Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜುಬೈಲ್ ಅಗ್ನಿ ದುರಂತ ಶೋಕತಪ್ತರಾದ...

ಜುಬೈಲ್ ಅಗ್ನಿ ದುರಂತ ಶೋಕತಪ್ತರಾದ ಮಂಗಳೂರಿನ ಕುಟುಂಬಸ್ಥರು

ವಾರ್ತಾಭಾರತಿವಾರ್ತಾಭಾರತಿ17 April 2016 7:34 PM IST
share
ಜುಬೈಲ್ ಅಗ್ನಿ ದುರಂತ ಶೋಕತಪ್ತರಾದ ಮಂಗಳೂರಿನ ಕುಟುಂಬಸ್ಥರು

ಮಂಗಳೂರು, ಎ.17: ಸೌದಿ ಅರೇಬಿಯಾದ ಜುಬೈಲ್‌ನ ಯುನೈಟೆಡ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಜಿಲ್ಲೆಯ ಜನತೆಗೆ ಅಘಾತ ತಂದಿದೆ. ಜುಬೈಲ್ ಕಾರ್ಖಾನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಉದೋಗದಲ್ಲಿರುವ ಹಲವರ ಪೈಕಿ ನಾಲ್ಕು ಮಂದಿಯ ಸಾವು ಸಂಭವಿಸಿಸರುವುದು ದೃಢಪಟ್ಟಿದೆ .

ಬಜ್ಪೆ ಸಮಿಪದ ಕೊಂಚಾರ್ ನಿವಾಸಿ ಭಾಸ್ಕರ್ ಪೂಜಾರಿ, ನೀರುಮಾರ್ಗದ ಮೇರ್ಲಪದವು ವಿನ್ಸೆಂಟ್ ಮೊಂತೇರೋ, ಹಳೆಯಂಗಡಿ ನಿವಾಸಿ ಅಶ್ರಫ್ ಬಾಲಕೃಷ್ಣ ಮೂಡುಶೆಡ್ಡೆ ಅಗ್ನಿ ಅನಾಹುತಕ್ಕೆ ಮೃತಪಟ್ಟಿದ್ದಾರೆ. ಸೌದಿ ಅರೆಬಿಯಾದಿಂದ ಮೃತರ ಪಾರ್ಥಿವ ಶರೀರಗಳು ಬರಲು ಕನಿಷ್ಟ ಹದಿನೈದು ದಿನಗಳು ಬೇಕಾಗಬಹುದೆಂದು ಅಂದಾಜಿಸಲಾಗಿದ್ದು ರಾಜತಾಂತ್ರಿಕ ನೆರವನ್ನು ಕುಟುಂಬಿಕರು ನಿರೀಕ್ಷಿಸುತ್ತಿದ್ದಾರೆ.

ಊರಿಗೆ ಬರಬೇಕೆಂದಿದ್ದ ದಿನವೆ ಸಾವು: ಮೃತಪಟ್ಟ ಒಬ್ಬರಲ್ಲಿ ವಿನ್ಸೆಂಟ್ ಮೊಂತೇರೋ ಸೌದಿ ಅರೇಬಿಯಾದಲ್ಲಿ ಅಗ್ನಿ ದುರಂತ ಸಂಭವಿಸಿದ ಶನಿವಾರದಂದು ಹುಟ್ಟೂರಿಗೆ ಬರಬೇಕಾಗಿತು. ಈ ಬಗ್ಗೆ ಅವರು ನಿಶ್ಚಿಯಿಸಿ ಮನೆಯವರಿಗೂ ತಿಳಿಸಿದ್ದರು. ಅವಿವಾಹಿತರಾಗಿರುವ ವಿನ್ಸೆಂಟ್ ಮೊಂತೆರೋ ಈ ಬಾರಿ ಹುಟ್ಟೂರಿಗೆ ಬಂದಾಗ ಅವರಿಗೆ ಮದುವೆ ಮಾಡಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಜೆಯನ್ನು ಹೊಂದಾಣಿಕೆ ಮಾಡಿಕೊಂಡು ಅವರು ಊರಿಗೆ ಬರುವುದನ್ನು ಒಂದು ತಿಂಗಳಿಗೆ ಮುಂದೂಡಿದ್ದರು. ಒಂದು ವೇಳೆ ಮೊದಲೆ ನಿಶ್ಚಯಿಸಿದಂತೆ ಅವರು ಮನೆಗೆ ಬಂದಿದ್ದರೆ ಅವರು ಪಾರಾಗುತ್ತಿದ್ದರು.

ದಿವಂಗತ ಲಾರೆನ್ಸ್ ಮೊಂತೇರೋ ಮತ್ತು ಕ್ರಿಶ್ಚಿನ್ ಮೊಂತೇರೋ ಅವರ 6 ಮಂದಿ ಮಕ್ಕಳಲ್ಲಿ ಐದನೆಯವರಾಗಿರುವ ವಿನ್ಸೆಂಟ್ ಮೊಂತೇರೋ ಕಳೆದ ಹದಿನಾಲ್ಕು ವರ್ಷಗಳಿಂದ ಕೆಲಸಕ್ಕಾಗಿ ಊರು ಬಿಟ್ಟು ಮುಂಬೈ, ದುಬೈ, ಸೌದಿ ಅರೇಬಿಯದಲ್ಲಿ ದುಡಿಮೆ ಮಾಡಿದ್ದಾರೆ. 36 ವರ್ಷ ಪ್ರಾಯದ ವಿನ್ಸೆಂಟ್ ಮೊಂತೆರೋ 5 ವರ್ಷ ಮುಂಬೈಯಲ್ಲಿ, 5 ವರ್ಷ ದುಬೈಯಲ್ಲಿ, ಕಳೆದ ನಾಲ್ಕುವರೆ ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ದುಡಿಮೆ ಮಾಡುತ್ತಿದ್ದರು. ಇದೀಗ ಇವರ ಸಾವು ಮನೆಯಲ್ಲಿ ಶೋಕದ ವಾತವರಣ ನಿರ್ಮಿಸಿದೆ.

ವಿನ್ಸೆಂಟ್ ಮೊಂತೇರೋ ಅವರ ಸಾವಿನ ಸುದ್ದಿ ಅಘಾತ ತಂದಿದೆ. ಈ ಅಘಾತಕಾರಿ ಸುದ್ದಿಯ ಬಗ್ಗೆ ತಾಯಿಗೆ ಇನ್ನು ತಿಳಿಸಿಲ್ಲ. ಪಾರ್ಥಿವ ಶರೀರವನ್ನು ತರುವ ನಿಟ್ಟಿನಲ್ಲಿ ಸರಕಾರದ ಸಹಾಯ ಬೇಕಾಗಿದೆ

-ಜೆರೊಂ, ಮೃತ ವಿನ್ಸೆಂಟ್ ಅವರ ಸಹೋದರ.

ಗಾಯಗೊಂಡಿದ್ದಾರೆ ಎಂಬುದು ಗೊತ್ತು : ಬಾಲಕೃಷ್ಣ ಪೂಜಾರಿ ಪತ್ನಿ ಲಾವಣ್ಯ 

ಜುಬೈಲ್ ಕಾರ್ಖಾನೆಯಲ್ಲಿ ನಡೆದ ಅಗ್ನಿದುರಂತದಲ್ಲಿ ತನ್ನ ಪತಿಗಾಯಗೊಂಡಿದ್ದಾರೆ ಎಂಬ ಮಾಹಿತಿ ನನಗೆ ಲಭಿಸಿದೆ ಎಂದು ವಾಮಾಂಜೂರಿನ ಬಾಲಕೃಷ್ಣ ಪೂಜಾರಿಯವರ ಪತ್ನಿ ಲಾವಣ್ಯ ತಿಳಿಸಿದ್ದಾರೆ. ಈ ಬಗ್ಗೆ ನಿಖರ ಮಾಹಿತಿ ಇಲ್ಲ. ಅಲ್ಲಿ ಅವರಿಗೆ ಏನಾಗಿದೆ ಎಂದು ಗೊತ್ತಾಗಿಲ್ಲ . ಆದರೆ ಕೆಲವರು ಅವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಬಾಲಕೃಷ್ಣ ಪೂಜಾರಿಯವರು ಕಳೆದ 2 ವರ್ಷಗಳಿಂದ ಸೌದಿ ಅರೇಬಿಯಲ್ಲಿ ದುಡಿಯುತ್ತಿದ್ದಾರೆ. ಬಾಲಕೃಷ್ಣ ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿಯಿದ್ದು ಅವರ ಪಾರ್ಥಿವ ಶರೀರವನ್ನು ತರುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಬಾಲಕೃಷ್ಣ ಪೂಜಾರಿಯವರ ನೆರೆಮನೆಯವರು ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X