Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಶ್ರತ್ ನಕಲಿ ಎನ್ ಕೌಂಟರ್ ನಲ್ಲಿ 19...

ಇಶ್ರತ್ ನಕಲಿ ಎನ್ ಕೌಂಟರ್ ನಲ್ಲಿ 19 ತಿಂಗಳು ಜೈಲಿನಲ್ಲಿದ್ದ ಪಾಂಡೆ ಈಗ ಗುಜರಾತ್ ಪೋಲಿಸ್ ಮುಖ್ಯಸ್ಥ !

ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ

ವಾರ್ತಾಭಾರತಿವಾರ್ತಾಭಾರತಿ17 April 2016 1:23 PM IST
share
ಇಶ್ರತ್ ನಕಲಿ ಎನ್ ಕೌಂಟರ್ ನಲ್ಲಿ 19 ತಿಂಗಳು ಜೈಲಿನಲ್ಲಿದ್ದ ಪಾಂಡೆ ಈಗ ಗುಜರಾತ್ ಪೋಲಿಸ್ ಮುಖ್ಯಸ್ಥ !

ಅಹ್ಮದಾಬಾದ್ , ಎ . 17 : ಇಷ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಆರೋಪಿ , ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಪೃಥ್ವಿ ಪಾಲ್ ಪಾಂಡೆ ಈಗ ಗುಜರಾತ್ ಪೊಲೀಸ್ ಪಡೆಯ ಮುಖ್ಯಸ್ಥ ! 

ಆ  ಪ್ರಕರಣದ ದೋಷಾರೋಪ ಪಟ್ಟಿಯಲ್ಲಿರುವ ಅತ್ಯಂತ ಹಿರಿಯ ಪೊಲೀಸ್ ಅಧಿಕಾರಿ ಎಂಬ ಕುಖ್ಯಾತಿಗೂ ಪಾತ್ರರಾಗಿರುವ ಪಾಂಡೆ ಶನಿವಾರ ಗಾಂಧೀ ನಗರದಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಹೆಚ್ಚುವರಿ ಅಧಿಕಾರವನ್ನು ಸ್ವೀಕರಿಸಿದ್ದಾರೆ . 

1980  ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಪಾಂಡೆ 2013 ರ ಜುಲೈ ಯಲ್ಲಿ ಇಷ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಬಂಧಿತರಾಗಿದ್ದರು.19 ತಿಂಗಳ ಸೆರೆವಾಸದ ಬಳಿಕ  2015 ರ ಫೆಬ್ರವರಿಯಲ್ಲಿ ಅವರು ಬಿಡುಗಡೆಯಾಗಿದ್ದರು . ಪ್ರಕರಣ ಈಗಲೂ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.  

ಅವರ ಪಾಸ್ ಪೋರ್ಟ್ ಈಗಲೂ ವಿಶೇಷ ಸಿಬಿಐ ನ್ಯಾಯಾಲಯದ ವಶದಲ್ಲಿದೆ. ವಿದೇಶ ಪ್ರಯಾಣ ಮಾಡಲಿದೆ ಎಂಬ ಕಾರಣ ನೀಡಿ ಈಗ ಪಾಂಡೆ ಪಾಸ್ ಪೋರ್ಟ್ ಅನ್ನು ಮರಳಿಸಲು  ಮನವಿ ಮಾಡಿದ್ದಾರೆ. 

ದೇಶ ದ್ರೋಹದ ಆರೋಪದಲ್ಲಿ ಬಂಧಿತ ಪತಿದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಅವರ ಬಿಡುಗಡೆಗೆ ಆಗ್ರಹಿಸಿ ನಡೆಯಲಿರುವ " ಜೈಲ್ ಭರೋ ಆಂದೋಲನ್ " ಅನ್ನು ನಿಭಾಯಿಸುವುದು  ಅಧಿಕಾರ ಸ್ವೀಕರಿಸಿದ ಕೂಡಲೇ ಪಾಂಡೆ ಎದುರು ಇರುವ ಮೊದಲ ಸವಾಲು . 

ಜೈಲಿನಿಂದ ಬಿಡುಗಡೆಯಾದ ಮೇಲೆ ಪಾಂಡೆಯನ್ನು ಮತ್ತೆ ಸೇವೆಗೆ ತೆಗೆದುಕೊಂಡ  ಗುಜರಾತ್ ಸರಕಾರ ಅವರಿಗೆ ಡಿಜಿಪಿ ಸ್ಥಾನಕ್ಕೆ ಬಡ್ತಿ ನೀಡಿತು. ಈಗ ಅವರು ಭ್ರಷ್ಟಾಚಾರ ವಿರೋಧಿ ದಳದ ನಿರ್ದೇಶಕರಾಗಿದ್ದಾರೆ. 

" ನಾನು ಕಳೆದ 35  ವರ್ಷಗಳಿಂದ ರಾಜ್ಯಕ್ಕೆ  ಸಲ್ಲಿಸಿದ್ದೇನೆ. ಈಗ ನಾನು ನಿಯಮ ನೀತಿಗಳ ಅನ್ವಯ ಕೆಲಸ ಮಾಡುತ್ತೇನೆ . ಪೊಲೀಸರು ನಿಯಮದ ಪ್ರಕಾರ ನಡೆದುಕೊಂಡರೆ ಬೇರೇನೂ ಮಾಡಬೇಕಾದ ಅಗತ್ಯವಿಲ್ಲ " ಎಂದು ಪಾಂಡೆ ಹೇಳಿದ್ದಾರೆ . 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X