ಎಸೆಸೆಲ್ಸಿ, ಪಿಯುಸಿ ನಂತರ ಮುಂದೇನು?’
19ರಂದು ವಿದ್ಯಾರ್ಥಿ, ಪೋಷಕರಿಗೆ ಮಾರ್ಗದರ್ಶನ ಶಿಬಿರ
ಮಂಗಳೂರು, ಎ. 13: ತೊಕ್ಕೊಟ್ಟಿನ ಹೆಲ್ಪ್ ಇಂಡಿಯಾ ಫೌಂಡೇಶನ್ ವತಿಯಿಂದ ಎಪ್ರಿಲ್ 19ರಂದು ಬೆಳಗ್ಗೆ 9 ಗಂಟೆಗೆ ತೊಕ್ಕೊಟ್ಟು ಕಲ್ಲಾಪುವಿನ ಯುನಿಟಿ ಸಭಾಂಗಣದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು? ಎಂಬ ವಿಷಯದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಗರದ ಕೆರಿಯರ್ ಗೈಡೆನ್ಸ್ ಆ್ಯಂಡ್ ಇನ್ಫಾರ್ಮೇಶನ್ ಸೆಂಟರ್ನ ಸ್ಥಾಪಕಾಧ್ಯಕ್ಷ ಉಮರ್ ಯು.ಎಚ್. ಭಾಗವಹಿಸಲಿದ್ದಾರೆ. ಅತ್ಯುತ್ತಮ ಕೋರ್ಸ್ ನ್ನು ಆಯ್ಕೆ ಮಾಡಲು ಅನುಸರಿಸಬೇಕಾದ ಮಾನದಂಡಗಳು, ಎಸೆಸೆಲ್ಸಿ ಮತ್ತು ಪಿಯುಸಿ ನಂತರದ ಕಲಿಕೆಗೆ ಲಭ್ಯವಿರುವ ಕೋರ್ಸ್ಗಳು, ಉತ್ತಮ ಅಂಕ ಪಡೆಯುವ ಕೌಶಲ್ಯ, ಸರಕಾರಿ ಉದ್ಯೋಗ ಪಡೆಯಲು ಬರೆಯಬೇಕಾದ ಸ್ಪರ್ಧಾತ್ಮಕ ಪರೀಕ್ಷೆಗಳು, ಸರಕಾರ ಮತ್ತು ಸರಕಾರೇತರ ಸಂಸ್ಥೆಗಳಿಂದ ಸಿಗಬೇಕಾದ ವಿದ್ಯಾರ್ಥಿವೇತನಗಳು ಮೊದಲಾದ ವಿಷಯಗಳಿಗೆ ಸಂಬಂಧಿಸಿ ಮಾರ್ಗದರ್ಶನ ನಡೆಯಲಿದೆ ಎಂದು ಫೌಂಡೇಶನ್ನ ಪ್ರಕಟನೆ ತಿಳಿಸಿದೆ.
ಶಿಬಿರದಲ್ಲಿ ಪ್ರವೇಶ ಉಚಿತವಾಗಿದ್ದು, ಆಸಕ್ತರು ಎಪ್ರಿಲ್ 17ರೊಳಗೆ ಮುಖತಃ ಅಥವಾ ದೂರವಾಣಿ ಮೂಲಕ ಹೆಸರನ್ನು ನೋಂದಾಯಿಸಬಹುದು. ಹೆಸರು ನೋಂದಾವಣೆ ಅಥವಾ ಹೆಚ್ಚಿನ ಮಾಹಿತಿಗಾಗಿ 8050507800 ಅಥವಾ 8050587800 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ಕೋರಲಾಗಿದೆ.