ಸಮಾಜ ಕಲ್ಯಾಣ ಇಲಾಖೆಯಿಂದ ಗುರುವಾರ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜನ್ಮ ದಿನಾಚರಣೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಾಮರಾಜನಗರ ಜಿಲ್ಲೆಯ ನಿವೃತ್ತ ಇಂಜಿನಿಯರ್ ಡಾ.ಚಿನ್ನಸ್ವಾಮಿ ಎಸ್.ಮಾಂಬಳ್ಳಿ ಅವರಿಗೆ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಐದು ಲಕ್ಷ ರೂ. ನಗದು ಹಾಗೂ ಬಂಗಾರದ ಪದಕವನ್ನು ಒಳಗೊಂಡಿದೆ.