Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ:ಗುಂಪಿನಿಂದ ಇಬ್ಬರು ಯುವಕರ ಹತ್ಯೆ

ಮಣಿಪುರ:ಗುಂಪಿನಿಂದ ಇಬ್ಬರು ಯುವಕರ ಹತ್ಯೆ

ಕೋಮು ಘಟನೆಯೆಂಬ ಶಂಕೆ, ಮುಖ್ಯಮಂತ್ರಿ ಮೌನ

ವಾರ್ತಾಭಾರತಿವಾರ್ತಾಭಾರತಿ12 April 2016 8:57 PM IST
share
ಮಣಿಪುರ:ಗುಂಪಿನಿಂದ ಇಬ್ಬರು ಯುವಕರ ಹತ್ಯೆ

ಇಂಫಾಲ,ಎ.12: ಮಯಾಂಗ್ ಇಂಫಾಲದ ಯಾಂಗ್ಬಿ ಗಾರ್ಡನ್‌ನಲ್ಲಿ ಗುಂಪಿನಿಂದ ಬರ್ಬರವಾಗಿ ಥಳಿಸಲ್ಪಟ್ಟ ಮೂವರು ಮಣಿಪುರಿ ಮುಸ್ಲಿಮ್ ಯುವಕರ ಪೈಕಿ ಇಬ್ಬರು ಸಾವನ್ನಪ್ಪಿದ್ದು,ಇನ್ನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾನೆ. ಕಳೆದ ಗುರುವಾರ ಸಂಜೆ ಈ ಘಟನೆ ನಡೆದಿದ್ದು,ಈ ಬಗ್ಗೆ ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿ ಒಕ್ರಂ ಇಬೋಬಿ ಸಿಂಗ್ ಈವರೆಗೂ ತುಟಿಪಿಟಕ್ಕೆಂದಿಲ್ಲ.


ಮೂವರೂ ವಿದ್ಯಾರ್ಥಿಗಳಾಗಿದ್ದು,ಅವರು ಗಾರ್ಡನ್‌ನಿಂದ ಹೊರಕ್ಕೆ ಬರುತ್ತಿದ್ದಂತೆ ದಾಳಿಕೋರರ ಗುಂಪು ಅವರನ್ನು ನಿರ್ದಯವಾಗಿ ಥಳಿಸಿದೆ. ಗುಂಪಿನ ಕ್ರೌರ್ಯಕ್ಕೆ ಮೊಹಮ್ಮದ್ ಸದಾಮ್(23) ಮತ್ತು ಮೊಹಮ್ಮದ್ ಫಾರೂಕಿ(22) ಪ್ರಾಣಗಳನ್ನು ಕಳೆದುಕೊಂಡರೆ, ಮೊಹಮ್ಮದ್ ಜಾಬಿರ್(19) ತೀವ್ರವಾಗಿ ಗಾಯಗೊಂಡಿದ್ದ. ಮಾ.25ರಂದು ಇರಾಮ್ ಸಿಫಾಯಿಯಲ್ಲಿ ಆರು ಮುಸ್ಲಿಂ ಯುವಕರನ್ನು ಕ್ರೂರವಾಗಿ ಥಳಿಸಲಾಗಿತ್ತು. ಈ ವಿಷಯ ಹೆಚ್ಚಿನ ಮಾಧ್ಯಮಗಳಲ್ಲಿ ಪ್ರಕಟವೇ ಆಗಿರಲಿಲ್ಲ.

ಪ್ರಸ್ತುತ ಪ್ರಕರಣದಲ್ಲಿ ಈ ಹುಡುಗರು ಕೋಮು ದಾಳಿಯ ಗುರಿಗಳಾಗಿದ್ದರೇ ಅಥವಾ ತಮ್ಮ ಪಂಗಾಲ ಸಮುದಾಯಕ್ಕೆ ಅಂಟಿರುವ ಅಪರಾಧಿಗಳೆಂಬ ಕಳಂಕಕ್ಕೆ ಬೆಲೆ ತೆತ್ತಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ. ಗುಂಪು ಈ ಯುವಕರನ್ನು ಬೈಕ್ ಕಳ್ಳರೆಂದು ಆರೋಪಿಸಿ ಹಲ್ಲೆ ನಡೆಸಿತ್ತು ಎಂದು ವರದಿಗಳು ಹೇಳಿವೆ.  ಈ ಘಟನೆಗೂ ಕೋಮುವಾದ ಅಥವಾ ಗೋಮಾಂಸ ಭಕ್ಷಣೆಗೂ ಸಂಬಂಧವಿಲ್ಲ ಅಥವಾ ಇದ್ದರೂ ಅಲ್ಪವೇ ಸಂಬಂಧವಿದ್ದಿರಬಹುದು. ಬೈಕ್ ಕಳ್ಳರು ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದರೆ ಆಗಲೂ ಹೀಗೆಯೇ ಅವರನ್ನು ಥಳಿಸಲಾಗುತ್ತಿತ್ತೇ ಎನ್ನುವುದು ನನಗೆ ಖಚಿತವಿಲ್ಲ, ಹೀಗಾಗಿ ನನ್ನ ಹೇಳಿಕೆಯಲ್ಲಿ ‘ಅಲ್ಪ’ ಶಬ್ದವನ್ನು ಬಳಸಿದ್ದೇನೆ. ಪಂಗಾಲ ಸಮುದಾಯದವರನ್ನು ಅಪರಾಧಿಗಳೆಂದು ನೋಡುವುದು ನಿಲ್ಲಬೇಕು. ಆದರೆ ಇದೇ ವೇಳೆ ಇನ್ನೊಂದು ಗುಂಪು ತನ್ನ ಸೋದರ ಸಂಬಂಧಿಯನ್ನು ಹತ್ಯೆ ಮಾಡಿದ್ದ ಆರೋಪಿಯ ಮನೆಯನ್ನು ಧ್ವಂಸಗೊಳಿಸಿದೆ. ಇಲ್ಲಿ ಆರೋಪಿ ಬೇರೊಂದು ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಮಣಿಪುರ ಈಗಲೂ ಹಲವಾರು ವಿಷಯಗಳಲ್ಲಿ ಅನಾಗರಿಕವಾಗಿಯೇ ಉಳಿದಿದೆ ಎಂದು ಫ್ರೀ ಪ್ರೆಸ್‌ನ ಸಂಪಾದಕ ಪ್ರದೀಪ ಫಾಂಜೌಬಮ್ ಹೇಳಿದರು.

ಆದರೆ ಈ ಘಟನೆಯ ಬಗ್ಗೆ ಎರಡು ಅಭಿಪ್ರಾಯಗಳು ಕೇಳಿ ಬರುತ್ತಿವೆ. ಒಂದು ಗುಂಪು ಇದು ಕೋಮು ದಾಳಿ ಎಂದು ಹೇಳಿದರೆ,ಆ ಸಾಧ್ಯತೆಯಿಲ್ಲ ಎಂದು ಇನ್ನೊಂದು ಗುಂಪು ಹೇಳುತ್ತಿದೆ. ತನ್ಮಧ್ಯೆ ಘಟನೆಯ ಕುರಿತಂತೆ ಸರಕಾರವು ನಿಷ್ಕ್ರಿಯವಾಗಿರುವುದನ್ನು ಮಾಧ್ಯಮಗಳು ಪ್ರಶ್ನಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X