Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಜೆಟ್‌ನಲ್ಲಿ ಸರಕಾರ ಮುಜರಾಯಿ ಇಲಾಖೆಗೆ...

ಬಜೆಟ್‌ನಲ್ಲಿ ಸರಕಾರ ಮುಜರಾಯಿ ಇಲಾಖೆಗೆ ಅನುದಾನ ನೀಡಿಲ್ಲ: ಶಾಸಕ ವೈಎಸ್‌ವಿ. ದತ್ತ

ಶ್ರೀ ಕಳ್ಳಿಬೀರಲಿಂಗೇಶ್ವರ ನೂತನ ದೇವಾಲಯದ ಪ್ರವೇಶ ಉತ್ಸವ,ಗೋಪುರದ ಕಳಸಾರೋಹಣ

ವಾರ್ತಾಭಾರತಿವಾರ್ತಾಭಾರತಿ11 April 2016 10:29 PM IST
share
ಬಜೆಟ್‌ನಲ್ಲಿ ಸರಕಾರ ಮುಜರಾಯಿ ಇಲಾಖೆಗೆ ಅನುದಾನ ನೀಡಿಲ್ಲ: ಶಾಸಕ ವೈಎಸ್‌ವಿ. ದತ್ತ

ಕಡೂರು, ಎ.11: ಜನರಲ್ಲಿ ದೈವಭಕ್ತಿ ದೇವರಲ್ಲಿ ನಂಬಿಕೆ ಇರಬೇಕು ಎಂಬ ಕಾರಣಕ್ಕೆ ದೇವಾಲಯಗಳು ನಿರ್ಮಾಣದ ಜೊತೆಗೆ ಗ್ರಾಮಗಳ ಅಭಿವೃದ್ಧಿಯಾಗಬೇಕಿದೆ ಎಂದು ಶಾಸಕ ವೈಎಸ್‌ವಿ. ದತ್ತ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅವರು ತಾಲೂಕಿನ ಗರ್ಜೆ ಗ್ರಾಮದಲ್ಲಿ ಶ್ರೀ ಕಳ್ಳಿಬೀರ ಲಿಂಗೇಶ್ವರ ಸ್ವಾಮಿ ನೂತನ ದೇವಾಲಯದ ಪ್ರವೇಶ ಉತ್ಸವ ಮತ್ತು ಗೋಪುರ ದ ಕಳಸಾರೋಹಣ ಹಾಗೂ ಕನಕದಾಸರ ಪ್ರತಿಮೆ ಅನಾವರಣದ ಧಾರ್ಮಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ಷೇತ್ರದ ಯಾವುದೇ ಗ್ರಾಮಗಳಿಗೆ ಭೇಟಿ ನೀಡಿದರೆ, ಪ್ರಥಮವಾಗಿ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕೇಳದೆ ದೇವಾಲಯಗಳ ನಿರ್ಮಾಣಕ್ಕೆ ಹಣ ಕೇಳುವುದು ವಾಡಿಕೆಯಾಗಿದೆ. ದೇವಾಲಯಗಳ ನಿರ್ಮಾಣಕ್ಕಿಂತ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯಾಗಬೇಕಿದೆ ಎಂದು ಹೇಳಿದರು.

ಪ್ರತಿ ಗ್ರಾಮದಲ್ಲಿ ಸಮುದಾಯಕ್ಕೊಂದು ದೇವಾಲಯ ಎಂಬಂತಾಗಿದೆ. ಯಾವುದೇ ದೇವಾಲಯ ನಿರ್ಮಾಣವಾದರೂ ಇದರ ಜೊತೆಗೆ ಮನುಷ್ಯರು ಪರಿವರ್ತನೆಯಾಗಬೇಕಿದೆ. ಈ ಸಾಲಿನ ಬಜೆಟ್‌ನಲ್ಲಿ ಮುಜರಾಯಿ ಇಲಾಖೆಗೆ ಸರಕಾರ ನಯಾಪೈಸೆ ನೀಡಿರುವುದಿಲ್ಲ, ಶ್ರೀಮಂತ ದೇವರುಗಳಿಗೆ ಸರಕಾರ ಯಾವುದೇ ಅನುದಾನ ನೀಡುವುದು ಬೇಡ ಕೆಳವರ್ಗದ ಅಹಿಂದ ದೇವರುಗಳಿಗೆ ಅನುದಾನ ನೀಡಲು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಗಮನಹರಿಸಬೇಕಿದೆ ಎಂದರು.

ಜಿಪಂ ಸದಸ್ಯ ಕೆ.ಆರ್. ಮಹೇಶ್‌ಒಡೆಯರ್ ಮಾತನಾಡಿ, ಭಕ್ತಿ, ನಂಬಿಕೆ ಇರುವವರು ದೇವಾಲಯಗಳಿಗೆ ಹೋಗುತ್ತಾರೆ ಎಂಬುದನ್ನು ರೂಢಿಸಿಕೊಂಡು ಬಂದಿರುತ್ತೇವೆ. ಹಿಂದೆ ಗುರುವಿಗೆ ಅತಿ ಭಕ್ತಿ ಈಗ ಇತ್ತೀಚೆಗೆ ಜನ ಧಾರ್ಮಿಕತೆಯಿಂದ ದೂರವಾಗುತ್ತಿದ್ದಾರೆ. ಸಂಕುಚಿತ ಭಾವನೆ ಎಲ್ಲರಲ್ಲೂ ಆವರಿಸಿದೆ. ಇದು ಹೋಗಬೇಕಿದೆ. ಧಾರ್ಮಿಕವಾಗಿ ದೇವಾಲಯಗಳು ಬೇಕಿದೆ, ನಂಬಿಕೆಗಿಂತ ಹೆಚ್ಚಾಗಿ ಹೆದರಿಕೆಯಿಂದ ದೇವಾಲಯಗಳಿಗೆ ಹಣ ನೀಡುವುದೇ ಹೆಚ್ಚಾಗಿದೆ ಎಂದು ನುಡಿದರು.

ಸಮಾರಂಭದಲ್ಲಿ ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರನಂದಾಪುರಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಿಪಂ ಸದಸ್ಯರಾದ ವನಮಾಲ ದೇವರಾಜ್, ಕಾವೇರಿಲಕ್ಕಪ್ಪ, ಲೋಲಾಕ್ಷಿಬಾಯಿ, ತಾಪಂ ಸದಸ್ಯೆ ಕವಿತಾಜಗದೀಶ್, ಗರ್ಜೆ ಗ್ರಾಪಂ ಅಧ್ಯಕ್ಷೆ ಲಕ್ಕಮ್ಮ ಕರಿಯಪ್ಪ, ಆಸಂದಿ ರೇವಣಸಿದ್ದೇಶ್ವರ ಸಂಸ್ಥಾನ ಮಠದ ಅಧ್ಯಕ್ಷ ರೇವಣ್ಣ, ಮುಖಂಡರಾದ ಕೆ.ಎಂ. ಮಹೇಶ್ವರಪ್ಪ, ರೇವಣ್ಣ, ಬಿ.ಕೆ. ಜಯಣ್ಣ, ಎಸ್. ತಮ್ಮಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X