Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರಂಭಗೊಂಡ ಎಸೆಸೆಲ್ಸಿ ಮೌಲ್ಯಮಾಪನ:...

ಆರಂಭಗೊಂಡ ಎಸೆಸೆಲ್ಸಿ ಮೌಲ್ಯಮಾಪನ: ಗೊಂದಲಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ18 April 2016 11:01 PM IST
share
ಆರಂಭಗೊಂಡ ಎಸೆಸೆಲ್ಸಿ ಮೌಲ್ಯಮಾಪನ: ಗೊಂದಲಕ್ಕೆ ತೆರೆ

ಬೆಂಗಳೂರು, ಎ.18: ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರ ಆರಂಭವಾಗಿದೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿ, ಪೋಷಕರಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.

ಪಿಯುಸಿ ಉಪನ್ಯಾಸಕರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಮೌಲ್ಯಮಾಪನ ಕಾರ್ಯದಿಂದ ಒಂದು ವರ್ಗದ ಶಿಕ್ಷಕರು ದೂರ ಉಳಿದಿದ್ದಾರೆ. ಇನ್ನು ಉಳಿದ ಶಿಕ್ಷಕರು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಎಸೆಸ್ಸೆಲ್ಸಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.

ರಾಜ್ಯದ 235 ಕೇಂದ್ರಗಳಲ್ಲಿ ಮೌಲ್ಯ ಮಾಪನ ಆರಂಭಗೊಳ್ಳಬೇಕಿತ್ತು. ಆದರೆ ಶೇ.50ರಷ್ಟು ಕೇಂದ್ರಗಳಲ್ಲಿ ಶಿಕ್ಷಕರು ಹಾಜರಾಗದ ಹಿನ್ನೆಲೆಯಲ್ಲಿ ಕೆಲ ಕೇಂದ್ರ ಗಳಲ್ಲಿ ವೌಲ್ಯ ಮಾಪನ ಪ್ರಕ್ರಿಯೆ ವಿಳಂ ಬವಾಗುವ ಭೀತಿ ಎದುರಾಗಿದೆ. ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಕೋಡಿಂಗ್ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ವೌಲ್ಯ ಮಾಪನ ಭರದಿಂದ ಸಾಗಿದೆ.

ಕೆಲವೆಡೆ ಮುಂದುವರಿದ ಗೊಂದಲ: ಹಲವೆಡೆ ಶಿಕ್ಷಕರು ವೌಲ್ಯಮಾಪನ ಬಹಿಷ್ಕರಿಸಿರುವ ಹಿನ್ನೆಲೆಯಲ್ಲಿ ಮೌಲ್ಯಮಾಪನ ಆರಂಭವಾಗಿದ್ದರೂ, ವಿದ್ಯಾರ್ಥಿಗಳಲ್ಲಿ ಗೊಂದಲಗಳು ಮುಂದುವರಿದಿವೆ. ಬೆಂಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಸೇರಿದಂತೆ ಹಲವೆಡೆ ಮೌಲ್ಯಮಾಪನವನ್ನು ಬಹಿಷ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆದರಿಕೆ ಮೂಲಕ ವೌಲ್ಯಮಾಪನ: ವೌಲ್ಯಮಾಪನದಲ್ಲಿ ಹಾಜರಾಗದ ಶಿಕ್ಷಕರಿಗೆ ಎಸ್ಮಾ ಜಾರಿ, ಇನ್‌ಕ್ರಿಮೆಂಟ್ ಕಡಿತ ಮಾಡಲಾಗುವುದು ಎಂದು ಬೆದರಿಕೆಯೊಡ್ಡಲಾಗಿದೆ. ಹೀಗಾಗಿ ಕೆಲ ಶಿಕ್ಷಕರು ವೌಲ್ಯಮಾಪನದಲ್ಲಿ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಇದೇ ಮೊದಲ ಬಾರಿಗೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಮೌಲ್ಯಮಾಪನ ನಡೆಸಲಾಗುತ್ತಿದೆ.

ಉತ್ತರ ಕರ್ನಾಟಕದ ಬೆಳಗಾವಿ, ರಾಯಚೂರು, ಕೊಪ್ಪಳ ಭಾಗಗಳ ಶಿಕ್ಷಕರು ಮೌಲ್ಯಮಾಪನದಲ್ಲಿ ತೊಡಗಿಕೊಂಡಿರುವ ಶಿಕ್ಷಕರು ತಮ್ಮ ಸ್ವ ಇಚ್ಛೆಯಿಂದ ಮೌಲ್ಯಮಾಪನ ನಡೆಸುತ್ತಿಲ್ಲ. ಶಿಕ್ಷಕರನ್ನು ಬೆದರಿಸಿ ಮೌಲ್ಯಮಾಪನ ಮಾಡಿಸಲಾಗುತ್ತಿದೆ ಎಂದು ಹೇಳಲಾಗಿದೆ. ಒಂದು ವರ್ಗದ ಶಿಕ್ಷಕರು ಮೌಲ್ಯಮಾಪನ ಬಹಿಷ್ಕರಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X