Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ನಗರದಲ್ಲಿ 41 ಡಿಗ್ರಿ...

ಶಿವಮೊಗ್ಗ ನಗರದಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ

ಹೆಚ್ಚುತ್ತಿರುವ ಬಿಸಿಲ ತಾಪಕ್ಕೆ ನಾಗರಿಕರು ತತ್ತರ

ವಾರ್ತಾಭಾರತಿವಾರ್ತಾಭಾರತಿ13 April 2016 9:56 PM IST
share

 ಶಿವಮೊಗ್ಗ,ಎ.13:‘ಮಲೆನಾಡ ನಗರಿ’ ಖ್ಯಾತಿಯ ಶಿವಮೊಗ್ಗ ಇದೀಗ ಅಕ್ಷರಶಃ ಕಾದ ಕಾವಲಿ ಯಂತಾಗಿದೆ. ರಣ ಬಿಸಿಲಿನ ತಾಪಕ್ಕೆ ಮಲೆನಾಡಿಗರು ತತ್ತರಿಸಿ ಹೋಗಿದ್ದಾರೆ. ಪ್ರಸ್ತುತ ನಗರದಲ್ಲಿ ಮನೆ ಮಾಡಿರುವ ಬಿಸಿಲ ವಾತಾವರಣ ಬಯಲು ಸೀಮೆ ಪ್ರದೇಶಗಳ ಅನುಭವ ಉಂಟು ಮಾಡುತ್ತಿದ್ದು, ಬಿಸಿಲ ಝಳಕ್ಕೆ ನಾಗರಿಕರು ಏದುಸಿರು ಬಿಡುವಂತಾಗಿದೆ. ಹವಾಮಾನ ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ, ಬುಧವಾರ ನಗರದಲ್ಲಿ ದಾಖಲಾದ ಉಷ್ಣಾಂಶದ ಪ್ರಮಾಣ 41.50 ಡಿಗ್ರಿ ಸೆಲ್ಸಿಯಸ್! ಕಳೆದ ಕೆಲ ದಿನಗಳಿಂದ ಇದೇ ಪ್ರಮಾಣದ ಉಷ್ಣಾಂಶ ನಗರದಲ್ಲಿ ದಾಖಲಾಗುತ್ತಿದೆ. ಮತ್ತೊಂದೆಡೆ ದಿನದಿಂದ ದಿನಕ್ಕೆ ಬಿಸಿಲ ತಾಪ ಏರುಗತಿಯಲ್ಲಿ ಸಾಗುತ್ತಿದೆ. ಇದು ನಾಗರಿಕರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

 ಇತ್ತೀಚಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಪ್ರಸ್ತುತ ಬೇಸಿಗೆ ಶಿವಮೊಗ್ಗ ನಾಗರಿಕರ ಪಾಲಿಗೆ ಕರಾಳವಾಗಿ ಪರಿಣಮಿಸುತ್ತಿದೆ. ದಾಖಲೆಯ ಮಟ್ಟದಲ್ಲಿ ತಾಪಮಾನ ದಾಖಲಾಗುತ್ತಿದೆ. ಬಿಸಿಲ ತಾಪ ಜೋರಾಗಿದ್ದು, ಇದು ನಾಗರಿಕರ ನೆಮ್ಮದಿ ಕೆಡುವುದರ ಜೊತೆಗೆ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುವಂತೆ ಮಾಡಿದೆ. ಈ ಬಾರಿಯ ಬೇಸಿಗೆಯಲ್ಲಿ ಕಂಡುಬರುತ್ತಿರುವ ಬಿಸಿಲು ಅನುಭವ ಈ ಹಿಂದಿನ ವರ್ಷಗಳಲ್ಲಿ ನೋಡಿರಲಿಲ್ಲ. ಮಧ್ಯಾಹ್ನದ ವೇಳೆ ಮನೆಯಲ್ಲಿರಲು ಆಗುತ್ತಿಲ್ಲ, ಹೊರಬರಲು ಸಾಧ್ಯವಾಗುತ್ತಿಲ್ಲ. ಬೇಗೆಯ ಅನುಭವ ಉಂಟಾಗುತ್ತಿದೆ. ಮನೆಯಲ್ಲಿರುವ ವಯೋವೃದ್ಧರು, ಮಕ್ಕಳ ಪಾಡಂತೂ ಹೇಳತೀರದಾಗಿದೆ. ನಾನಾ ರೀತಿಯ ಅನಾರೋಗ್ಯ ಸಮಸ್ಯೆಗಳು ಕಾಣಿಸಿ ಕೊಳ್ಳುತ್ತಿದೆ ಎಂದು ವಿನೋಬ ನಗರ ಬಡಾವಣೆಯ ನಿವಾಸಿ ಮಂಜುನಾಥ್ ಎಂಬವರು ಅಭಿಪ್ರಾಯಪಡುತ್ತಾರೆ. ವಿರಳ: ಮಧ್ಯಾಹ್ನದ ವೇಳೆ ನಗರದ ಡಾಂಬರು ರಸ್ತೆಗಳಲ್ಲಿ ಬರಿಗಾಲಲ್ಲಿ ಓಡಾಡಲು ಆಗದ ಮಟ್ಟಕ್ಕೆ ಬಿಸಿಲ ತಾಪವಿರುತ್ತದೆ. ನೆತ್ತಿ ಸುಡುವ ರೀತಿಯಲ್ಲಿ ಬಿಸಿಲ ಝಳ ಕಂಡುಬರುತ್ತದೆ. ಬಿಸಿಲ ತಾಪದ ಕಾರಣದಿಂದಲೇ ಮಧ್ಯಾಹ್ನದ ವೇಳೆ ನಗರದ ಪ್ರಮುಖ ರಸ್ತೆಗಳಲ್ಲಿ ಜನ-ವಾಹನ ಸಂಚಾರ ವಿರಳವಾಗಿರುವುದು ಕಂಡುಬರುತ್ತಿದೆ. ವ್ಯಾಪಾರ-ವಹಿವಾಟು ಕೂಡ ಕಡಿಮೆಯಿರುತ್ತದೆ. ಮುಂದಿನ ದಿನಗಳಲ್ಲಿ ನಗರದ ತಾಪಮಾನದ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆಯ ಮೂಲಗಳು ಹೇಳುತ್ತಿದ್ದು, ಇದು ನಗರದ ನಾಗರಿಕರ ನಿದ್ದೆಗೆಡುವಂತೆ ಮಾಡಿದೆ. ಒಟ್ಟಾರೆ ಪ್ರಸ್ತುತ ಬೇಸಿಗೆಯ ಬಿಸಿಲು ಮಲೆನಾಡಿಗರನ್ನು ಇನ್ನಿಲ್ಲದಂತೆ ಕಾಡುತ್ತಿರುವುದಂತೂ ಸತ್ಯವಾಗಿದೆ.

*ಮಲೆನಾಡ ಪ್ರದೇಶಗಳಲ್ಲಿಯೂ ಕೆಂಡದಂತ ಬಿಸಿಲು

ಪಶ್ಚಿಮಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿಯೂ ಪ್ರಸ್ತುತ ವರ್ಷ ಬಿರು ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ತಾಪಮಾನದ ಕಾರಣದಿಂದ ಈ ಪ್ರದೇಶಗಳ ಕೆರೆಕಟ್ಟೆಗಳು ಬರಿದಾಗುತ್ತಿವೆ. ಅಂತರ್ಜಲದ ಪ್ರಮಾಣ ಕುಸಿಯುತ್ತಿದೆ. ಇದರಿಂದ ಈ ತಾಲೂಕುಗಳ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಆತಂಕ ಉಂಟಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X