Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಯಾನ್ ಬರ್ನಾಡಿನೊ ಉಗ್ರರ ಐಫೋನ್...

ಸ್ಯಾನ್ ಬರ್ನಾಡಿನೊ ಉಗ್ರರ ಐಫೋನ್ ತೆರೆದದ್ದು ಹ್ಯಾಕರ್‌ಗಳು

ವಾರ್ತಾಭಾರತಿವಾರ್ತಾಭಾರತಿ13 April 2016 11:31 PM IST
share
ಸ್ಯಾನ್ ಬರ್ನಾಡಿನೊ ಉಗ್ರರ ಐಫೋನ್ ತೆರೆದದ್ದು ಹ್ಯಾಕರ್‌ಗಳು

ವಾಶಿಂಗ್ಟನ್, ಎ. 13: ಐಫೋನ್ ಸಾಫ್ಟ್‌ವೇರ್‌ನಲ್ಲಿನ ಕನಿಷ್ಠ ಒಂದು ದೋಷವನ್ನು ಗುರುತಿಸಿದ ವೃತ್ತಿಪರ ಹ್ಯಾಕರ್‌ಗಳು, ಸ್ಯಾನ್ ಬರ್ನಾಡಿನೊ ದಾಳಿಕೋರ ಬಳಸುತ್ತಿದ್ದ ಐಫೋನ್ ತೆರೆಯುವಲ್ಲಿ ಎಫ್‌ಬಿಐಗೆ ನೆರವು ನೀಡಿದರು ಎಂದು ‘ವಾಶಿಂಗ್ಟನ್ ಪೋಸ್ಟ್’ ಮಂಗಳವಾರ ವರದಿ ಮಾಡಿದೆ.
ಈ ಹ್ಯಾಕರ್‌ಗಳ ಸೇವೆಗಾಗಿ ಅವರಿಗೆ ಹಣ ನೀಡಲಾಗಿದೆ ಎಂದು ಪ್ರಕರಣದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳನ್ನು ಉಲ್ಲೇಖಿಸಿ ಪೋಸ್ಟ್ ಹೇಳಿದೆ.
ಸಾಫ್ಟ್‌ವೇರ್‌ನಲ್ಲಿನ ಲೋಪವನ್ನು ಬಳಸಿಕೊಂಡು ಹ್ಯಾಕರ್‌ಗಳು ಹಾರ್ಡ್‌ವೇರೊಂದನ್ನು ರೂಪಿಸಿದರು ಹಾಗೂ ಇದು ಐಫೋನ್‌ನ ನಾಲ್ಕು ಅಂಕಿಯ ವೈಯಕ್ತಿಕ ಗುರುತು ಸಂಖ್ಯೆಯನ್ನು ನಿವಾರಿಸಿಕೊಂಡು ಫೋನ್ ತೆರೆಯಲು ಅಧಿಕಾರಿಗಳಿಗೆ ಸಹಾಯ ಮಾಡಿತು ಹಾಗೂ ಈ ಪ್ರಕ್ರಿಯೆಯಲ್ಲಿ ಫೋನ್‌ನಲ್ಲಿರುವ ಎಲ್ಲ ಮಾಹಿತಿಯನ್ನು ಅಳಿಸಿಹಾಕುವ ಕ್ರಿಯೆಯೊಂದು ಚಾಲನೆಗೊಳ್ಳದಂತೆ ಅದುಮಿಡಲು ನೆರವಾಯಿತು.
ನಾಲ್ಕು ಅಂಕಿಗಳ ಪಿನ್ ಸಂಖ್ಯೆಯನ್ನು ಭೇದಿಸುವುದು ಎಫ್‌ಬಿಐಗೆ ಸಮಸ್ಯೆಯಾಗಿರಲಿಲ್ಲ. ಆದರೆ, ಈ ಪ್ರಕ್ರಿಯೆಯಲ್ಲಿ, 10 ಬಾರಿ ತಪ್ಪು ಪಿನ್ ಸಂಖ್ಯೆಯನ್ನು ಒತ್ತಿದರೆ ಫೋನ್‌ನಲ್ಲಿರುವ ಎಲ್ಲ ಮಾಹಿತಿಗಳನ್ನು ಅಳಿಸಿಹಾಕುವಂಥ ಕ್ರಿಯೆಯೊಂದು ಚಾಲನೆಗೊಳ್ಳುತ್ತದೆ. ಆ ಕ್ರಿಯೆಯನ್ನು ಅದುಮಿಡುವುದು ಎಫ್‌ಬಿಐಗೆ ಸಮಸ್ಯೆಯಾಗಿತ್ತು ಎಂದು ಪತ್ರಿಕೆ ಹೇಳಿದೆ.
ಅಮೆರಿಕದ ಸ್ಯಾನ್ ಬರ್ನಾಡಿನೊದಲ್ಲಿ ಕಳೆದ ವರ್ಷದ ಡಿಸೆಂಬರ್ 2ರಂದು ಸಯ್ಯದ್ ಫಾರೂಕ್ ಮತ್ತು ಆತನ ಹೆಂಡತಿ ತಶ್ಫೀನ್ ಮಲಿಕ್ ದಾಳಿ ನಡೆಸಿ 14 ಮಂದಿಯನ್ನು ಹತ್ಯೆ ಮಾಡಿದ್ದರು. ಬಳಿಕ ಇಬ್ಬರೂ ಪೊಲೀಸರು ಹಾರಿಸಿದ ಗುಂಡಿನಿಂದ ಪ್ರಾಣ ಕಳೆದುಕೊಂಡಿದ್ದರು. ಈ ಜೋಡಿಯದ್ದೆಂದು ಹೇಳಲಾದ ಇತರ ಎರಡು ಫೋನ್‌ಗಳು ದಾಳಿಯ ಬಳಿಕ ನಾಶ ಪಡಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.
ಖಾಸಗಿತನದ ಉಲ್ಲಂಘನೆಯಾಗುತ್ತದೆ ಎಂದು ಹೇಳಿ ಉಗ್ರರ ಐಫೋನನ್ನು ತೆರೆಯಲು ನಿರ್ಮಾಪಕ ಆ್ಯಪಲ್ ಕಂಪೆನಿ ನಿರಾಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X