ಮಂಗಳೂರು : ಕಾಂಗ್ರೆಸ್ನಿಂದ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಮಂಗಳೂರು, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, 44ನೇ ಬಂದರು ವಾರ್ಡು ಕಾಂಗ್ರೆಸ್ ಸಮಿತಿ ಮತ್ತು ಕೆ.ಎಂ.ಸಿ. ಆಸ್ಪತ್ರೆ, ರೆಡ್ಕ್ರಾಸ್ ಬ್ಲಡ್ ಬ್ಯಾಂಕ್, ಎ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಬಂದರ್ನ ಕಸಾಯಿಗಲ್ಲಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಉಚಿತ ದಂತ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಉದ್ಫಾಟಿಸಿ ಮಾತನಾಡಿದ ಜೆ.ಆರ್. ಲೋಬೊ, ಕಳೆದ ಒಂದು ವರ್ಷದಿಂದ ನನ್ನ ಕ್ಷೇತ್ರದಲ್ಲಿರುವ ವಿವಿಧ ವಾರ್ಡುಗಳಲ್ಲಿ ಇಂತಹ ಶಿಬಿರಗಳನ್ನು ಹ್ಮುಕೊಂಡು ಬರುತ್ತಿದ್ದು, ಈ ಮೂಲಕ ಜನರಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಿ ಒಂದು ಸ್ವಸ್ಥ ಸಮಾಜ ನಿರ್ಮಾಣ ಆಗಬೇಕು. ಇಂತಹ ಶಿಬಿರಗಳು ಆರ್ಥಿಕವಾಗಿ ಹಿಂದುಳಿದವರಿಗೆ ಬಹಳ ಉಪಯೋಗಕಾರಿಯಾಗಿದೆ. ರಾಜ್ಯ ಸರಕಾರ ಆರೋಗ್ಯದ ಬಗ್ಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈಗಾಗಲೇ ನಗರದಲ್ಲಿ ಹೊಸ 7 ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಹಿರಿಯ ಕಾಂಗ್ರೆಸ್ ಮುಖಂಡ ಪ್ರಭಾಕರ್ ಶ್ರೀಯಾನ್, ವಾರ್ಡ್ ಅಧ್ಯಕ್ಷ ಡಿ.ಎಂ. ಮುಸ್ತಫಾ, ಮಾಜಿ ಮೇಯರ್ ಅಶ್ರಫ್, ಫುಟ್ಬಾಲ್ ಕ್ರೀಡಾ ಸಂಘಟಕ ಡಿ.ಎಂ. ಅಸ್ಲಂ, ಆರಿಫ್ ಬಾವಾ, ಜುಮಾ ಮಸೀದಿ ಖತೀಬ್ ಸಿರಾಜುದ್ದೀನ್ ಪೈಝಿ, ಕಂಡತಪಳ್ಳಿ ಖತೀಬ್ ರಫೀಕ್ ಮದನಿ, ಸಂಶುದ್ದೀನ್, ಪ್ರಮುಖರಾದ ಹಮೀದ್, ಫಾರೂಕ್, ಶಂಶುದ್ದೀನ್ ಕಂಡತಪಳ್ಳಿ, ನಮಿತಾ ರಾವ್, ಸಿ.ಎಂ. ಮುಸ್ತಫಾ ಮೊದಲಾದವರು ಉಪಸ್ಥಿತರಿದ್ದರು. ಸುಮಾರು 300 ಮಂದಿ ಶಿಬಿರದಲ್ಲಿ ಭಾಗವಹಿಸಿ, ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.





