ಮಂಗಳೂರು: ಪಿಯುಸಿ ವೌಲ್ಯಮಾಪನಕ್ಕೆ ಖಾಸಗಿ ಉಪನ್ಯಾಸಕರ ನಿಯುಕ್ತಿ ವಿರುದ್ಧ ಪ್ರತಿಭಟನೆ
ಮಂಗಳೂರು, ಎ.18: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ವೌಲ್ಯಮಾಪನಕ್ಕೆ ಖಾಸಗಿ ಉಪನ್ಯಾಸಕರನ್ನು ನೇಮಕ ಮಾಡಿರುವುದರ ವಿರುದ್ಧ ಎಸ್ಎಫ್ಐ ಮತ್ತು ಡಿವೈಎಫ್ಐ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಯಿತು.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ವೌಲ್ಯಮಾಪನ ಬಹಿಷ್ಕರಿಸಿ ಉಪನ್ಯಾಸಕರು ಧರಣಿ ನಡೆಸುತ್ತಿರುವುದರಿಂದ ವೌಲ್ಯಮಾಪನಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಉಪನ್ಯಾಸಕರನ್ನು ನಿಯೋಜಿಸಿದೆ. ಉಪನ್ಯಾಸಕರ ಬೇಡಿಕೆಗಳನ್ನು ಮನ್ನಿಸದೆ ಸರಕಾರ ಕೈಗೊಂಡಿರುವ ಈ ಕ್ರಮವನ್ನು ವಿರೋಧಿಸಿ ಮಂಗಳೂರಿನಲ್ಲಿ ವೌಲ್ಯಮಾಪನ ಕೇಂದ್ರವಾಗಿರುವ ಶಾರದಾ ವಿದ್ಯಾಲಯದ ಎದುರು ಈ ಪ್ರತಿಭಟನೆ ನಡೆಯಿತು.
ಪ್ರತಿಭನಟಕಾರರನ್ನುದ್ದೇಶಿಸಿ ಡಿವೈಎಫ್ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ಕುಮಾರ್ ಬಜಾಲ್, ಉಪಾಧ್ಯಕ್ಷ ಇಮ್ತಿಯಾಝ್ ಬಿ.ಕೆ., ಎಸ್ಎಫ್ಐ ಮುಖಂಡರಾದ ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ನವೀನ್ ಕೊಂಚಾಡಿ, ಹಂಝ ಕಿನ್ಯ, ಚಷ್ಮಿತಾ ಮೊದಲಾದವರು ಮಾತನಾಡಿದರು.
Next Story