Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿ ವಾಹನದ ‘ರಾಜ ರಹಸ್ಯ’ ಬಯಲು!

ರಾಷ್ಟ್ರಪತಿ ವಾಹನದ ‘ರಾಜ ರಹಸ್ಯ’ ಬಯಲು!

ವಾರ್ತಾಭಾರತಿವಾರ್ತಾಭಾರತಿ18 April 2016 10:12 PM IST
share

ಹೊಸದಿಲ್ಲಿ, ಎ.18: ಭಾರತದ ಪ್ರಥಮ ಪ್ರಜೆ ಬಳಸುವ ಕಾರಿನ ಉತ್ಪಾದಕ ಸಂಸ್ಥೆ, ಮಾಡೆಲ್ ನಂಬರ್ ಹಾಗೂ ರಿಜಿಸ್ಟ್ರೇಷನ್ ನಂಬರ್ ಬಹಿರಂಗಗೊಳಿಸಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ. ರಾಷ್ಟ್ರಪತಿ ಬಳಕೆಯ ಕಾರಿನಲ್ಲಿ ನಂಬರ್ ಪ್ಲೇಟ್, ಲೈಸನ್ಸ್ ಪ್ಲೇಟ್ ಬದಲಾಗಿ ರಾಷ್ಟ್ರಲಾಂಛನ ಇರುತ್ತದೆ. ಈ ವಿವರಗಳನ್ನು ಬಹಿರಂಗಗೊಳಿಸುವುದರಿಂದ ಪ್ರಥಮ ಪ್ರಜೆಗೆ ಅಪಾಯ ಸಾಧ್ಯತೆ ಇರುತ್ತದೆ ಎಂದು ಗೃಹ ಸಚಿವಾಲಯ ಹೇಳಿದೆ.

ಆದರೆ ಗೃಹ ಸಚಿವಾಲಯ ಬಹಿರಂಗಪಡಿಸಲು ನಿರಾಕರಿಸಿದ ಈ ಎಲ್ಲ ಮಾಹಿತಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಲಭ್ಯ ಎಂದು ಅನಧಿಕೃತ ಮೂಲಗಳು ತಿಳಿಸಿವೆ.
ಯೂ ಟ್ಯೂಬ್‌ನಲ್ಲಿ ಹರಿದಾಡುತ್ತಿರುವ ಓಪನ್‌ಪೋಸ್ಟ್ ಪ್ರಕಾರ, ಕಪ್ಪುಬಣ್ಣದ ಮರ್ಸಿಡಿಸ್ ಬೆಂಝ್ ಎಸ್ 600 (ಡಬ್ಲ್ಯು 221) ಪುಲ್‌ಮನ್ ಗಾರ್ಡ್ ಮಾದರಿಯದ್ದಾಗಿದೆ. ಇದು ವಿಶೇಷವಾಗಿ ಸಿದ್ಧಪಡಿಸಿದ ಸುಸಜ್ಜಿತ ವಾಹನವಾಗಿದ್ದು, ಇದು ಪ್ರಬಲ ಶಸ್ತ್ರಸಜ್ಜಿತ, ಚಾಲಕನಿಗೆ ಪ್ರತ್ಯೇಕ ವಿಭಾಗ ಹೊಂದಿದ ಐಷಾರಾಮಿ ಕಾರಾಗಿದೆ. ಗರಿಷ್ಠ ರಕ್ಷಣಾ ವರ್ಗದ ವಿಆರ್6/ವಿಆರ್7 ಮಾದರಿಯ ಎಲ್ಲ ಮಾನದಂಡಗಳಿಗೆ ಅನುಗುಣವಾಗಿ ಇದು ಸಜ್ಜುಗೊಂಡಿದೆ ಎಂದು ಪೋಸ್ಟ್ ಹೇಳಿಕೊಂಡಿದೆ.

ಮಿಲಿಟರಿ ರೈಫಲ್ ದಾಳಿಯನ್ನು ಎದುರಿಸಲು ಸಮರ್ಥವಾಗುವಷ್ಟು ಶಸ್ತ್ರಸಜ್ಜಿತವಾಹನ ಇದಾಗಿದ್ದು, ಕೈಬಾಂಬ್ ಹಾಗೂ ಸ್ಫೋಟಕಗಳಿಂದಲೂ ರಕ್ಷಣೆ ನೀಡಲು ಸಮರ್ಥವಾಗಿದೆ. ರಾಷ್ಟ್ರಪತಿಗಳ ವಾಹನ ಸರಣಿಯಲ್ಲಿ, ಮಾಜಿ ರಾಷ್ಟ್ರಪತಿ ಬಳಸುತ್ತಿದ್ದ ಕಪ್ಪುಬಣ್ಣದ ಮರ್ಸಿಡಿಸ್ ಬೆಂಝ್ ಡಬ್ಲು 140 ಶಸ್ತ್ರಸಜ್ಜಿತ ಕಾರನ್ನೂ ಒಳಗೊಂಡಿದ್ದು, ಇದನ್ನು ಈಗ ಹೆಚ್ಚುವರಿ ವಾಹನವಾಗಿ ಬಳಸಲಾಗುತ್ತಿದೆ ಎಂದು ವಿವರಿಸಲಾಗಿದೆ. ಹಲವು ಸುದ್ದಿತಾಣಗಳಲ್ಲೂ ಈ ಮಾಹಿತಿ ಲಭ್ಯವಿದೆ.
ಆರ್‌ಟಿಐ ಅರ್ಜಿದಾರ ರಾಕೇಶ್ ಅಗರ್‌ವಾಲ್, ರಾಷ್ಟ್ರಪತಿಗಳ ಸಚಿವಾಲಯವನ್ನು ಸಂಪರ್ಕಿಸಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರು, ಉಪ ಗವರ್ನರ್‌ಗಳು ಬಳಸುವ ಸರಕಾರಿ ಲಾಂಛನ ಹೊಂದಿದ ಎಲ್ಲ ವಾಹನಗಳ ಉತ್ಪಾದಕ ಸಂಸ್ಥೆ, ಮಾಡೆಲ್ ಸಂಖ್ಯೆ ಹಾಗೂ ನೋಂದಣಿ ಸಂಖ್ಯೆಯ ವಿವರ ಕೇಳಿದ್ದರು. ಈ ಅರ್ಜಿಯನ್ನು ಗೃಹ ಸಚಿವಾಲಯಕ್ಕೆ ವರ್ಗಾಯಿಸಲಾಯಿತು. ಆದರೆ ಗೃಹ ಸಚಿವಾಲಯ ಮಾಹಿತಿ ನೀಡಲು ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X