Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸುಲ್ತಾನ್ ಅಝ್ಲಾನ್ ಷಾ ಕಪ್ ಹಾಕಿ...

ಸುಲ್ತಾನ್ ಅಝ್ಲಾನ್ ಷಾ ಕಪ್ ಹಾಕಿ ಟೂರ್ನಮೆಂಟ್‌ ; ಭಾರತ ಫೈನಲ್‌ಗೆ

ಮಲೇಷ್ಯಾ ವಿರುದ್ಧ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ15 April 2016 10:12 PM IST
share
ಸುಲ್ತಾನ್ ಅಝ್ಲಾನ್ ಷಾ ಕಪ್ ಹಾಕಿ ಟೂರ್ನಮೆಂಟ್‌ ; ಭಾರತ ಫೈನಲ್‌ಗೆ

ಇಪೊ, ಎ.15: ಇಲ್ಲಿ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಆತಿಥೇಯ ಮಲೇಷ್ಯಾವನ್ನು 6-1 ಅಂತರದಲ್ಲಿ ಮಣಿಸಿದ ಭಾರತ ಸುಲ್ತಾನ್ ಅಝ್ಲಾನ್ ಷಾ ಕಪ್ ಹಾಕಿ ಟೂರ್ನಮೆಂಟ್‌ನ ಫೈನಲ್ ಪ್ರವೇಶಿಸಿದೆ.
ಭಾರತ ಶನಿವಾರ ನಡೆಯಲಿರುವ ಫೈನಲ್‌ನಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯವನ್ನು ಎದುರಿಸಲಿದೆ.
ರಮಣದೀಪ್ ಸಿಂಗ್ ಎರಡು ಗೋಲು ದಾಖಲಿಸಿ ಭಾರತದ ಭರ್ಜರಿ ಗೆಲುವಿಗೆ ನೆರವಾದರು.
ಭಾರತಕ್ಕೆ ಫೈನಲ್ ತಲುಪಲು ಮಲೇಷ್ಯಾದ ವಿರುದ್ಧ ಗೆಲುವು ಅನಿವಾರ್ಯವಾಗಿತ್ತು. ಕಳೆದ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋತ ಹಿನ್ನೆಲೆಯಲ್ಲಿ ಒತ್ತಡಕ್ಕೆ ಸಿಲುಕಿದ್ದ ಭಾರತ ಈ ಪಂದ್ಯದಲ್ಲಿ ಅತ್ಯುತ್ತಮವಾಗಿ ಆಡಿ ಜಯ ದಾಖಲಿಸಿತು.
ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯ 6 ಪಂದ್ಯಗಳಲ್ಲಿ 18 ಅಂಕಗಳನ್ನು ಗಳಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಭಾರತ 12 ಅಂಕಗಳೊಂದಿಗೆ ಎರಡನೆ ಸ್ಥಾನದೊಂದಿಗೆದಿಗೆ ಫೈನಲ್ ತಲುಪಿತು. ನ್ಯೂಝಿಲೆಂಡ್ 11 ಅಂಕ ಪಡೆದು ಫೈನಲ್ ಅವಕಾಶದಿಂದ ವಂಚಿತಗೊಂಡಿತು.
ಆಸ್ಟ್ರೇಲಿಯ 8 ಬಾರಿಪ್ರಶಸ್ತಿ ಜಯಿಸಿದೆ. ಕಳೆದ ಬಾರಿ ಅದು ನ್ಯೂಝಿಲೆಂಡ್‌ಗೆ ಶರಣಾಗಿ 9ನೆ ಬಾರಿ ಪ್ರಶಸ್ತಿ ಗೆಲ್ಲುವ ಅವಕಾಶ ವಂಚಿತಗೊಂಡಿತ್ತು. ಭಾರತ ಕಂಚು ಪಡೆದಿತ್ತು. ಈ ಬಾರಿ ನ್ಯೂಝಿಲೆಂಡ್‌ಗೆ ಕಂಚು ದೊರಯಲಿದೆ.
ಇಂದು ನಡೆದ ಪಂದ್ಯದಲ್ಲಿ ಭಾರತ 2ನೆ ನಿಮಿಷದಲ್ಲಿ ಗೋಲು ಖಾತೆ ತೆರೆದಿತ್ತು. ತಂಡದ ಎಸ್.ವಿ.ಸುನೀಲ್ 2ನೆ ನಿಮಿಷದಲ್ಲಿ ಗೋಲು ಕಬಳಿಸಿ ಭಾರತಕ್ಕೆ 1-0 ಮುನ್ನಡೆ ದೊರಕಿಸಿಕೊಟ್ಟರು.
 7ನೆ ನಿಮಿಷದಲ್ಲಿ ಹರ್ಜಿತ್ ಸಿಂಗ್ ಗೋಲು ಜಮೆ ಮಾಡಿ 2-0 ಮುನ್ನಡೆಗೆ ನೆರವಾದರು. ರಮಣ್‌ದೀಪ್ ಸಿಂಗ್ 25 ಮತ್ತು 39ನೆ ನಿಮಿಷದಲ್ಲಿ ಸತತ ಎರಡು ಗೋಲುಗಳನ್ನು ತಂಡದ ಖಾತೆಗೆ ಜಮೆ ಮಾಡಿದರು. ದಾನಿಸ್‌  ಮುಜ್ತಬಾ 27ನೆ ನಿಮಿಷದಲ್ಲಿ ಮತ್ತು ತಲ್ವಿಂದರ್ ಸಿಂಗ್ 50ನೆ ನಿಮಿಷದಲ್ಲಿ ಗೋಲು ಗಳಿಸಿ ತಂಡದ ಭರ್ಜರಿ ಗೆಲುವಿಗೆ ನೆರವಾದರು.
 ಮಲೇಷ್ಯಾದ ಪರ ಶಾಯ್‌ರ್ಲಿ ಸಾಬಾಹ್ 46ನೆ ನಿಮಿಷದಲ್ಲಿ ಏಕೈಕ ಗೋಲು ಗಳಿಸಲಷ್ಟೇ ಶಕ್ತರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X