Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 21ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ...

21ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ಶಂಕುಸ್ಥಾಪನೆ

ಶಕ್ತಿನಗರದಲ್ಲಿ ‘ಕೊಂಕಣಿ ಮ್ಯೂಸಿಯಂ’

ವಾರ್ತಾಭಾರತಿವಾರ್ತಾಭಾರತಿ18 April 2016 4:49 PM IST
share

ಮಂಗಳೂರು, ಎ.18: ಶಕ್ತಿನಗರದ ಮಾಂಡ್ ಸೊಭಾಣ್ ವತಿಯಿಂದ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೊಂಕಣಿ ಮ್ಯೂಸಿಯಂಗೆ ಎ.21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಗುಜರಾತ್‌ನಿಂದ ತ್ರಿವೇಂಡ್ರಮ್‌ವರೆಗಿನ ಕೊಂಕಣಿ ಸಮುದಾಯಗಳ ವಿಭಿನ್ನ ಜಾತಿ, ಸಮುದಾಯ, ಉಪ ಭಾಷೆಗಳು, ಸಾಂಸ್ಕೃತಿಕ ವೈವಿಧ್ಯವನ್ನು ಪ್ರತಿಬಿಂಬಿಸುವ ಹಾಗೂ ಸಂಶೋಧನಾ ಕೇಂದ್ರವಾಗಿ ಈ ಮ್ಯೂಸಿಯಂ ರಚನೆಯಾಗಲಿದೆ ಎಂದು ಹೇಳಿದರು.

ಶಕ್ತಿನಗರದ 1 ಎಕರೆ ಜಾಗದಲ್ಲಿ ಮ್ಯೂಸಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ ರಾಜ್ಯ ಸರಕಾರವು 2016-17 ನೇ ಬಜೆಟ್‌ನಲ್ಲಿ 2.5 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಮುಂದಿನ ಬಜೆಟ್‌ನಲ್ಲಿ ಮತ್ತೆ 2.5 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿದೆ. ಕೇಂದ್ರ ಸರಕಾರದಲ್ಲಿಯೂ ಮ್ಯೂಸಿಯಂ ರಚನೆಗೆ ಅನುದಾನ ನೀಡಲು ಅವಕಾಶವಿದ್ದು, ನೆರವು ಕೋರಲಾಗುವುದು. ಗೋವಾ, ತಮಿಳುನಾಡು ಸೇರಿದಂತೆ ಕೊಂಕಣಿ ಸಮುದಾಯ ಹೆಚ್ಚಾಗಿರುವ ಇತರ ರಾಜ್ಯಗಳಿಂದಲೂ ಅನುದಾನಕ್ಕೆ ಪ್ರಯತ್ನಿಸಲಾಗುವುದು. ಅಂತಾರಾಷ್ಟ್ರೀಯ ಹಾಗೂ ಪ್ರವಾಸೋದ್ಯಮ ತಾಣವಾಗಿ ಈ ಮ್ಯೂಸಿಯಂನ್ನು ಪರಿವರ್ತಿಸುವ ಉದ್ದೇಶ ಹೊಂದಿರುವುದರಿಂದ ಯುನೆಸ್ಕೋದ ನೆರನ್ನು ಕೂಡಾ ಕೋರಲಾಗುವುದು.

ಶಿಲ್ಲಾಂಗ್‌ನಲ್ಲಿರುವ ಈಶಾನ್ಯ ರಾಜ್ಯಗಳ ಬೃಹತ್ ರಾಷ್ಟ್ರೀಯ ಮ್ಯೂಸಿಯಂನ ಪ್ರೇರಣೆಯ ಮೇರೆಗೆ ರಚಿಸಲಾಗುತ್ತಿರುವ ಈ ಮ್ಯೂಸಿಯಂನಲ್ಲಿ ಡಿಜಿಟಲ್ ಡಾಕ್ಯುಮೆಂಟೇಶನ್, ಹಬ್ಬ, ಆಚಾರ ವಿಚಾರ ಸೇರಿದಂತೆ ಕೊಂಕಣಿ ಭಾಷಿಗರ ಸಮಸ್ತ ಜೀವನ ಶೈಲಿಯನ್ನು ಮ್ಯೂಸಿಯಂನಲ್ಲಿ ಅನಾವರಣಗೊಳಿಸಲಾಗುವುದು. ಸುಮಾರು 3 ವರ್ಷಗಳ ಅವಧಿಯೊಳಗೆ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಮ್ಯೂಸಿಯಂಗಾಗಿ ಈಗಾಗಲೇ ಕೊಂಕಣಿ ಸಮುದಾಯ 37 ಮಂದಿ ದಾನಿಗಳು 4 ಕೋಟಿ ರೂ.ಗಳ ಸಹಾಯವನ್ನು ನೀಡಿದ್ದಾರೆ ಎಂದು ಅರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಅರ್.ವಿ.ದೇಶಪಾಂಡೆ, ಬಿ.ರಮಾನಾಥ್ ರೈ, ಉಮಾಶ್ರೀ, ಯು.ಟಿ.ಖಾದರ್, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಅಧ್ಯಕ್ಷ ಲುವಿ ಜೆ.ಪಿಂಟೋ, ಸಂಘಟಕ ಸ್ಟ್ಯಾನಿ ಆಲ್ವಾರಿಸ್, ಕಾರ್ಯದರ್ಶಿ ಕಿಶೋರ್ ಫೆರ್ನಾಂಡಿಸ್, ೋಶಾಧಿಕಾರಿ ಕ್ಲಾರಾ ಡಿಕುನ್ಹಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X