Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಕ್ಸ್‌ಪರ್ಟ್, ಮಹೇಶ್ ಸಹಿತ 11...

ಎಕ್ಸ್‌ಪರ್ಟ್, ಮಹೇಶ್ ಸಹಿತ 11 ಕಾಲೇಜುಗಳಿಗೆ ಸಿಐಡಿ ದಾಳಿ

ವಾರ್ತಾಭಾರತಿವಾರ್ತಾಭಾರತಿ16 April 2016 11:49 PM IST
share
ಎಕ್ಸ್‌ಪರ್ಟ್, ಮಹೇಶ್ ಸಹಿತ 11 ಕಾಲೇಜುಗಳಿಗೆ ಸಿಐಡಿ ದಾಳಿ

ಮಂಗಳೂರು, ಎ.16: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಂದು ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜುಗಳಾದ ಎಕ್ಸ್‌ಪರ್ಟ್ ಪಿಯು ಕಾಲೇಜು ಮತ್ತು ಮಹೇಶ್ ಪಿಯು ಕಾಲೇಜುಗಳ ಮೇಲೆ ದಾಳಿ ನಡೆಸಿದ್ದಾರೆ.

ಇತ್ತೀಚೆಗೆ ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ನೀಡಿರುವ ಮಾಹಿತಿಯನ್ವಯ ಈ ದಾಳಿ ನಡೆದಿದೆ. ದಾಳಿಯ ಸಂದರ್ಭದಲ್ಲಿ ತನಿಖಾಧಿಕಾರಿಗಳು ಈ ಎರಡೂ ಕಾಲೇಜುಗಳಿಂದ ಕೆಲವು ಲಿಖಿತ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸಿಐಡಿ ಅಧಿಕಾರಿಗಳಿಂದ ದಾಳಿಗೊಳಗಾದ ಇತರ ಖಾಸಗಿ ವಿದ್ಯಾ ಸಂಸ್ಥೆಗಳಾದ ನಾರಾಯಣ ಕಾಲೇಜು, ಚೈತನ್ಯ ಕಾಲೇಜು ವಿದ್ಯಾರಣ್ಯಪುರ, ದೀಕ್ಷಾ ಯಲಹಂಕ, ಪ್ರೆಸಿಡೆನ್ಸಿ ಕೆಂಪಾಪುರ, ಬೃಂದಾವನ ಸಂಜಯನಗರ, ರೋಯಲ್ ಕಾನ್‌ಕೋಡ್ ಕಲ್ಯಾಣನಗರ, ನಾರಾಯಣ ಬಳ್ಳಾರಿ, ಚೈತನ್ಯ ಬಳ್ಳಾರಿ, ದೀಕ್ಷಾ ತುಮಕೂರು ಕಾಲೇಜುಗಳು ಸೇರಿವೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪದಲ್ಲಿ ಸಚಿವರೊಬ್ಬರ ವಿಶೇಷ ಅಧಿಕಾರಿ ಸೇರಿ ಇದುವರೆಗೆ ಎಂಟು ಮಂದಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಎಪ್ರಿಲ್ 13ರಂದು ಬಂಧಿತರಾದ ಕೆ.ಎಂ.ಮುರಳೀಧರ್, ಅನಿಲ್ ಕುಮಾರ್ ಮತ್ತು ಕೆ.ಎಸ್.ರಂಗನಾಥ ನೀಡಿರುವ ಮಾಹಿತಿಯಂತೆ ಅಧಿಕಾರಿಗಳು ರಾಜ್ಯಾದ್ಯಂತ ಒಟ್ಟು 11 ಖಾಸಗಿ ವಿದ್ಯಾ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ 11 ಕಾಲೇಜುಗಳನ್ನು ಹೊರತುಪಡಿಸಿ ಇತರ ಖಾಸಗಿ ಕಾಲೇಜುಗಳ ಮೇಲೂ ಸಿಐಡಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಕೆಲವು ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಕೋಚಿಂಗ್ ಸೆಂಟರ್‌ವೊಂದನ್ನು ಸ್ಥಾಪಿಸಿರುವ ಶಿವಕುಮಾರ್ ಎಂಬಾತ ಈ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದ್ದು, ಈತ ಈ ಹಿಂದೆಯೂ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕೆಲವು ಬಾರಿ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ತನ್ನ ಕೋಚಿಂಗ್ ಸೆಂಟರ್ ಮುಖಾಂತರ ಈತ ರಾಜ್ಯದ ಪ್ರತಿಷ್ಠಿತ ಖಾಸಗಿ ಕಾಲೇಜುಗಳ ಮುಖ್ಯಸ್ಥರ ಸಂಪರ್ಕವನ್ನು ಹೊಂದಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯ ಬಳಿಕ ಈತನೇ ತನ್ನ ಸಂಪರ್ಕದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೂರೈಸಿದ್ದಾನೆ ಎಂದು ಗಂಭೀರ ಆರೋಪ ಶಿವಕುಮಾರ್ ವಿರುದ್ಧ ಕೇಳಿಬರುತ್ತಿದೆ.

ಉಪನ್ಯಾಸಕರ ವಿಚಾರಣೆ?

ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಮಂಗಳೂರಿನಿಂದ ಇಬ್ಬರು ಉಪನ್ಯಾಸಕರನ್ನು ಕೂಡ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಆದರೆ ಇದರಲ್ಲಿ ಎಕ್ಸ್ ಪರ್ಟ್ ಹಾಗೂ ಮಹೇಶ್ ಕಾಲೇಜಿನ ಉಪನ್ಯಾಸಕರು ಇದ್ದಾರೆಯೇ ಎಂಬುದು ಖಚಿತವಾಗಿಲ್ಲ. ಈ ಎರಡೂ ಮಂಗಳೂರಿನ ಅತಿ ಪ್ರತಿಷ್ಠಿತ ಹಾಗೂ ದುಬಾರಿ ಕಾಲೇಜುಗಳು ಎಂದೇ ಪ್ರಸಿದ್ಧಿ ಪಡೆದ ಶಿಕ್ಷಣ ಸಂಸ್ಥೆಗಳು. ಕೋಚಿಂಗ್ ಸೆಂಟರ್ ಆಗಿ ಪ್ರಾರಂಭವಾದ ಎಕ್ಸ್‌ಪರ್ಟ್ ಇಂದು ರಾಜ್ಯದ ಅತ್ಯಂತ ಪ್ರತಿಷ್ಠಿತ ಪಿಯು ಕಾಲೇಜುಗಳಲ್ಲಿ ಒಂದು ಎಂಬ ಖ್ಯಾತಿ ಪಡೆದಿದೆ. ಪ್ರತಿವರ್ಷ ಪಿಯು ಫಲಿತಾಂಶದಲ್ಲಿ ಈ ಕಾಲೇಜಿನಿಂದ ರಾಜ್ಯಮಟ್ಟದ ಟಾಪರ್‌ಗಳು ಇರುತ್ತಾರೆ. ದೇಶದ ಪ್ರತಿಷ್ಠಿತ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜಿನ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಭರವಸೆ ನೀಡುವ ಈ ಕಾಲೇಜಿಗೆ ಮಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಸಾಲುಗಟ್ಟಿ ಬಂದು ದಾಖ ಲಾತಿ ಪಡೆಯುತ್ತಾರೆ.

ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ: ಚೆರಿಯನ್

ಮಂಗಳೂರು, ಎ.16: ರ್ಯಾಂಕ್ ಗಳಿಕೆಗಾಗಿ ಖಾಸಗಿ ಕಾಲೇಜುಗಳ ನಡುವಿನ ಪೈಪೋಟಿಯೇ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣವಾಗಿದ್ದು, ಇದರಿಂದಾಗಿ ಕಠಿಣ ಪರಿಶ್ರಮಪಟ್ಟು ಓದಿದ ವಿದ್ಯಾರ್ಥಿಗಳಿಗೆ ತುಂಬಾ ಅನ್ಯಾಯವಾಗಿದೆ ಎಂದು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ದ.ಕ. ಜಿಲ್ಲಾಧ್ಯಕ್ಷ ಜೆ.ಪಿ.ಎಂ. ಚೆರಿಯನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಖಾಸಗಿ ಪಿಯು ಕಾಲೇಜುಗಳು ಉತ್ತಮ ಫಲಿತಾಂಶ ಮತ್ತು ರ್ಯಾಂಕ್ ಗಳಿಕೆಗಾಗಿ ಪ್ರಶ್ನೆ ಪತ್ರಿಕೆ ಖರೀದಿಯ ದಂಧೆಯಲ್ಲಿ ತೊಡಗಿ ಇತರ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಸರಕಾರಿ ಕಾಲೇಜುಗಳಲ್ಲಿ ಹಾಗೂ ಇತರ ಖಾಸಗಿ ಕಾಲೇಜುಗಳಲ್ಲಿ ಪರಿಶ್ರಮಪಟ್ಟು ಕಲಿಯುತ್ತಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದರು.

ದಾಳಿಯಲ್ಲ, ಭೇಟಿ: ನರೇಂದ್ರ ನಾಯಕ್

ಮಂಗಳೂರು, ಎ.16: ನಗರದ ಪ್ರತಿಷ್ಠಿತ ಖಾಸಗಿ ವಿದ್ಯಾ ಸಂಸ್ಥೆಯಾಗಿರುವ ಎಕ್ಸ್‌ಪರ್ಟ್ ಪಿಯು ಕಾಲೇಜಿಗೆ ಇಂದು ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬುದು ತಪ್ಪು ಮಾಹಿತಿ ಎಂದು ಎಕ್ಸ್‌ಪರ್ಟ್‌ನ ಚೇರ್‌ಮೆನ್ ನರೇಂದ್ರ ನಾಯಕ್ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಕೆಲವು ಖಾಸಗಿ ವಿದ್ಯಾ ಸಂಸ್ಥೆಗಳ ಮೇಲೆ ಸಿಐಡಿ ಪೊಲೀಸರು ತನಿಖೆಯನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಆಯಾ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅದರಂತೆ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಎಕ್ಸ್‌ಪರ್ಟ್ ಕಾಲೇಜಿಗೆ ಬಂದು ನೋಟಿಸ್ ಕೊಟ್ಟು ಕೆಲವು ದಾಖಲೆ ಪತ್ರಗಳನ್ನು ಸಲ್ಲಿಸುವಂತೆ ಅಧಿಕಾರಿಗಳು ಕೋರಿದ್ದರು. ಶನಿವಾರ ಬಂದು ದಾಖಲೆ ಪತ್ರಗಳನ್ನು ಸಂಗ್ರಹಿಸಿಕೊಂಡು ಹೋಗಿದ್ದಾರೆ. ಆದ್ದರಿಂದ ಸಿಐಡಿ ಅಧಿಕಾರಿಗಳು ಎಕ್ಸ್‌ಪರ್ಟ್‌ಗೆ ದಾಳಿ ನಡೆಸಿಲ್ಲ. ಮಾಹಿತಿಗಳನ್ನು ಕೇಳಲು ಭೇಟಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

2016ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ವಿವರ, ಭೌತ ಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವ ಶಾಸ್ತ್ರ ವಿಷಯದ ಉಪನ್ಯಾಸಕರ ವಿವರ ಮತ್ತು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಒದಗಿಸುವಂತೆ ಅವರು ನೋಟಿಸ್‌ನಲ್ಲಿ ಕೋರಿದ್ದರು. ಶನಿವಾರ ಎಕ್ಸ್‌ಪರ್ಟ್‌ಗೆ ಭೇಟಿ ನೀಡಿದ್ದ ಅಧಿಕಾರಿಗಳಿಗೆ ಅವರು ಕೇಳಿದ್ದ ದಾಖಲೆಗಳನ್ನು ಒದಗಿಸಿದ್ದೇವೆ ಎಂದು ನರೇಂದ್ರ ನಾಯಕ್ ತಿಳಿಸಿದರು.


ದಾಳಿ ನಡೆದಿಲ್ಲ: ಅಜಿತ್ ಡಿಸೋಜ

ಮಂಗಳೂರು, ಎ. 16: ಮಹೇಶ್ ಪಿಯು ಕಾಲೇಜಿಗೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿಲ್ಲ. ಕೆಲವು ಕಾಲೇಜುಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಅದರಂತೆ ಶುಕ್ರವಾರ ಸಿಐಡಿ ಅಧಿಕಾರಿಗಳು ಕಾಲೇಜಿಗೆ ಬಂದು ಪಿಯು ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ವಿವರ, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ವಿವರಗಳನ್ನು ಕೇಳಿದ್ದಾರೆ. ಅವನ್ನು ನಾವು ಒದಗಿಸಿದ್ದೇವೆ ಎಂದು ಮಹೇಶ್ ಪಿಯು ಕಾಲೇಜಿನ ಪ್ರಾಂಶುಪಾಲ ಅಜಿತ್ ಡಿಸೋಜ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X