Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಳಿವಿನಂಚಿನಲ್ಲಿ ಕೊಪ್ಪಳ ಜೈನ ಬಸದಿಗಳು

ಅಳಿವಿನಂಚಿನಲ್ಲಿ ಕೊಪ್ಪಳ ಜೈನ ಬಸದಿಗಳು

ವಾರ್ತಾಭಾರತಿವಾರ್ತಾಭಾರತಿ20 April 2016 12:03 AM IST
share

ಕೊಪ್ಪಳ, ಎ.19: ಬಸದಿಗಳು ಅಂದ್ರೆ ಜೈನ ಧರ್ಮೀಯರ ಶ್ರದ್ಧಾ, ಭಕ್ತಿಯ ಕೇಂದ್ರಗಳು. ಒಂದು ಕಾಲದಲ್ಲಿ ಕೊಪ್ಪಳದಲ್ಲಿ ಜೈನ ಧರ್ಮ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ 707 ಬಸದಿಗಳಿದ್ದು, ಸಲ್ಲೇಖನ ವ್ರತ ಮಾಡಲು ನಾನಾ ಮೂಲೆಗಳಿಂದ ಜೈನ ಧರ್ಮೀಯರು ಇಲ್ಲಿಗೆ ಬರುತ್ತಿದ್ದರು. ಇಂತಹ ಜೈನ ಕಾಶಿ ಕೊಪ್ಪಳದಲ್ಲೀಗ ಜೈನ ಬಸದಿಗಳು ಅಳಿವಿನ ಅಂಚಿನಲ್ಲಿವೆ. ಕೊಪ್ಪಳ ನಗರವೊಂದರಲ್ಲೇ ಇದ್ದ 707 ಬಸದಿಗಳ ಪೈಕಿ ಉಳಿದಿರುವುದು ಈಗ ಕೇವಲ ಒಂದೇ ಒಂದು.

ಜೈನ ಧರ್ಮೀಯರಿಗೆ ಶ್ರವಣಬೆಳಗೊಳ ಎಷ್ಟೊಂದು ಪವಿತ್ರ ಕ್ಷೇತ್ರವೋ ಅಷ್ಟೆ ಪವಿತ್ರ ಕ್ಷೇತ್ರ ಕೊಪ್ಪಳವೂ ಕೂಡ. ಒಂದು ಕಾಲದಲ್ಲಿ ಕೊಪ್ಪಳದಲ್ಲಿ ಜೈನ ಧರ್ಮ ಅತ್ಯಂತ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಈ ಕುರಿತಂತೆ ಕವಿ ರನ್ನ ಮತ್ತು ಚಾವುಂಡರಾಯನ ಕೃತಿಗಳಲ್ಲಿ ಕೊಪ್ಪಳದ ಪಾವಿತ್ರತೆ ಕುರಿತು ಉಲ್ಲೇಖವಿದೆ. ಕೊಪ್ಪಳ ನಗರವೊಂದರಲ್ಲಿಯೇ 707 ಜೈನ ಬಸದಿಗಳು ಇದ್ದವು ಎಂದು ಇತಿಹಾಸದಿಂದ ತಿಳಿದು ಬರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಈಗಲೂ ಕೂಡಾ ಬೆಟ್ಟಗುಡ್ಡಗಳಲ್ಲಿ, ಕೊಪ್ಪಳದ ಪರಿಸರದಲ್ಲಿ ಜೈನ ತೀರ್ಥಂಕರರ ಮೂರ್ತಿಗಳು, ಕುರುಹುಗಳು ಕಂಡುಬರುತ್ತಿವೆ. ಈ ಹಿಂದೆ ಜೈನ ಮುನಿಗಳು, ಜೈನ ಧರ್ಮದ ಅನುಯಾಯಿಗಳು ಕೊಪ್ಪಳಕ್ಕೆ ಬಂದು ಪವಿತ್ರ ಸಲ್ಲೇಖನ ವ್ರತ ಕೈಗೊಳ್ಳುತ್ತಿದ್ದರು. ಈ ಮೂಲಕ ಅವರು ಇಚ್ಛಾ ಮರಣ ಹೊಂದುತ್ತಿದ್ದರಂತೆ. ಹೀಗಾಗಿ, ಕೊಪ್ಪಳವನ್ನು ಹಿಂದಿನಿಂದಲೂ ಜೈನ ಕಾಶಿ ಎಂದು ಕರೆಯಲಾಗುತ್ತಿದೆ.
ಕೊಪ್ಪಳದಲ್ಲಿ ದೊರಕಿರುವ 390 ಶಾಸನಗಳ ಪೈಕಿ ಬಹುಪಾಲು ಜೈನ ಧರ್ಮಕ್ಕೆ ಸಂಬಂಧಿಸಿದವು. ಹಿಂದಿನ ಕಾಲದಲ್ಲಿ ಕೊಪ್ಪಳ ನಗರವೊಂದರಲ್ಲೇ ಇದ್ದ 707 ಜೈನ ಬಸದಿಗಳ ಪೈಕಿ ಈಗ ಉಳಿದುಕೊಂಡಿರುವುದು ಕೇವಲ ಒಂದೇ ಒಂದು ಬಸದಿ ಮಾತ್ರ. ಇರುವ ಇನ್ನೊಂದಿಷ್ಟು ಕುರುಹುಗಳು ಸೂಕ್ತ ರಕ್ಷಣೆ ಇಲ್ಲದೆ ಅಳಿವಿನ ಅಂಚಿನಲ್ಲಿವೆ. ಈ ಹಿನ್ನೆಲೆ ಜೈನ ಕಾಶಿ ಕೊಪ್ಪಳದಲ್ಲಿ ಈಗ ಉಳಿದಿರುವ ಇತಿಹಾಸದ ಕುರುಹುಗಳನ್ನು ರಕ್ಷಣೆ ಮಾಡಬೇಕಿದೆ. ಒಂದು ಕಾಲದಲ್ಲಿ ಜೈನರಿಗೆ ಪವಿತ್ರ ಕ್ಷೇತ್ರವಾಗಿದ್ದ ಕೊಪ್ಪಳದಲ್ಲಿನ ಈ ಜೈನ ಕುರುಹುಗಳು ಎಲ್ಲೆಂದರಲ್ಲಿ ಅನಾಥವಾಗಿ ಬಿದ್ದಿವೆ. ಇಂದು ಜಗತ್ತಿಗೆ ಅಹಿಂಸೆಯನ್ನು ಬೋಧಿಸಿದ ಮಂದಸ್ಮಿತನ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದ್ರೆ, ಅದರ ಜೊತೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ಜೈನ ಕುರುಹುಗಳನ್ನು ಸಂರಕ್ಷಣೆ ಮಾಡುವ ಮೂಲಕ ಆಚರಣೆಗೆ ಒಂದು ಅರ್ಥ ಕಲ್ಪಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X