಅದರಂತೆ ಸಾಕ್ಷಿಗಳ ಮುಂದೆ ಸ್ಟಿಕ್ ಪ್ರದರ್ಶಿಸಿ, ಸಂಪೂರ್ಣ ಚಿತ್ರೀಕರಣ ಮಾಡಲಾಗಿದೆ. ಮುಂದೆ ಛಾಯಾಚಿತ್ರ ಹಾಗೂ ವಿಡಿಯೋ ರೆಕಾರ್ಡ್‌ನ್ನು ಗಿನ್ನೆಸ್ ರೆಕಾರ್ಡ್ ಸಂಸ್ಥೆಗೆ ಕಳುಹಿಸಿಕೊಡಲಾಗುವುದು ಎಂದರು.
ಮಂಗಳೂರಿನ ಮುಹಮ್ಮದ್ ಸೂರಿಂಜೆ ಹಾಗೂ ರೆಹನಾ ದಂಪತಿಯ ಮೂವರು ಮಕ್ಕಳಲ್ಲಿ ಅರ್ಮಾನ್ ಹಿರಿಯ ಮಗ. ಉಳಿದಂತೆ ಅರ್ಮಾನ್ ಗೆ ಸಹೋದರ ಹಾಗೂ ಸಹೋದರಿ ಇದ್ದಾರೆ. ಮುಹ್ಮಮದ್ ಸೂರಿಂಜೆ ಕೂಡ ಇಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಮುಂಬೈಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಪಡೆದಿರುವ ಇವರು ಇದೀಗ ಮಂಗಳೂರಿ ನಲ್ಲಿ ಸ್ವಂತ ವ್ಯವಹಾರ ನಡೆಸುತ್ತಿದ್ದಾರೆ.
ಎಂಐಟಿಯ ಫಾರ್ಮುಲಾ ಕಾರ್ ತಂಡದಲ್ಲಿಯೂ ಅರ್ಮಾನ್ ಇದ್ದಾರೆ. ಬ್ಲಾಗರ್, ಆ್ಯಂಡ್ರಾಯ್ಡಾ ಡೆವೆಲಪರ್, ಗ್ರಾಫಿಕ್ ಡಿಸೈನರ್ ಆಗಿರುವ ಇವರು ಮುಂದೆ ಅಟೋಮೊಬೈಲ್‌ನಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X