Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಡೊನೇಶನ್ ನಿಯಂತ್ರಣಕ್ಕೆ ಮನವಿ

ಖಾಸಗಿ ಡೊನೇಶನ್ ನಿಯಂತ್ರಣಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 April 2016 10:12 PM IST
share
ಖಾಸಗಿ ಡೊನೇಶನ್ ನಿಯಂತ್ರಣಕ್ಕೆ  ಮನವಿ

ಕಾರವಾರ,ಎ.18: ಡೊನೇಶನ್ ನಿಯಂತ್ರಣಕ್ಕಾಗಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ಕ್ರಿಯಾಶೀಲಗೊಳಿಸಲು ಒತ್ತಾಯಿಸಿ ಸಿಐಟಿಯು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ 2016-17 ನೆ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಶನ್ ವಸೂಲಿಯಲ್ಲಿ ತೊಡಗಿವೆ ಎಂದು ದೂರಿದ್ದಾರೆ. ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಖಾಸಗಿ ಶಾಲೆಗಳು ಎಗ್ಗಿಲ್ಲದೆ ವಸೂಲಿಯಲ್ಲಿ ತೊಡಗುವ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಆದೇಶಗಳಿಗೆ ಬೆಲೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆ. ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದ್ದರೂ ಅದನ್ನು ನಿಯಂತ್ರಿಸಬೇಕಾದ ಸರಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಖಂಡನೀಯ.

ಈ ನಿಯಮಗಳ ಪ್ರಕಾರ ಸರಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು 500 ರೂ. ಅನುದಾನರಹಿತ ಶಿಕ್ಷಣ ಸಂಸ್ಥೆಗಳು ರೂ.600 ವನ್ನು ಮಾತ್ರ ಅಭಿವೃದ್ಧಿ ಶುಲ್ಕ (ಡೆವಲಪ್‌ಮೆಂಟ್ ಫೀ)ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ. ಬೇಡಿಕೆಗಳು: ಡೊನೇಷನ್ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ಹಾಗೂ ತಾಲೂಕಾ ಮಟ್ಟದಲ್ಲಿ ತಾಲೂಕಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ಗಳನ್ನು ತಕ್ಷಣ ರಚಿಸಬೇಕು. ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಖ್ಯಸ್ಥರು, ಶಿಕ್ಷಣ ಇಲಾಖೆ ಮುಖ್ಯಸ್ಥರು, ಪಾಲಕರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳ ಜಂಟಿ ಸಭೆಗಳನ್ನು ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು.

ಸರಕಾರಿ ನಿಯಮದಂತೆ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ವೇತನ ನೀಡಬೇಕು. ಶಿಕ್ಷಣವನ್ನು ಸಾರ್ವತ್ರೀಕರಣ ಮಾಡಿ ಎಲ್ಲರಿಗೂ ಒಂದೆ ಮಾದರಿಯ ಶಿಕ್ಷಣ ಸಿಗುವಂತಾಗಬೇಕು ಎಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಗಣೇಶ ರಾಠೋಡ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X