Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಂಡ್ವಾರಾ ಬಾಲಕಿಯ ಅಕ್ರಮ ಬಂಧನ:...

ಹಂಡ್ವಾರಾ ಬಾಲಕಿಯ ಅಕ್ರಮ ಬಂಧನ: ಪೊಲೀಸರಿಗೆ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ16 April 2016 11:35 PM IST
share
ಹಂಡ್ವಾರಾ ಬಾಲಕಿಯ ಅಕ್ರಮ ಬಂಧನ: ಪೊಲೀಸರಿಗೆ ಹೈಕೋರ್ಟ್ ತರಾಟೆ

ಶ್ರೀನಗರ, ಎ.16: ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕೇಂದ್ರ ಬಿಂದುವಾಗಿರುವ ಹಂಡ್ವಾರಾದ ಬಾಲಕಿ ಪೊಲೀಸರ ಅಕ್ರಮ ಬಂಧನದಲ್ಲಿದ್ದಾಳೆ ಮತ್ತು ಸ್ಥಳೀಯರನ್ನು ದೂರಿ ವೀಡಿಯೊ ಹೇಳಿಕೆ ನೀಡುವಂತೆ ಆಕೆಯ ಮೇಲೆ ಒತ್ತಡ ಹೇರಲಾಗಿತ್ತು ಎಂದು ಆಕೆಯ ಕುಟುಂಬವು ಶನಿವಾರ ಹೇಳಿದೆ. ಬಾಲಕಿಗೆ ಸೈನಿಕನಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಆರೋಪಿಸಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗಳ ಸಂದರ್ಭ ಭದ್ರತಾ ಪಡೆಗಳ ಕಾರ್ಯಾಚರಣೆಗಳಲ್ಲಿ ಐವರು ಮೃತಪಟ್ಟಿದ್ದಾರೆ.

ತನ್ನ 16ರ ಹರೆಯದ ಅಪ್ರಾಪ್ತ ವಯಸ್ಕ ಪುತ್ರಿ,ಆಕೆಯ ತಂದೆ ಮತ್ತು ಸೋದರತ್ತೆ ಕಳೆದ ಐದು ದಿನಗಳಿಂದಲೂ ಪೊಲೀಸರ ಅಕ್ರಮ ಬಂಧನದಲ್ಲಿದ್ದಾರೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ಬಾಲಕಿಯ ತಾಯಿ ಹೇಳಿದ್ದಾರೆ.

ನನ್ನ ಮಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುವಾಗ ಆಕೆ ಪೊಲೀಸ್ ಠಾಣೆಯಲ್ಲಿ ಒಬ್ಬಂಟಿಯಾಗಿದ್ದಳು ಮತ್ತು ಆ ಹೇಳಿಕೆಯನ್ನು ನೀಡಲು ಪೊಲೀಸರು ಆಕೆಯ ಮೇಲೆ ಒತ್ತಡ ಹೇರಿದ್ದರು ಎಂದು ಆಕೆ ತಿಳಿಸಿದ್ದಾರೆ.

ಬಾಲಕಿಯ ತಾಯಿಯು ಸಲ್ಲಿಸಿರುವ ಅರ್ಜಿಯನ್ನು ಶನಿವಾರ ಕೈಗೆತ್ತಿಕೊಂಡ ಜಮ್ಮು-ಕಾಶ್ಮೀರ ಉಚ್ಚ ನ್ಯಾಯಾಲಯವು ಪೊಲೀಸರನ್ನು ತರಾಟೆಗೆತ್ತಿಕೊಂಡಿತಲ್ಲದೆ, ಬಾಲಕಿ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಯಾವ ಕಾನೂನಿನಡಿ ಬಂಧಿಸಲಾಗಿದೆ ಎನ್ನುವುದನ್ನು ತಿಳಿಸುವಂತೆ ತಾಕೀತು ಮಾಡಿದೆ.

ಬಾಲಕಿಯ ತಾಯಿ ಸುದ್ದಿಗೋಷ್ಠಿಯನ್ನು ಏರ್ಪಡಿಸಲು ಬಯಸಿದ್ದರಾದರೂ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಕೆ,ತನ್ನ ಕುಟುಂಬಕ್ಕೆ ಯಾವುದೇ ಮಾಹಿತಿ ನೀಡದೆ ಪುತ್ರಿಯನ್ನು ಬಂಧಿಸಲಾಗಿದೆ. ಆಕೆ ಅಪ್ರಾಪ್ತ ವಯಸ್ಕಳಾಗಿದ್ದರೂ ವೀಡಿಯೊದಲ್ಲಿ ಆಕೆಯ ಮುಖವನ್ನು ಮರೆಮಾಚದೆ ಗುರುತನ್ನು ಬಹಿರಂಗಗೊಳಿಸಲಾಗಿದೆ ಎಂದು ಆರೋಪಿಸಿದರು.

ಮಂಗಳವಾರ ತನ್ನ ಮಗಳು ಶಾಲೆಯಿಂದ ಮರಳುತ್ತಿದ್ದಾಗ ಆಕೆ ಶೌಚಾಲಯಕ್ಕೆ ತೆರಳಿದ್ದಳು ಮತ್ತು ಈ ವೇಳೆ ಸೈನಿಕನೋರ್ವ ಆಕೆಯನ್ನು ಹಿಂಬಾಲಿಸುತ್ತಿದ್ದ. ಶೌಚಾಲಯದಲ್ಲಿ ಸೈನಿಕನನ್ನು ಕಂಡ ಆಕೆ ಗಾಬರಿಯಿಂದ ಕಿರುಚಿಕೊಂಡಿದ್ದಳು. ಸಮೀಪದ ಅಂಗಡಿಕಾರರು ಮತ್ತು ಪೊಲೀಸರು ಧಾವಿಸಿದಾಗ ಆ ಸೈನಿಕ ಅಲ್ಲಿಂದ ಪರಾರಿಯಾಗಿದ್ದ ಎಂದು ತಿಳಿಸಿದ ಅವರು, ಬಳಿಕಪೊಲೀಸರು ಕುಟುಂಬಕ್ಕೆ ಯಾವುದೇ ಮಾಹಿತಿಯನ್ನು ನೀಡದೆ ಆಕೆಯನ್ನು ಠಾಣೆಗೊಯ್ದಿದ್ದಾರೆ ಎಂದರು.

ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ನಾವು ನ್ಯಾಯಾಲಯವನ್ನು ಕೋರಿದ್ದೇವೆ. ಈ ಹೇಯ ಕೃತ್ಯವನ್ನು ಮಾಡಿರುವ ಪೊಲೀಸ್ ಅಥವಾ ಸೇನೆ ವಿಚಾರಣೆ ನಡೆಸುವುದನ್ನು ನಾವು ಬಯಸುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X