Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದಿ ಪಕ್ಷಗಳಿಗೆ ಅಂಬೇಡ್ಕರ್...

ಕೋಮುವಾದಿ ಪಕ್ಷಗಳಿಗೆ ಅಂಬೇಡ್ಕರ್ ಜನ್ಮದಿನ ಆಚರಿಸುವ ಹಕ್ಕಿಲ್ಲ: ಎನ್.ಮಹೇಶ್

ವಾರ್ತಾಭಾರತಿವಾರ್ತಾಭಾರತಿ14 April 2016 10:26 PM IST
share
ಕೋಮುವಾದಿ ಪಕ್ಷಗಳಿಗೆ ಅಂಬೇಡ್ಕರ್ ಜನ್ಮದಿನ ಆಚರಿಸುವ ಹಕ್ಕಿಲ್ಲ: ಎನ್.ಮಹೇಶ್

ಮೂಡಿಗೆರೆ, ಎ.14: ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಳ್ಳದ ಆರೆಸ್ಸೆಸ್ ಪ್ರಾಯೋಜಕತ್ವದ ಕೋಮುವಾದಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮಹಾನ್ ಮಾನವತಾವಾದಿ ಡಾ.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲು ನೈತಿಕ ಹಕ್ಕಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಅಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ.

ಅವರು ಜೇಸಿ ಭವನದಲ್ಲಿ ತಾಲೂಕು ಬಿಎಸ್ಪಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳೂ ಸಂವಿಧಾನವನ್ನೇ ಬದಿಗಿರಿಸಿ ಚುನಾವಣೆ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುವ ಮೂಲಕ ಅಂಬೇಡ್ಕರ್ ಸಿದ್ಧಾಂತವನ್ನು ಹೈಜಾಕ್ ಮಾಡುತ್ತಿವೆ. ಹಣ ಹೆಂಡ ಹಂಚಿ ಅಧಿಕಾರಕ್ಕೂ ಬರುತ್ತಿದೆ. ಮೊಸಳೆ ಕಣ್ಣೀರು ಸುರಿಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಿದಂತೆ ನಾಟಕವಾಡಿ, ಅಂಬೇಡ್ಕರ್ ಭಾವಚಿತ್ರವನ್ನು ಮಾರಾಟ ಮಾಡಲು ಹೊರಟಿದೆ ಎಂದು ಕಿಡಿಕಾರಿದರು. ನರೇಂದ್ರ ಮೋದಿ ಅವರು ಅಂಬೇಡ್ಕರ್ ಸ್ಮಾರಕ ಹಾಗೂ ಯಾತ್ರಾಸ್ಥಳವನ್ನು ನಿರ್ಮಿಸುವುದಾಗಿ ಪದೇಪದೇ ಹೇಳಿಕೆ ಕೊಡುತ್ತಾ, ಅಂಬೇಡ್ಕರ್‌ವಾದಿ ಓಟ್‌ಬ್ಯಾಂಕ್ ಸೃಷ್ಟಿಸುತ್ತಿದ್ದಾರೆ. ನಿಜವಾದ ಸ್ಮಾರಕ ಹಾಗೂ ಯಾತ್ರಾಸ್ಥಳವನ್ನು ಪ್ರಾರಂಭಿಸಿರುವುದು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮಾಯಾವತಿಯವರು. ಒಂದು ಸಾವಿರ ಎಕರೆ ಭೂಮಿಯಲ್ಲಿ ಇಡೀ ವಿಶ್ವವೇ ಬೆರಗಾಗುವಂತಹ ಸ್ಮಾರಕ ಹಾಗೂ ಯಾತ್ರಾಸ್ಥಳವನ್ನು ನಿರ್ಮಿಸಿರುವುದು ನರೇಂದ್ರ ಮೋದಿಯವರು ಒಮ್ಮೆ ಹೋಗಿ ನೋಡಿಬರಲಿ ಎಂದು ಹೇಳಿದರು.

ಪ್ರಜಾಪ್ರಭುತ್ವ ಸ್ಥಾಪನೆಯಾಗಿ 68 ವರ್ಷಗಳು ಕಳೆದರೂ ದೇಶದಲ್ಲಿ ಶೇ.45ರಷ್ಟು ಬಡತನ ಬಾಕಿ ಉಳಿದಿರುವುದು ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಈ ಪಕ್ಷಗಳುೆ ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ರಾಜಕೀಯ ನಾಟಕವಾಗಿದೆ. ಈ ಪಕ್ಷಗಳಿಗೆ ರಾಜಕೀಯ ಶಿಕ್ಷಣದ ಅಗತ್ಯವಿದೆ. ಈ ಶಿಕ್ಷಣವನ್ನು ನೀಡಲು ಬಿಎಸ್ಪಿ ಬದ್ಧ ವಿದೆ ಎಂದರು.

800 ವರ್ಷಗಳು ಮೊಘಲರ ಆಳ್ವಿಕೆ 250 ವರ್ಷಗಳ ಬ್ರಿಟಿಷರ ಆಳ್ವಿಕೆ, ಅವರಿಗಿಂತ ಕೀಳುಮಟ್ಟದ ರಾಜಕೀಯ ನಾಟಕವಾಡುವ ಕಾಂಗ್ರೆಸ್ ಪಕ್ಷ 1885ರಲ್ಲಿ ಸ್ಥಾಪನೆಗೊಂಡು ತತ್ವ, ಸಿದ್ಧಾಂತವನ್ನು ಎಂದೂ ಕೂಡ ಉಳಿಸಿಕೊಳ್ಳದೆ 1984ರಲ್ಲಿ ಹುಟ್ಟಿಕೊಂಡ ಬಿಜೆಪಿ ಎಂಬ ಕೋಮುವಾದಿ ಪಕ್ಷಕ್ಕೂ ತಮಗೂ ಹೆಚ್ಚಿನ ವ್ಯತ್ಯಾಸವಿಲ್ಲವೆಂದು ತೋರಿಸಿಕೊಟ್ಟ ಕಾಂಗ್ರೆಸ್ ಇಂದಿಗೂ ಉದ್ಧಾರವಾಗಿಲ್ಲ ಎಂದು ಹೇಳಿದರು. ಪ್ರಾರಂಭದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬಕ್ಕಿ ಮಂಜುನಾಥ್ ತಂಡದ ಅಂಬೇಡ್ಕರ್ ಕುರಿತ ಹಾಡು ನೆರೆದಿದ್ದವರನ್ನು ರಂಜಿಸಿತು. ಕ್ಷೇತ್ರ ಸಮಿತಿ ಅಧ್ಯಕ್ಷ ರವೂಫ್‌ಖಾನ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಲೋಕವಳ್ಳಿ ರಮೇಶ್, ಟಿ.ಕೆ.ಬಸವರಾಜ್, ಯು.ಬಿ.ಮಂಜಯ್ಯ, ವಕೀಲ ಪರಮೇಶ್, ಬೆಟ್ಟಗೆರೆ ಶಂಕರ್, ಕೆ.ರಾಮು, ಪಿ.ಕೆ.ಮಂಜುನಾಥ್, ಬಣಕಲ್ ಮುಹಮ್ಮದ್ ಅಲಿ, ಉದುಸೆ ನಾಗೇಶ್, ರೈತ ಸಂಘದ ಎಂ.ಮಂಜುನಾಥ್‌ಗೌಡ, ಮರಗುಂದ ಪ್ರಸನ್ನ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X