Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ತವ್ಯಲೋಪ: ಇಂಜಿನಿಯರ್‌ಗಳಿಬ್ಬರ...

ಕರ್ತವ್ಯಲೋಪ: ಇಂಜಿನಿಯರ್‌ಗಳಿಬ್ಬರ ಅಮಾನತು

ವಾರ್ತಾಭಾರತಿವಾರ್ತಾಭಾರತಿ15 April 2016 11:53 PM IST
share

ಬೆಂಗಳೂರು, ಎ.15: ಬಿಬಿಎಂಪಿ ವ್ಯಾಪ್ತಿಯ ನಗರೋತ್ಥಾನ ಯೋಜನೆಯಡಿ ಪೂರ್ಣಗೊಂಡಿರುವ ಪಾದಚಾರಿ ಮಾರ್ಗದಲ್ಲಿ ಕಟ್ಟಡ ಸಾಮಗ್ರಿಗಳನ್ನು ತೆರವುಗೊಳಿಸದೆ ನಿರ್ಲಕ್ಷ ವಹಿಸಿರುವ ಇಂಜಿನಿಯರ್‌ಗಳಿಬ್ಬರನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅಮಾನತುಗೊಳಿಸಿದ್ದಾರೆ.
   
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ನಗರೋತ್ಥಾನ ಯೋಜನೆಯ ಕಾರ್ಯವೈಖರಿ ಮತ್ತು ಟೆಂಡರ್ ಶ್ಯೂರ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದ ಸಚಿವ ಜಾರ್ಜ್, ನಗರದಲ್ಲಿ ಪಾದಚಾರಿ ಮಾರ್ಗಗಳ ಕಳಪೆ ಕಾಮಗಾರಿ ಕಂಡು ಸಂಬಂಧಪಟ್ಟ ಇಂಜಿನಿಯರ್‌ಗಳನ್ನು ಅಮಾನತು ಪಡಿಸುವಂತೆ ಸ್ಥಳದಲ್ಲಿಯೇ ಆದೇಶ ನೀಡಿದರು. ಎ.ಈ.ಕೇಶವಮೂರ್ತಿ ಮತ್ತು ಎ.ದೇವರಾಜುಲು ಎಂಬ ಇಬ್ಬರು ಇಂಜಿನಿಯರ್‌ಗಳ ಗೈರುಹಾಜರನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕೂಡಲೇ ಮುಖ್ಯ ಇಂಜಿನಿಯರ್ ಗೋವಿಂದರಾಜು ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದರು. ಅದೇ ರೀತಿ, ಕೆ.ಜಿ.ಕೆಂಪೇಗೌಡ ರಸ್ತೆಯಲ್ಲಿ ಟೆಂಡರ್ ಶ್ಯೂರ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿದ ಜಾರ್ಜ್ ಈ ತಿಂಗಳ ಅಂತ್ಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ನಗರದ ಪ್ರಮುಖ ಭಾಗವಾಗಿರುವ ರೆಸಿಡೆನ್ಸಿ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದರೂ ಮತ್ತೆ ರಸ್ತೆಯನ್ನು ಅಗೆದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಟೆಂಡರ್ ಶ್ಯೂರ್ ಯೋಜನೆ ಪೂರ್ಣಗೊಂಡ ಬಳಿಕ ರಸ್ತೆಯನ್ನು ಅಗೆಯುವ ಕೆಲಸ ಏಕೆ ಎಂದು ಇಂಜಿನಿಯರ್‌ಗಳನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಸರ್.ಸಿ.ವಿ.ರಾಮನ್ ಜಂಕ್ಷನ್‌ನಲ್ಲಿ ರಸ್ತೆ ಕಾಮಗಾರಿ ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದರೂ ಬಿಬಿಎಂಪಿ ಇಂಜಿನಿಯರ್ ಗಳು ಮೇಲ್ವಿಚಾರಣೆ ನಡೆಸಬೇಕು. ಕಾಮಗಾರಿಗಳ ಬಗ್ಗೆ ನಿಗಾ ವಹಿಸಬೇಕೆಂದು ಇದೇ ವೇಳೆ ಜಾರ್ಜ್ ಸೂಚಿಸಿದರು.
 ಜಲಮಂಡಳಿ ಅಧಿಕಾರಿಗಳ ವರ್ತನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ ಸಚಿವ ಜಾರ್ಜ್, ಟೆಂಡರ್‌ಶ್ಯೂರ್ ಯೋಜನೆಯಡಿ ಅಭಿವೃದ್ಧಿ ಪಡಿಸಿದ ರಸ್ತೆಯನ್ನು ಅಗೆದು ಹಾಳು ಮಾಡಿದಿರಲ್ಲಾ ಇದಕ್ಕೆ ಯಾರು ಹೊಣೆ ಎಂದು ಖಾರವಾಗಿ ಪ್ರಶ್ನಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು ಈ ರಸ್ತೆ ಇನ್ನು ಬಿಬಿಎಂಪಿಗೆ ಹಸ್ತಾಂತರಗೊಂಡಿಲ್ಲ. ಹಾಗಾಗಿ ಇದರ ನಷ್ಟವನ್ನು ಗುತ್ತಿಗೆದಾರರೇ ಭರಿಸುತ್ತಾರೆ ಎಂದು ವಿವರ ನೀಡಿದರು.
ಪರಿಶೀಲನೆ ವೇಳೆಯಲ್ಲಿ ಪಾದಚಾರಿ ರಸ್ತೆ ಬಳಿಯಿದ್ದ ಕಸದ ರಾಶಿಯನ್ನು ಕಂಡು ಮೇಯರ್ ಮಂಜುನಾಥ ರೆಡ್ಡಿಯವರು ಕೂಡಲೇ ಕಸ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಇಂಜಿನಿಯರ್‌ಗಳಿಗೆ ಸೂಚಿಸಿದರು. ಕಟ್ಟಪ್ಪಣೆ ಮಾಡಿದರು.
 ಪಾಲಿಕೆ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಸೇರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X