Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಮಹಾಪುರಷರ ಜಯಂತಿ- ಸ್ಮರಣೆಗೆ...

ಮಂಗಳೂರು : ಮಹಾಪುರಷರ ಜಯಂತಿ- ಸ್ಮರಣೆಗೆ ನೀರಸ ಪ್ರತಿಕ್ರಿಯೆ: ಜಿಲ್ಲಾಧಿಕಾರಿ ವಿಷಾದ

ವಾರ್ತಾಭಾರತಿವಾರ್ತಾಭಾರತಿ12 April 2016 5:56 PM IST
share
ಮಂಗಳೂರು : ಮಹಾಪುರಷರ ಜಯಂತಿ- ಸ್ಮರಣೆಗೆ ನೀರಸ ಪ್ರತಿಕ್ರಿಯೆ: ಜಿಲ್ಲಾಧಿಕಾರಿ ವಿಷಾದ

ಮಂಗಳೂರು, ಎ. 12: ಬೀದಿ ಬದಿಯಲ್ಲಿ ಬಡಿದಾಟಕ್ಕೆ ಒಗ್ಗಟ್ಟಾಗುವ ಜನ, ಮಹಾಪುರಷರ ಜಯಂತಿ, ಸ್ಮರಣೆಯ ಕಾರ್ಯಕ್ರಮಗಳಿಗೆ ನೀರಸ ಪ್ರತಿಕ್ರಿಯೆ ತೋರುತ್ತಿರುವುದು ಬೇಸರದ ಸಂಗತಿ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ವಿಷಾದಿಸಿದ್ದಾರೆ.

ಅವರ ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಗರದ ಪುರಭವನದಲ್ಲಿ ಮಂಗಳವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮಕ್ಕೆ ಸಾರ್ವಜನಿಕರ ನೀರಸ ಪ್ರತಿಕ್ರಿಯೆ ಬಗ್ಗೆ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ನಾಡನ್ನು ಕಟ್ಟಿದವರು ಮತುತಿ ಬೌದ್ಧಿಕ ಶ್ರೀಮಂತಿಕೆಯನ್ನು ರೂಪಿಸಿದ ಮಹಾನ್ ನಾಯಕರಿಗೂ ನಮಗೂ ಸಂಬಂಧವೇ ಇಲ್ಲವೇನೋ ಎಂಬಂತೆ ಇಲ್ಲಿನ ಜನರು ಪ್ರತಿಕ್ರಿಯಿಸುತ್ತಿದ್ದಾರೆ. ಸಾವಿರಾರು ರೂಪಾಯಿ ವೆಚ್ಚಮಾಡಿ ನಡೆಸುವ ಇಂತಹ ಕಾರ್ಯಕ್ರಮಗಳಿಗೆ ಜನರೇ ಬರುವುದಿಲ್ಲ ಎಂದಾದರೆ ಜಿಲ್ಲೆಯಲ್ಲಿ ಸರ್ಕಾರದಿಂದ ಮಹಾಪುರಷರ ಜಯಂತಿ ಆಚರಿಸುವುದನ್ನು ಮುಂದುವರಿಸುವ ಬಗ್ಗೆ ಮರುಚಿಂತನೆ ಮಾಡಬೇಕಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಸಾತ್ಮಕ ಚಟುವಟಿಕೆಗಳು ಮಾತ್ರ ನಡೆಯುತ್ತಿವೆ ಎಂಬ ತಪ್ಪು ಸಂದೇಶ ಹೊರ ಜಗತ್ತಿಗೆ ರವಾನೆ ಆಗುತ್ತಿದೆ. ಇದರಿಂದಾಗಿ ಜಿಲ್ಲೆಯ ಕೈಗಾರಿಕೆ, ಪ್ರವಾಸೋದ್ಯಮ ಎಲ್ಲವೂ ಪ್ರತಿಕೂಲ ಪರಿಣಾಮಗಳನ್ನು ಎದುರಿಸುತ್ತಿವೆ ಎಂದವರು ಹೇಳಿದರು.

ಮೂವರು ಸಚಿವರು, ನಾಲ್ವರು ಶಾಸಕರು, ವಿಧಾನ ಪರಿಷತ್ತಿನ ಇಬ್ಬರು ಸದಸ್ಯರು, ಸಂಸದ ನಳಿನ್‌ಕುಮಾರ್ ಕಟೀಲ್, ಮೇಯರ್ ಕೆ.ಹರಿನಾಥ್ ಸೇರಿದಂತೆ ಹಲವು ಮಂದಿ ಅತಿಥಿಗಳನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಆದರೆ ಉದ್ಘಾಟನಾ ಸಮಾರಂಭದ ವೇಳೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಸೇರಿದಂತೆ ಕೆಲವರೇ ಹಾಜರಿದ್ದರು. ಕಾರ್ಯಕ್ರಮ ಉದ್ಘಾಟನೆಯ ನಿಗದಿತ ಸಮಯದ ವೇಳೆ ಸುಮಾರು 20 ಮಂದಿಯಷ್ಟೂ ಜನ ಪುರಭವನದಲ್ಲಿರಲಿಲ್ಲ. ಹೀಗಾಗಿ ಕಾರ್ಯಕ್ರಮ ಕೆಲ ಹೊತ್ತು ತಡವಾಗಿ ಆರಂಭಗೊಂಡಿತು. ಈ ಸಂದರ್ಭ ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಕೆ.ಅಭಯಚಂದ್ರ ಜೈನ್ ಅವರು ಸಮಾರಂಭಕ್ಕೆ ಭೇಟಿ ನೀಡಿದರು.

ಎಲ್ಲಾ ಸಮಾರಂಭಗಳನ್ನೂ ಪುರಭವನದಲ್ಲೇ ನಡೆಸಬೇಕೆಂಬ ಹಠ ಬೇಡ. ಅಂತಹ ಹಠಕ್ಕೆ ಬಿದ್ದರೆ ಇಲ್ಲಿಗೆ ಜನರೇ ಬರುವುದಿಲ್ಲ. ಜನರು ಇರುವಲ್ಲಿಗೆ ಹೋಗಿ ಸಮಾರಂಭಗಳನ್ನು ನಡೆಸಬೇಕು ಎಂದು ಶಾಸಕ ಐವನ್ ಡಿಸೋಜ ಅಭಿಪ್ರಾಯಿಸಿದರು.

ಕೋಡಿಜಾಲ್ ಇಬ್ರಾಹಿಂ ಮಾತನಾಡಿ, ದೇವರ ದಾಸಿಮಯ್ಯನಂತಹ ವ್ಯಕ್ತಿಗಳ ತತ್ವ, ಸಂದೇಶಗಳನ್ನು ಅನುಸರಿಸುವ ಮೂಲಕ ಸೌಹಾರ್ದ ಬದುಕನ್ನು ಕಟ್ಟಬೇಕಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ ಮಾತನಾಡಿದರು. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ., ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ.ಮಹಮ್ಮದ್ ಹನೀಫ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಉಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಚಂದ್ರಹಾಸ ರೈ, ಕರಾವಳಿ ದೇವಾಂಗ ಸಂಘದ ಮುಖಂಡರಾದ ರಾಮು ಮಾಯಿಪ್ಪಾಡಿ, ವಿ.ಎ.ರಾಮದಾಸ್, ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಪುರಂದರ ಡಿ. ಶೆಟ್ಟಿಗಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X