Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯಲ್ಲಿ ಚೀನಾದ ಗುಪ್ತ ವೀಟೊ...

ವಿಶ್ವಸಂಸ್ಥೆಯಲ್ಲಿ ಚೀನಾದ ಗುಪ್ತ ವೀಟೊ ಪ್ರಯೋಗಕ್ಕೆ ಭಾರತ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 April 2016 11:45 PM IST
share
ವಿಶ್ವಸಂಸ್ಥೆಯಲ್ಲಿ ಚೀನಾದ ಗುಪ್ತ ವೀಟೊ ಪ್ರಯೋಗಕ್ಕೆ ಭಾರತ ಆಕ್ರೋಶ

ವಿಶ್ವಸಂಸ್ಥೆ, ಎ.15: ಪಾಕ್ ಮೂಲದ ಉಗ್ರಗಾಮಿ ಗುಂಪು ಜೈಶೆ ಮುಹಮ್ಮದ್‌ನ ವರಿಷ್ಠ ಮಸೂದ್ ಅಝರ್ ವಿರುದ್ಧ ನಿಷೇಧ ಹೇರಲು ವಿಶ್ವಸಂಸ್ಥೆಯಲ್ಲಿ ತಾನು ನಡೆಸಿದ ಪ್ರಯತ್ನಕ್ಕೆ ಅಡ್ಡಗಾಲು ಹಾಕಿದ ಚೀನಾವನ್ನು ಭಾರತ ಪರೋಕ್ಷವಾಗಿ ಟೀಕಿಸಿದೆ. ವಿಶ್ವಸಂಸ್ಥೆಯ ನಿರ್ಬಂಧಗಳ ಸಮಿತಿಯಲ್ಲಿ ‘ಗುಪ್ತ ವೀಟೊ’ ಮತದಾನ ಬಳಕೆಗೆ ಅದು ತೀವ್ರ ವಿರೋಧ ವ್ಯಕ್ತಪಡಿಸಿದೆ. ಭಯೋತ್ಪಾದಕರ ವಿರುದ್ಧ ನಿರ್ಬಂಧಗಳನ್ನು ಹೇರಬೇಕೆಂಬ ಮನವಿಯನ್ನು ಯಾವ ಕಾರಣಕ್ಕಾಗಿ ತಿರಸ್ಕರಿಸಲಾಯಿತೆಂಬುದಕ್ಕೆ ವಿಶ್ವಸಂಸ್ಥೆಯ ಸಾಮಾನ್ಯ ಸದಸ್ಯರಿಗೆ ಮಾಹಿತಿ ನೀಡಬೇಕೆಂದು ಅದು ಆಗ್ರಹಿಸಿದೆ.

ಅಲ್‌ಖಾಯಿದ, ತಾಲಿಬಾನ್ ಹಾಗೂ ಐಸಿಸ್ ವಿರುದ್ಧದ ವಿಶ್ವಸಂಸ್ಥೆಯ ನಿರ್ಬಂಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಪುನರ್‌ಪರಿಶೀಲಿಸುವ ಅಗತ್ಯವಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾದ ಸೈಯದ್ ಅಕ್ಬರ್ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಗುರುವಾರ ‘ಭಯೋತ್ಪಾದಕ ಕೃತ್ಯಗಳಿಂದಾಗಿ ಅಂತಾರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಧಕ್ಕೆ’ ಕುರಿತ ಮುಕ್ತ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಪಠಾಣ್‌ಕೋಟ್ ದಾಳಿ ಪ್ರಕರಣದ ಸೂತ್ರಧಾರಿಯೆನ್ನಲಾದ ಮಸೂದ್ ಅಝರ್‌ಗೆ ನಿಷೇಧ ವಿಧಿಸುವ ಭಾರತದ ಪ್ರಯತ್ನಕ್ಕೆ ಕಳೆದ ತಿಂಗಳು ಚೀನಾ ವಿಶ್ವಸಂಸ್ಥೆಯ ನಿರ್ಬಂಧಗಳ ಸಮಿತಿಯಲ್ಲಿ ವೀಟೊ ಪ್ರಯೋಗಿಸುವ ಮೂಲಕ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಸ್ತುತ ವಿಶ್ವಸಂಸ್ಥೆಯ ನಿರ್ಬಂಧಗಳ ಸಮಿತಿಯಲ್ಲಿ ತಲಾ 15 ಸದಸ್ಯರು ವೀಟೊ ಅಧಿಕಾರವನ್ನು ಹೊಂದಿದ್ದಾರೆದು ಹೇಳಿದರು. ಈ ಹದಿನೈದು ಮಂದಿ ಸದಸ್ಯರ ಹೊರತಾಗಿ, ವೀಟೊ ಪ್ರಯೋಗಿಸಿದವರು ಯಾರೆಂಬುದನ್ನು ವಿಶ್ವಸಂಸ್ಥೆಯ ಸಾಮಾನ್ಯ ಸದಸ್ಯರಿಗೆ ತಿಳಿಸದಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

‘‘ನಿರ್ಬಂಧಗಳ ಸಮಿತಿ ಸಭೆಯಲ್ಲಿ ಭಯೋತ್ಪಾದಕರನ್ನು ಪಟ್ಟಿ ಮಾಡುವ ಮನವಿಯನ್ನು ಯಾಕೆ ಪುರಸ್ಕರಿಸಲಿಲ್ಲ ವೆಂಬುದನ್ನು ವಿಶ್ವಸಂಸ್ಥೆಯ ಸಾಮಾನ್ಯ ಸದಸ್ಯರಿಗೆ ಔಪಚಾರಿಕವಾಗಿ ಮಾಹಿತಿಯನ್ನು ನೀಡಲಾಗುತ್ತಿಲ್ಲ.ಅಂತಾರಾಷ್ಟ್ರೀಯ ಸಮುದಾಯದ ಪರವಾಗಿ ಕಾರ್ಯಾಚರಿಸುವ ನಿರ್ಬಂಧಗಳ ಸಮಿತಿಗಳು ಪರಸ್ಪರ ವಿಶ್ವಾಸವನ್ನು ಸೃಷ್ಟಿಸಬೇಕೇ ಹೊರತು ಗುಪ್ತಮತದಾನವನ್ನು ಬಳಸಿಕೊಂಡು ನಿರ್ಭಯ ವಾತಾವರಣಕ್ಕೆ ಅಪಾಯವನ್ನು ತಂದೊಡ್ಡಬಾರದು ಎಂದು ಅಕ್ಬರುದ್ದೀನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X