ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ವೃದ್ಧ ಗಂಭೀರ
ಕಾಸರಗೋಡು, ಎ.12: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದು ವೃದ್ಧರೋರ್ವರು ಗಂಭೀರ ಗಾಯಗೊಂಡ ಘಟನೆ ಕಾಸರಗೋಡು ಹೊಸ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ತಲಶ್ಶೇರಿ ಪಿಣರಾಯಿಯ ಬಾಲನ್ (70) ಗಾಯಗೊಂಡವರು. ಕಾಸರಗೋಡಿನ ಹೊಸ ಬಸ್ ನಿಲ್ದಾಣದ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲನ್ರಿಗೆ ನಗರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಸರಗೋಡು ಹೊಸ ಬಸ್ ನಿಲ್ದಾಣದ ಅವ್ಯವಸ್ಥೆಯೇ ಘಟನೆಗೆ ಕಾರಣವಾಗಿದೆ. ಬಸ್ ನಿಲ್ದಾಣದಲ್ಲಿನ ಹೊಂಡಗಳು ಬಸ್ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗಿ ಕಾಡುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.
Next Story