Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಚಿಲಿಯಲ್ಲಿ ಭೂಕಂಪ- ನೋವಿನ ಸಂಕಥನಗಳು

ಚಿಲಿಯಲ್ಲಿ ಭೂಕಂಪ- ನೋವಿನ ಸಂಕಥನಗಳು

-ಕಾರುಣ್ಯಾ-ಕಾರುಣ್ಯಾ13 April 2016 12:07 AM IST
share
ಚಿಲಿಯಲ್ಲಿ ಭೂಕಂಪ- ನೋವಿನ ಸಂಕಥನಗಳು

  ‘‘ಒಂದು ಕಾಲಕ್ಕೆ ಕುತೂಹಲ ಬೆರಗು ಹಾಸ್ಯಗಳ ನೆಲೆಗಳಾಗಿದ್ದ ಕತೆಗಳು ಇಂದಿನ ಜಾಗತಿಕ ಸಂದರ್ಭದಲ್ಲಿ ವಿಷಾದದ ನೋವಿನ ಸಂಕಥನಗಳಾಗಿ ರೂಪಾಂತರಗೊಳ್ಳುತ್ತವೆ. ಬದುಕಿನ ಲೌಕಿಕ ಸಂದರ್ಭದಲ್ಲಿ ಎದುರಾಗುವ ಘಟನೆಯೊಂದು ಸೂಕ್ಷ್ಮವಾಗಿ ಅವಲೋಕನ ಮಾಡುತ್ತಾ ಹೋದ ಹಾಗೆಲ್ಲ ಅದರೊಳಗಿನಿಂದ ಸಮಕಾಲೀನ ವಿಭಿನ್ನ ಧ್ವನಿಗಳು ಹೊರ ಹೊಮ್ಮಿ ಗಂಭೀರ ಚಿಂತನೆಯ ದಾರ್ಶನಿಕತೆಯ ನೋಟಗಳು ದೊರೆಯುತ್ತವೆ’’ ಲೇಖಕ ಬಿ. ಎ. ವಿವೇಕ ರೈ ಅವರ ಮೇಲಿನ ಮಾತುಗಳು ‘‘ಚಿಲಿಯಲ್ಲಿ ಭೂಕಂಪ-ಹದಿನೆಂಟು ಕಥನಗಳು’’ ಕೃತಿಯ ಮೂಲದ್ರವ್ಯವಾಗಿ ನಮ್ಮನ್ನು ತಟ್ಟುತ್ತವೆ. ‘ಚಿಲಿಯಲ್ಲಿ ಭೂಕಂಪ’ ಜರ್ಮನ್ ಕತೆಗಾರ ಹೀನ್ರಿಶ್ ಕ್ಲೆಯಿಸ್ಟ್‌ನ ಕತೆ. ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಬಂಧಗಳು, ಜಗತ್ತನ್ನು ಪೊರೆಯುವ ಪ್ರೀತಿಯನ್ನು ಧರ್ಮದ ಕ್ರೌರ್ಯ ತನ್ನ ಉಗುರುಗಳಿಂದ ಸೀಳುವ ಹೊತ್ತಿನಲ್ಲಿ ಅದಕ್ಕೆ ಪ್ರಬಲ ಪ್ರತಿರೋಧವೋ ಎಂಬಂತೆ ಸಂಭವಿಸುವ ಭೂಕಂಪ ಈ ಕತೆಯ ಪ್ರಧಾನ ರೂಪಕವಾಗಿದೆ.

ಮನುಷ್ಯ ಸಂಬಂಧಗಳು ನೆಲಕಚ್ಚುವ ಸಂದರ್ಭವನ್ನು ಈ ಕತೆ ಹಿಡಿದಿಡುತ್ತದೆ. ಇಂತಹ ಹೃದಯಸ್ಪರ್ಶಿ ಹದಿನೆಂಟು ಕಥನಗಳನ್ನು ವಿವೇಕ ರೈ ಅವರು ಇಲ್ಲಿ ಸಂಗ್ರಹಿಸಿ ನೀಡಿದ್ದಾರೆ. ಹೆರ್ತಾ ಮುಲ್ಲರ್‌ಳ ‘ಬೀದಿ ಗುಡಿಸುವ ಜಾಡಮಾಲಿಗಳು’ ಇಂತಹದೇ ವಿಷಾದವನ್ನು ಹೊದ್ದುಕೊಂಡ ಇನ್ನೊಂದು ಕತೆ. ವೈವಿಧ್ಯಮಯ ಕಥನದ ಮಾದರಿಗಳನ್ನು ಇಲ್ಲಿ ಲೇಖಕರು ಮುಖಾಮುಖಿಯಾಗಿಸಿದ್ದಾರೆ. ಈ ಕಾರಣದಿಂದಲೇ ಅವರು ತೆನಾಲಿರಾಮನ ಬದನೆ ಕದ್ದ ಕತೆ, ಗುಬ್ಬಚ್ಚಿ ಕತೆ, ಹಿಮಗೌರಿ ಮತ್ತು ಏಳು ಜನ ಕುಳ್ಳರಿಗೆ ಸಂಬಂಧಿಸಿದ ಕತೆಗಳನ್ನೂ ಸೇರಿಸಿದ್ದಾರೆ. ಇಲ್ಲಿರುವ ಕತೆಗಳು ದೇಶ, ಧರ್ಮ, ಭಾಷೆಯ ಗಡಿಗಳನ್ನು ಅಳಿಸಿ, ನಮ್ಮನ್ನು ಪರಸ್ಪರ ಬೆಸೆಯುವಂತೆ ಮಾಡುತ್ತದೆ. ಅಕ್ಕೆಸಿರಿ ಸಾಂಸ್ಕೃತಿಕ ಕೇಂದ್ರ ಮಂಗಳೂರು ಇವರು ಹೊರ ತಂದಿರುವ ಈ ಕೃತಿಯ ಮುಖಬೆಲೆ 75 ರೂ. ಆಸಕ್ತರು 0824 2443002 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X