Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವೃದ್ಧ ದಂಪತಿಗಾಗಿ ವಿಮಾನ ನಿಲ್ಲಿಸಿದ...

ವೃದ್ಧ ದಂಪತಿಗಾಗಿ ವಿಮಾನ ನಿಲ್ಲಿಸಿದ ಇತ್ತಿಹಾದ್ ಪೈಲಟ್ !

ವಾರ್ತಾಭಾರತಿವಾರ್ತಾಭಾರತಿ12 April 2016 7:27 PM IST
share
ವೃದ್ಧ ದಂಪತಿಗಾಗಿ ವಿಮಾನ ನಿಲ್ಲಿಸಿದ ಇತ್ತಿಹಾದ್ ಪೈಲಟ್ !

ಮ್ಯಾಂಚೆಸ್ಟರ್ , ಎ.12: ಇತ್ತಿಹಾದ್ ವಿಮಾನದ ಪೈಲಟ್ ಒಬ್ಬನ ಅಸಾಧಾರಣ ಮಾನವೀಯ ಸೇವೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 

ಆಸ್ಪತ್ರೆಯಲ್ಲಿ ಮರಣ ಶಯ್ಯೆಯಲ್ಲಿದ್ದ ಮೊಮ್ಮಗನನ್ನು ಅಜ್ಜ ಅಜ್ಜಿ ಹೋಗಿ ಸೇರಲಿಕ್ಕಾಗಿ ಈ ಪೈಲಟ್ ರನ್ ವೇಯಲ್ಲಿ ವಿಮಾನವನ್ನು ನಿಲ್ಲಿಸಿದ್ದರು. 

ವೃದ್ಧ ದಂಪತಿಯೊಂದು ಅಬುಧಾಬಿ ಮಾರ್ಗವಾಗಿ ಆಸ್ಟ್ರೇಲಿಯಕ್ಕೆ ಹೊರಟಿದ್ದರು. ವಿಮಾನ ರನ್ ವೇ ಯಲ್ಲಿ ಹೊರಡುವಾಗ ಇನ್ನೇನು ತಮ್ಮ ಮೊಬೈಲ್ ಅನ್ನು ಸ್ವಿಚ್ ಆಫ್ ಮಾಡಲು ಹೊರಟಾಗ ದಂಪತಿಗೆ ತಮ್ಮ ಅಳಿಯನಿಂದ ಸಂದೇಶವೊಂದು ಬಂತು. 

ತಕ್ಷಣ ಅಳಿಯನಿಗೆ ಕರೆ ಮಾಡಿ ನಮ್ಮ ವಿಮಾನ ಹೊರಟಿದೆ ಎಂದು ಹೇಳಲು ಹೊರಡುವಾಗಲೇ ಅಲ್ಲಿಂದ ಅವರ ಮೊಮ್ಮಗನನ್ನು ಆಸ್ಪತ್ರೆಯ ತೀವ್ರ ನಿಗಾಕ್ಕೆ ತೆಗೆದುಕೊಂಡು ಹೋದ ವಿಷಯ ತಿಳಿಯಿತು. ತಕ್ಷಣ ದಂಪತಿ ಕ್ಯಾಬಿನ್ ಸಿಬ್ಬಂದಿಗೆ ವಿಷಯ ತಿಳಿಸಿದರು. ಆಗಲೇ ವಿಮಾನ ರನ್ ವೇಯಲ್ಲಿ ಹೊರತಾಗಿತ್ತು. ಸಿಬ್ಬಂದಿ ತಕ್ಷಣ ಪೈಲಟ್ ಗೆ ವಿಷಯ ತಲುಪಿಸಿದರು. 

ಆಗ ಬೇರೇನೂ ಯೋಚಿಸದೆ ಮಾನವೀಯತೆ ಮೆರೆದ  ಪೈಲಟ್ ವಿಮಾನ ನಿಲ್ಲಿಸಿ ಮತ್ತೆ ಗೇಟ್ ಗೆ ಹಿಂದುರುಗಿದ. ಕ್ಯಾಬಿನ್ ಸಿಬ್ಬಂದಿ ವೃದ್ಧ ದಂಪತಿಯನ್ನು ಕೆಳಗಿಳಿಸಿ ಅವರು ಕೂಡಲೇ ಕಾರ್ ಮೂಲಕ ಆಸ್ಪತ್ರೆಗೆ ತಲುಪಲು ಸಹಕರಿಸಿದರು. 

ದಂಪತಿ ಆಸ್ಪತ್ರೆ ತಲುಪಿದ ಮರುದಿನವೇ ಅವರ ಮೊಮ್ಮಗ ಮೃತಪಟ್ಟಿದ್ದಾನೆ. ಪೈಲಟ್ ನ ಸಮಯ ಪ್ರಜ್ಞೆ ಹಾಗು ಮಾನವೀಯತೆಯಿಂದ ದಂಪತಿ ತಮ್ಮ ಮೊಮ್ಮಗನ  ಕೊನೆ ಗಳಿಗೆಯಲ್ಲಿ ಅವನೊಂದಿಗೆ ಕಳೆಯಲು ಸಾಧ್ಯವಾಯಿತು ಎಂದು ಈ ಇಡೀ ಪ್ರಕರಣವನ್ನು ಜಗತ್ತಿನ ಗಮನಕ್ಕೆ ತಂದ ಬೆಕಿ ಸ್ಟೀಫ಼ನ್ಸನ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X