Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಹದಾಯಿ ಹೆಸರಲ್ಲಿ ಗದ್ದುಗೆ ಏರಿದವರು...

ಮಹದಾಯಿ ಹೆಸರಲ್ಲಿ ಗದ್ದುಗೆ ಏರಿದವರು ಬೇಗ ಎಚ್ಚತ್ತುಕೊಳ್ಳಬೇಕು...

ಕೆ.ಶಿವು.ಲಕ್ಕಣ್ಣವರಕೆ.ಶಿವು.ಲಕ್ಕಣ್ಣವರ18 April 2016 11:52 PM IST
share
ಮಹದಾಯಿ ಹೆಸರಲ್ಲಿ  ಗದ್ದುಗೆ ಏರಿದವರು ಬೇಗ ಎಚ್ಚತ್ತುಕೊಳ್ಳಬೇಕು...

ಮಹದಾಯಿ ಹೋರಾಟ ಕಳೆದ 9 ತಿಂಗಳುಗಳಿಂದ ಎಲ್ಲ ಅಡೆತಡೆಗಳನ್ನು ದೂರ ಸರಿಸಿ ಯಶಸ್ವಿಯಾಗಿ ನಡೆಯುತ್ತಿದೆ. ಜನ ಸಾಮಾನ್ಯರು ರೈತರ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತ ಹೋರಾಟಗಾರರು ಸರಕಾರಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದ್ದರಿಂದ ಇಬ್ಬರು ನಂಬಿಕೆ ದ್ರೋಹ ಮಾಡದೆ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಹದಾಯಿ ಹೋರಾಟ ಸಮನ್ವಯ ಸಮಿತಿ ಆಗ್ರಹಿಸುತ್ತದೆ.

ಹೋರಾಟ ನಿಲ್ಲಿಸಲು ರಾಜಕೀಯವಾಗಿ ಸಾಕಷ್ಟು ಸಾಹಸ ನಡೆಯುತ್ತಿದೆ. ಮಹದಾಯಿಗಾಗಿ, ಕಳಸಾ ಬಂಡೂರಿಗಾಗಿ ಬಂಡಾಯದ ನೆಲದಲ್ಲಿ ಸಾಕಷ್ಟು ಹೋರಾಟ, ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆದಿವೆ, ನಡೆಯುತ್ತಿವೆ. ಆದರೆ ಇದರ ಬಗ್ಗೆ ಯಾರಿಂದಲೂ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ. ವಿಶೇಷವಾಗಿ ರಾಜಕಾರಣಿಗಳು, ಜನಪ್ರತಿನಿಧಿಗಳು ಈ ಯೋಜನೆಯ ಅನುಷ್ಠಾನ ತಮ್ಮ ಕೆಲಸ ಎಂದು ಪರಿಭಾವಿಸದೆ ತಮ್ಮದೇ ಐಷಾರಾಮಿ ಲೋಕದಲ್ಲಿಯೇ ಮೆರೆಯುತ್ತಿದ್ದಾರೆ.ಆದರೆ ಇನ್ನು ಮುಂದೆ ಇದಕ್ಕೆ ಅವಕಾಶವಿಲ್ಲ. ರೈತರು ಈಗಾಗಲೇ ತೀವ್ರವಾಗಿ ಕೋಪಗೊಂಡಿದ್ದಾರೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಜಿಲ್ಲಾ, ತಾಲ್ಲೂಕು ಪಂಚಾ ಯತ್ ಚುನಾವಣೆಯಲ್ಲಿ ಚಲಾ ವಣೆಯಾದ ನೋಟಾದಿಂದ ತೋರಿಸಿಕೊಟ್ಟಿದ್ದಾರೆ.

 ಮಹದಾಯಿ ಯೋಜನೆ ಈಡೇರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂಬ ಪ್ರಮಾಣ ದೊಂದಿಗೆ ಧರಣಿ ವೇದಿಕೆ ಏರಿದ್ದಾರೆ ರೈತರು. ಆದ್ದರಿಂದ ಯೋಜನೆ ಅನುಷ್ಠಾನಗೊಳ್ಳುವವರೆಗೂ ಹೋರಾಟ ಕೈಬಿಡುವ ಮಾತೇ ಇಲ್ಲ ಎಂಬುದು ಈ ಭಾಗದ ರೈತರು ಸ್ಪಷ್ಟಪಡಿಸಿದ್ದಾರೆ. ನಾವು ಪ್ರಾಮಾಣಿಕವಾಗಿ 273 ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ ನಾಯಿಕೊಡೆಗಳಂತೆ ರೈತ ಸಂಘಟನೆಗಳು ಹುಟ್ಟಿಕೊಂಡು ಕೆಲವರು ಹೋರಾಟದ ದಾರಿ ತಪ್ಪಿಸುವಲ್ಲಿ ಮುಂದಾಗುತ್ತಿ ದ್ದಾರೆ. ಇದರಿಂದ ರೈತರಲ್ಲಿ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ. ಇದು ಸಲ್ಲದು. ಇದೇ ಅವಕಾಶವನ್ನು ನಮ್ಮ ರಾಜಕಾರಣಿಗಳು ಕಾಯುತ್ತಿದ್ದಾರೆ. ಅವರಿಗೆ ರೈತರನ್ನು ಒಡೆದು ಆಳುವುದು ಬೇಕಿದೆ. ಆದ್ದರಿಂದ ಇದರ ಬಗ್ಗೆ ರೈತರು ಜಾಗೃತಿಗೊಳ್ಳಬೇಕಿದೆ. ರೈತರ ಅಸ್ತಿತ್ವಕ್ಕಾಗಿ ಯೋಜನೆ ಈಡೇರುವವರೆಗೂ ಹೋರಾಟ ನಿಲ್ಲದಂತೆ ನೋಡಿಕೊಳ್ಳಬೇಕಿದೆ.

  ಸಂಸದರು ಮನಸ್ಸು ಮಾಡಿದರೆ ಈ ಭಾಗದಲ್ಲಿ ಈಗಾಗಲೇ ಮಹದಾಯಿ ನೀರು ಹರಿಯುತ್ತಿತ್ತು. ಆದರೆ ನಮ್ಮ ಸಂಸದರು, ಶಾಸಕರು, ಸಚಿವರು ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದರಿಂದಲೇ ಇವರ ಕಾಳಜಿ ಗೊತ್ತಾಗುತ್ತದೆ. ಇದು ಸಲ್ಲದು. ರಾಜ ಕಾರಣಿಗಳಿಗೆ ರೈತರ ಬಗ್ಗೆ ಕಳಕಳಿ ಇದ್ದರೆ ತಮ್ಮ ಶಕ್ತಿ ಪ್ರದರ್ಶಿಸಿ ಪ್ರಧಾನಿಗಳ ಮನವೊಲಿಸುವಂತೆ ಮಾಡಲಿ. ಕೇಂದ್ರ, ರಾಜ್ಯ ಸರಕಾರಗಳು ರೈತರ ಸಂಕಷ್ಟ ಅರಿತು ಯೋಜನೆ ಜಾರಿ ಮಾಡಬೇಕು. ಈಗಾಗಲೇ ವಿದ್ಯಾರ್ಥಿ, ಜನಸಾಮಾನ್ಯರ ಸಂಘಟ ನೆಗಳು ಬೆಂಬಲ ನೀಡಿವೆ. ರಾಜಕಾರಣಿಗಳಿಂದ ಇದೇ ತೆರೆನಾದ ವಿಳಂಬ ನೀತಿ ಮುಂದುವರಿದರೆ ಜನಸಾಮಾನ್ಯರೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ.

ವಿದ್ಯಾರ್ಥಿ ಶಕ್ತಿ, ಯುವ ಶಕ್ತಿ ಹಾಗೂ ಶ್ರೀಸಾಮಾನ್ಯನ ಶಕ್ತಿ ಒಂದಾದರೆ ರಾಜಕಾರಣಿಗಳಿಗೆ ಏನಾಗ ಬಹುದೆಂಬುದು ತಿಳಿದ ವಿಷಯ. ಅದು ಒಂದಾಗುವ ಕಾಲ ಬಂದೊದಗಿದೆ. ಜನರು ತೀವ್ರ ಕೆರಳುವ ಮುನ್ನ ಮಹದಾಯಿ ಹೋರಾಟದ ಹೆಸರಲ್ಲಿ ಅಧಿಕಾರ ಪಡೆದು ಐಷಾರಾಮಿ ಜೀವನ ನಡೆಸುತ್ತಿರುವವರು ಎಚ್ಚತ್ತು ರೈತರ ಆಶೋತ್ತರಗಳಿಗೆ ಸ್ಪಂದಿಸಬೇಕಿದೆ.

share
ಕೆ.ಶಿವು.ಲಕ್ಕಣ್ಣವರ
ಕೆ.ಶಿವು.ಲಕ್ಕಣ್ಣವರ
Next Story
X