Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳಾ ಉದ್ಯಮಿಗಳಿಂದ ಆರ್ಥಿಕ ಪ್ರಗತಿ:...

ಮಹಿಳಾ ಉದ್ಯಮಿಗಳಿಂದ ಆರ್ಥಿಕ ಪ್ರಗತಿ: ರಿತೇಶ್‌ ಮೆಹ್ತಾ

ವಾರ್ತಾಭಾರತಿವಾರ್ತಾಭಾರತಿ15 April 2016 10:52 PM IST
share
ಮಹಿಳಾ ಉದ್ಯಮಿಗಳಿಂದ ಆರ್ಥಿಕ ಪ್ರಗತಿ: ರಿತೇಶ್‌ ಮೆಹ್ತಾ

ಬೆಂಗಳೂರು, ಎ.15: ಮಹಿಳಾ ಉದ್ಯಮಿ ಗಳು ಯಶಸ್ವಿಯಾದರೆ ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಸಾಧ್ಯ ಎಂದು ಭಾರತದಲ್ಲಿ ಫೇಸ್‌ಬುಕ್‌ನ ಆರ್ಥಿಕ ಪ್ರಗತಿ ಯ ಉಪಕ್ರಮಗಳ ವಿಭಾಗದ ಮುಖ್ಯಸ್ಥ ರಿತೇಶ್‌ಮೆಹ್ತಾ ಅಭಿಪ್ರಾಯಪಟ್ಟಿದ್ದಾರೆ.
ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿ ಸುವ ಉದ್ದೇಶದಿಂದ ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಫೇಸ್‌ಬುಕ್‌ನ ‘ಬೂಸ್ಟ್ ಯುವರ್ ಬಿಸಿನೆಸ್ ಫಾರ್ ವುಮೆನ್’ ಕಾರ್ಯಕ್ರಮ ವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಮುದಾಯದೊಳಗೆ ಬಂಡವಾಳ ಹೂಡಿಕೆ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿಯೂ ಮಹಿಳೆಯರು ಮುಂಚೂಣಿ ಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಯಮಕ್ಷೇತ್ರದಲ್ಲೂ ಮಹಿಳೆಯರು ಮತ್ತಷ್ಟು ಸಾಧನೆಗಳನ್ನು ಮಾಡಲು ಅನುಕೂಲವಾಗು ವಂತೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.

ಉತ್ತರಪ್ರದೇಶದಲ್ಲಿ ಆಯೋಜಿಸಲಾಗಿದ್ದ ಈ ಅಭಿಯಾನ ಮತ್ತು ಹಲವು ಕಾರ್ಯಕ್ರಮ ಗಳಡಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಸಣ್ಣ ವ್ಯಾಪಾರಿಗಳಿಗೆ ತರಬೇತಿ ನೀಡಿ ಯಶಸ್ವಿಯಾದ ಬೆನ್ನಲ್ಲೇ ಇದೀಗ ಬೆಂಗಳೂರಿ ನಲ್ಲೂ ಇದನ್ನು ಆರಂಭಿಸಲಾಗಿದೆ ಎಂದು ರಿತೇಶ್‌ಮೆಹ್ತಾ ತಿಳಿಸಿದರು.
ದೇಶದೆಲ್ಲೆಡೆ ಇರುವ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಅಭಿಯಾನದಲ್ಲಿ ಕಾರ್ಯಾಗಾರಗಳ ಸರಣಿ ಮೂಲಕ ಮಹತ್ವಾಕಾಂಕ್ಷೆ ಹೊಂದಿದ ಮತ್ತು ಈಗಾಗಲೇ ಉದ್ಯಮಿಗಳಾಗಿರುವ ಮಹಿಳೆಯರಿಗೆ ಹಲವು ವಿಧದ ತರಬೇತಿ, ಸಲಹೆ ಸೂಚನೆಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಜೊತೆಗೆ ಆನ್‌ಲೈನ್ ಸಂಪ ನ್ಮೂಲಗಳ ಮೂಲಕ ವ್ಯವಹಾರದ ಜ್ಞಾನ ವೃದ್ಧಿ, ಕೌಶಲ್ಯಾಭಿವೃದ್ಧಿ, ವ್ಯವಹಾರಗಳ ಕೊಂಡಿಗಳು, ವ್ಯವಹಾರ ಪ್ರಗತಿಗೆ ಅಗತ್ಯವಾದ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಯನ್ನೂ ನೀಡಲಾಗುತ್ತದೆ. ಉದ್ಯಮಿಗಳು, ನಾಗರಿಕ ಸೇವಾ ಸಂಘಗಳು ಮತ್ತು ಸಾರ್ವಜನಿಕ ವಲಯಗಳ ಸಹಯೋಗದಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ರಿತೇಶ್ ಮೆಹ್ತಾ ತಿಳಿಸಿದರು.

ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿರುವ ಮೂರು ದಶಲಕ್ಷಕ್ಕೂ ಅಧಿಕ ಅತಿಸಣ್ಣ ಉದ್ದಿಮೆಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಮಹಿಳಾ ಮಾಲಕತ್ವ ಹೊಂದಿವೆ. ಈ ಉದ್ದಿಮೆಗಳು ದೇಶದ ಕೈಗಾರಿಕಾ ಪ್ರಗತಿಯಲ್ಲಿ ಶೇ.3ರಷ್ಟು ಪಾಲನ್ನು ಹೊಂದಿವೆ. ಸುಮಾರು 8 ದಶಲಕ್ಷಕ್ಕೂ ಅಧಿಕ ಉದ್ಯೋಗವನ್ನು ನೀಡಿವೆ. ಜಾಗತಿಕ ಮಟ್ಟದಲ್ಲಿ ಸರಾಸರಿ ಶೇ.40ರಷ್ಟು ಮಹಿಳಾ ಕಾರ್ಮಿಕರಿದ್ದಾರೆ. ಭಾರತದಲ್ಲಿ ಇವರ ಪ್ರಮಾಣ ಶೇ.24ರಷ್ಟಿದೆ ಎಂದು ಅವರು ವಿವರಣೆ ನೀಡಿದರು.
ಜಾಗತಿಕವಾಗಿ 50 ದಶಲಕ್ಷ ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ ಸಂಬಂಧಿಸಿದ ಫೇಸ್‌ಬುಕ್ ಪೇಜ್‌ಗಳಿವೆ. ಕಳೆದ ನಾಲ್ಕು ವರ್ಷಗಳಲ್ಲಿ(2012-2015) ಭಾರತದಲ್ಲಿ ಹೊಸದಾಗಿ ಆರಂಭವಾದ ಮಹಿಳಾ ಉದ್ಯಮಗಳ ಕುರಿತಾದ ಫೇಸ್‌ಬುಕ್ ಪೇಜ್‌ಗಳ ಸಂಖ್ಯೆ 6 ಪಟ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಯೆಲ್ಲೊ ಅಂಬ್ರೆಲ್ಲಾ ಪ್ರೊಡಕ್ಷನ್ ಸಂಸ್ಥೆಯ ಮಾಲಕಿ ನೀಲ್ಮಾ ದಿಲೀಪನ್ ಸೇರಿದಂತೆ ಸುಮಾರು 350ಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X