Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನಗೆ ಕೆಲವು ವ್ಯಕ್ತಿಗಳನ್ನು ಓಲೈಸಲು...

ನನಗೆ ಕೆಲವು ವ್ಯಕ್ತಿಗಳನ್ನು ಓಲೈಸಲು ಸಾಧ್ಯವಿಲ್ಲ

ಕೇಂದ್ರಕ್ಕೆ ಎತ್ತಂಗಡಿಯಾದ ಗುಜರಾತ್ ಡಿಜಿಪಿ ತಿರುಗೇಟು, ದಿಲ್ಲಿಗೆ ಹೋಗಲು ನಕಾರ

ವಾರ್ತಾಭಾರತಿವಾರ್ತಾಭಾರತಿ17 April 2016 6:21 PM IST
share
ನನಗೆ ಕೆಲವು ವ್ಯಕ್ತಿಗಳನ್ನು ಓಲೈಸಲು ಸಾಧ್ಯವಿಲ್ಲ

ಅಹ್ಮದಾಬಾದ್,ಎ.17: ರಾಜ್ಯದ ಪೊಲೀಸ್ ಮಹಾ ನಿರ್ದೇಶಕರ ಹುದ್ದೆಯಿಂದ ಎತ್ತಂಗಡಿಗೊಂಡು ದಿಲ್ಲಿಗೆ ವರ್ಗಾಯಿಸಲ್ಪಟ್ಟಿರುವ ನಿರ್ಗಮನಗೊಳ್ಳುತ್ತಿರುವ ಡಿಜಿಪಿ ಪಿ.ಸಿ.ಥಾಕೂರ್ ಅವರು ದಿಲ್ಲಿಗೆ ತೆರಳಲು ನಿರಾಕರಿಸಿದ್ದು, ತನ್ನ ಪತ್ನಿಯ ಗಂಭೀರ ಆರೋಗ್ಯ ಸ್ಥಿತಿಯನ್ನು ಕಾರಣವನ್ನಾಗಿ ನೀಡಿದ್ದಾರೆ. ಯಾವನೇ ಪತಿ ತನ್ನ ಪತ್ನಿಯನ್ನು ಇಂತಹ ಸ್ಥಿತಿಯಲ್ಲಿ ಬಿಟ್ಟು ತೆರಳಲಾರ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಥಾಕೂರ್ ಅವರನ್ನು ಅಗ್ನಿಶಾಮಕ ಮತ್ತು ನಾಗರಿಕ ರಕ್ಷಣಾ ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕಗೊಳಿಸಿ ಕೇಂದ್ರ ಸರಕಾರವು ಆದೇಶ ಹೊರಡಿಸಿದ ದಿನದಂದೇ ಅನಾರೋಗ್ಯ ರಜೆಯ ಮೇಲೆ ತೆರಳಿರುವ ಅವರು ಶನಿವಾರ ಡಿಜಿಪಿ ಪಿ.ಪಿ.ಪಾಂಡೆಯವರಿಗೆ ಅಧಿಕಾರ ವಹಿಸಿಕೊಡಲೂ ಬಂದಿರಲಿಲ್ಲ.
ಸರಕಾರದ ನಿರ್ಧಾರದಿಂದ ತೀವ್ರ ಅತೃಪ್ತಗೊಂಡಿರುವ ಥಾಕೂರ್ ಶನಿವಾರ ತನ್ನ ಅಧೀನ ಅಧಿಕಾರಿಗಳ ದೂರವಾಣಿ ಕರೆಗಳಿಗೆ ಉತ್ತರಿಸಿರಲಿಲ್ಲ.
 ಈಗ ದಿಲ್ಲಿಗೆ ತೆರಳುವ ಪ್ರಶ್ನೆಯೇ ಇಲ್ಲ. ನನ್ನ ಪತ್ನಿಯ ಗಂಭೀರ ಸ್ಥಿತಿಯ ಬಗ್ಗೆ ರಾಜ್ಯ ಸರಕಾರಕ್ಕೆ ತಿಳಿಸಿದ್ದೇನೆ. ಆಕೆಗೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಮತ್ತು ದಿನದ 24 ಗಂಟೆಗಳ ಕಾಲವೂ ವೈದ್ಯಕೀಯ ಗಮನ ಅಗತ್ಯವಾಗಿದೆ ಎಂದು ಹೇಳಿದ ಥಾಕೂರ್,ನಾನು ದೇಶಕ್ಕೆ ಮತ್ತು ಈ ರಾಜ್ಯಕ್ಕೆ ಸೇವೆ ಸಲ್ಲಿಸಿದ್ದೇನೆ ಮತ್ತು ಸದಾ ದಮನಿತರ ಹಕ್ಕುಗಳ ಪರವಾಗಿದ್ದೇನೆ. ಆದರೆ ಕೆಲವು ವ್ಯಕ್ತಿಗಳ ತುಷ್ಟೀಕರಣ ಮತ್ತು ಅವರ ಆದೇಶ ಪಾಲನೆ ನನ್ನಿಂದ ಸಾಧ್ಯವಾಗಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X