Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 53 ಸಾವಿರ ರೂಪಾಯಿ ಬಾಡಿಗೆ ಕಟ್ಟಲು...

53 ಸಾವಿರ ರೂಪಾಯಿ ಬಾಡಿಗೆ ಕಟ್ಟಲು ಸಾಧ್ಯವಿಲ್ಲದ ಪ್ರಿಯಾಂಕಾ ಗಾಂಧಿ!

ವಾರ್ತಾಭಾರತಿವಾರ್ತಾಭಾರತಿ16 April 2016 9:29 AM IST
share
53 ಸಾವಿರ ರೂಪಾಯಿ ಬಾಡಿಗೆ ಕಟ್ಟಲು ಸಾಧ್ಯವಿಲ್ಲದ ಪ್ರಿಯಾಂಕಾ ಗಾಂಧಿ!

ಹೊಸದಿಲ್ಲಿ, ಎ. 16: ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾಗಾಂಧಿ ವಾಜಪೇಯಿ ಸರಕಾರಕ್ಕೆ ತಮ್ಮ ಭವ್ಯವಾದ 2,765.18 ಚದರ ಮೀಟರ್‌ಗಳ ಬೃಹತ್ ಮನೆಗೆ ನೀಡುತ್ತಿದ್ದ 53,421 ರೂಪಾಯಿ ಬಾಡಿಗೆಯನ್ನು 8,888 ರೂಪಾಯಿಗೆ ಇಳಿಸುವಂತೆ ಕೋರಿದ್ದರು. ಇದಕ್ಕೆ ಅವರು ನೀಡಿದ್ದ ಕಾರಣ, ಅದು ನನ್ನ ಸಾಮರ್ಥ್ಯಕ್ಕೆ ಮೀರಿದ್ದು ಎನ್ನುವುದು.
ಇದೀಗ ಪ್ರಿಯಾಂಕಾಗಾಂಧಿ ಅವರು ಲೋಧಿ ಎಸ್ಟೇಟ್‌ನಲ್ಲಿರುವ ಸರಕಾರಿ ವಾಸ್ತವ್ಯದ ಟೈಪ್ 6 ಕಟ್ಟಡಕ್ಕೆ 31,300 ರೂಪಾಯಿ ಬಾಡಿಗೆ ನೀಡುತ್ತಿದ್ದಾರೆ. ಪಂಜಾಬ್‌ನ ಮಾಜಿ ಡಿಜಿಪಿ ಕೆಪಿಎಸ್ ಗಿಲ್, ಅಖಿಲ ಭಾರತದ ಭಯೋತ್ಪಾದನಾ ನಿಗ್ರಹ ಪಡೆಯ ಮುಖ್ಯಸ್ಥ ಎಂ.ಎಸ್.ಬಿಟ್ಟಾ ಹಾಗೂ ‘ಪಂಜಾಬ್ ಕೇಸರಿ’ ಸಂಪಾದಕ ಅಶ್ವನಿ ಕುಮಾರ್ ಹಾಗೂ ಪ್ರಿಯಾಂಕಾಗಾಂಧಿಯವರಿಗೆ 2012ರಲ್ಲಿ ಭದ್ರತಾ ಕಾರಣಗಳಿಗಾಗಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಅವರು ಕೂಡಾ ಸರಿಸುಮಾರು ಅಷ್ಟೇ ಪ್ರಮಾಣದ ಬಾಡಿಗೆ ನೀಡುತ್ತಿದ್ದಾರೆ.
ಪ್ರಿಯಾಂಕಾಗಾಂಧಿ 2002ರ ಮೇ 7ರಂದು ಸರಕಾರಕ್ಕೆ ಪತ್ರ ಬರೆದು, ಈ ಬಾಡಿಗೆ ಅತ್ಯಧಿಕವಾಗಿದ್ದು, ನಮ್ಮ ಸಾಮರ್ಥ್ಯಕ್ಕೆ ಮೀರಿದ್ದು ಎಂದು ಹೇಳಿದ್ದಾರೆ. ಎಸ್‌ಪಿಜಿ ಮುಖ್ಯಸ್ಥರ ಮನವಿಯ ಮೇರೆಗೆ ಸರಕಾರಿ ಬಂಗಲೆಗೆ ಸ್ಥಳಾಂತರಗೊಂಡಿದ್ದು, ಈ ಬಂಗಲೆಯ ದೊಡ್ಡ ಭಾಗವನ್ನು ಎಸ್‌ಪಿಜಿ ಬಳಸಿಕೊಳ್ಳುತ್ತದೆ. ನಾವು ನಮ್ಮ ಅನುಕೂಲಕ್ಕಾಗಿ ಇಲ್ಲಿಗೆ ಬಂದಿಲ್ಲ. ಭದ್ರತಾ ಕಾರಣಗಳಿಗಾಗಿ ಆಗಮಿಸಿದ್ದೇವೆ. ಈ ಹಿಂದೆ ನೀಡುತ್ತಿದ್ದ 28,451 ರೂಪಾಯಿಯನ್ನೇ ನೀಡುತ್ತಾ ಬರುತ್ತೇನೆ ಎಂದು ಅವರು ವಿವರಿಸಿದ್ದರು.
ಈ ನಾಲ್ಕು ಮಂದಿ ಕೂಡಾ ಬಾಡಿಗೆ ಹೆಚ್ಚಳ ಬಳಿಕವೂ ಹಳೆಯ ಬಾಡಿಗೆಯನ್ನೇ ನೀಡುತ್ತಿದ್ದರು. 2004ರ ಜನವರಿ 31ರವರೆಗೆ 3.76 ಲಕ್ಷ ರೂಪಾಯಿ ಬಾಕಿಯನ್ನು ಪ್ರಿಯಾಂಕ ಉಳಿಸಿಕೊಂಡಿದ್ದರು. ನೊಯ್ಡಿದ ನಿವಾಸಿ ರೇವ್ ಅಶಿಶ್ ಭಟ್ಟಾಚಾರ್ಯ ಮಾಹಿತಿ ಹಕ್ಕು ಕಾಯ್ದೆಯಡಿ ಕೋರಿದ ಮಾಹಿತಿಯಲ್ಲಿ ಈ ಅಂಶ ಬಹಿರಂಗವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X