Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬರದಿಂದ ಕಂಗೆಟ್ಟ ಭಾರತ

ಬರದಿಂದ ಕಂಗೆಟ್ಟ ಭಾರತ

ಪ್ರಮುಖ ಜಲಾಶಯಗಳಲ್ಲಿ ನೀರಿನ ತೀವ್ರ ಅಭಾವ

ವಾರ್ತಾಭಾರತಿವಾರ್ತಾಭಾರತಿ15 April 2016 11:58 PM IST
share
ಬರದಿಂದ ಕಂಗೆಟ್ಟ ಭಾರತ


  ಹೊಸದಿಲ್ಲಿ, ಎ.15: ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆಯೆಂದು ಕೇಂದ್ರ ಜಲ ಆಯೋಗ (ಸಿಡಬ್ಲುಸಿ) ಶುಕ್ರವಾರ ಬಿಡುಗಡೆಗೊಳಿಸಿದ ಸಾಪ್ತಾಹಿಕ ದತ್ತಾಂಶಗಳ ವರದಿಯು ಬಹಿರಂಗಪಡಿಸಿದೆ. ಜಲಸಂಪನ್ಮೂಲ ಸಚಿವಾಲಯದ ಅಧೀನದಲ್ಲಿರುವ ತಾಂತ್ರಿಕಸಂಸ್ಥೆಯಾದ ಸಿಡಬ್ಲುಸಿಯು ದೇಶದ ಪ್ರಮುಖ 91 ಜಲಾಶಯಗಳಲ್ಲಿ ನೀರಿನ ನೇರ ಸಂಗ್ರಹದ ಸ್ಥಿತಿಗತಿಯ ಬಗ್ಗೆ ನಿರಂತರ ಕಣ್ಗಾವಲಿರಿಸುತ್ತಿದೆ.
    ಈ ಜಲಾಶಯಗಳ ನೇರ ಸಂಗ್ರಹ ಸಾಮರ್ಥ್ಯವು 157.799 ಬಿಸಿಎಂ (ಬಿಲಿಯನ್ ಕ್ಯೂಬಿಕ್ ಮೀಟರ್) ಆಗಿದ್ದು, ಇದು ಭಾರತದಲ್ಲಿ ಇರುವ ಒಟ್ಟು ಜಲಾಶಯಗಳ ಸಂಗ್ರಹ ಸಾಮರ್ಥ್ಯದ ಶೇ.62ರಷ್ಟಾಗಿದೆ. ಜಲಾಶಯಗಳಲ್ಲಿ ಪ್ರವಾಹ ನಿಯಂತ್ರಣ, ವಿದ್ಯುತ್ ಉತ್ಪಾದನೆ, ನೌಕಾ ಸಂಚಾರಕ್ಕೆ ಬಳಕೆಯಾಗುವ ನೀರಿನ ಭಾಗವನ್ನು ನೇರ ಸಂಗ್ರಹ ಎಂದು ಹೇಳಲಾಗುತ್ತದೆ.
 
2016ರ ಎಪ್ರಿಲ್ 13ರಂದು ಬಿಡುಗಡೆಯಾದ ನೂತನ ವರದಿಯ ಪ್ರಕಾರ ಈ ಜಲಾಶಯಗಳಲ್ಲಿ ಲಭ್ಯವಿರುವನೀರಿನ ಸಂಗ್ರಹದ ಪ್ರಮಾಣವು 35.839 ಬಿಸಿಎಂಗಳಾಗಿದ್ದು, ಇದು ಈ ಜಲಾಶಯಗಳ ನೇರ ಸಂಗ್ರಹ ಸಾಮರ್ಥ್ಯದ ಶೇ.23ರಷ್ಟಾಗಿದೆ.
   ಕಳೆದ ವರ್ಷ ಇದೇ ಅವಧಿಯಲ್ಲಿ ಈ ಜಲಾಶಯಗಳಲ್ಲಿ ನೀರಿನ ನೇರ ಸಂಗ್ರಹ ಸಾಮರ್ಥ್ಯವು ಕಳೆದ ವರ್ಷದ ಸಂಗ್ರಹದ ಶೇ. 67ರಷ್ಟಾಗಿದೆ. ಅದೇ ರೀತಿ ಕಳೆದ ಹತ್ತು ವರ್ಷಗಳ ಸರಾಸರಿ ನೇರ ಸಂಗ್ರಹದ ಶೇ.77ರಷ್ಟಾಗಿದೆ. 2016ರಲ್ಲಿ ಮುಂಗಾರು ಮಳೆಯು ಸಾಮಾನ್ಯಕ್ಕಿಂತ ಅಧಿಕಗೊಳ್ಳುವ ಸಾಧ್ಯತೆಯಿರುವುದಾಗಿ ಭಾರತೀಯ ಪವಮಾನಶಾಸ್ತ್ರ ಇಲಾಖೆ ಮುನ್ಸೂಚನೆ ನೀಡಿದೆ. ಭಾರತದ ಪಶ್ಚಿಮ ಹಾಗೂ ದಕ್ಷಿಣ ಪ್ರಾಂತ್ಯಗಳು ಜಲಾಶಯಗಳ ನೀರಿನ ಅಭಾವದಿಂದ ತೀವ್ರವಾಗಿ ಪೀಡಿತವಾಗಿವೆ. ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ಪಶ್ಚಿಮ ಪ್ರಾಂತ್ಯದ 27 ಜಲಾಶಯಗಳಲ್ಲಿ ನೀರಿನ ನೇರ ಸಂಗ್ರಹ ಮಟ್ಟವು ಕೇವಲ ಶೇ.18ರಷ್ಟಾಗಿದೆ. ಕಳೆದ ಇದೇ ಅವಧಿಯಲ್ಲಿ ಶೇ.36ರಷ್ಟು ಜಲಸಂಗ್ರಹವಿತ್ತು.
 
   ದಕ್ಷಿಣ ಪ್ರಾಂತ್ಯದಲ್ಲಂತೂ ಪರಿಸ್ಥಿತಿ ಇನ್ನಷ್ಟು ಶೋಚನೀಯವಾಗಿದೆ. ಈ ಪ್ರಾಂತ್ಯದ 31 ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ. 15ರಷ್ಟು ನೀರು ಮಾತ್ರ ಲಭ್ಯವಿದೆ. ಮಹಾರಾಷ್ಟ್ರದ ಮೂರು, ಆಂಧ್ರ ಹಾಗೂ ತೆಲಂಗಾಣಗಳ ತಲಾ ಒಂದು ಜಲಾಶಯಗಳು ಪ್ರಸ್ತುತ ಸಂಪೂರ್ಣವಾಗಿ ಬತ್ತಿ ಹೋಗಿವೆ. ದೇಶದ ಒಟ್ಟು 91 ಜಲಾಶಯಗಳ ಪೈಕಿ 91ರಲ್ಲಿ ನೀರಿನ ಸಂಗ್ರಹ ಮಟ್ಟವು ಕಳೆದ ವರ್ಷಕ್ಕಿಂತ ಸರಾಸರಿ ಕಡಿಮೆ ಮಟ್ಟದಲ್ಲಿವೆ. ಪಶ್ಚಿಮ ಬಂಗಾಳ, ತ್ರಿಪುರಾ ಹಾಗೂ ಮಧ್ಯಪ್ರದೇಶಗಳಲ್ಲದೆ ಇತರ ಎಲ್ಲಾ 16 ರಾಜ್ಯಗಳಲ್ಲಿ ನೀರಿನ ಮಟ್ಟವು ವಾಡಿಕೆಗಿಂತ ಕೆಳ ಮಟ್ಟದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X