Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಳವಳಿನಿರತ ಮಹಿಳೆಯರ ಮೇಲೆ ಪೊಲೀಸರ...

ಚಳವಳಿನಿರತ ಮಹಿಳೆಯರ ಮೇಲೆ ಪೊಲೀಸರ ಹಲ್ಲೆ: ಖಂಡನೆ

ಭವಿಷ್ಯನಿಧಿ ಕಾನೂನು ತಿದ್ದುಪಡಿ ಹಿಂಪಡೆಯಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 April 2016 10:14 PM IST
share

 ಚಿಕ್ಕಮಗಳೂರು, ಎ.20: ಕಳೆದೆರಡು ದಿನಗಳಿಂದ ಭವಿಷ್ಯ ನಿಧಿ ಕಾನೂನಿಗೆ ತಂದಿರುವ ತಿದ್ದುಪಡಿ ಹಿಂದೆಗೆಯಬೇಕೆಂದು ಹೋರಾಟ ನಡೆಸುತ್ತಿರುವ ಮಹಿಳೆಯರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಕೆ.ಎಂ.ಅಬ್ದುಲ್ ಜಬ್ಬಾರ್ ಹಾಗೂ ಐ.ಎನ್.ಟಿ.ಯು.ಸಿ ಮುಖಂಡ ಎಂ.ಸಿ.ಶಿವಾನಂದ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ಈ ರಾದ್ಧಾಂತಕ್ಕೆಲ್ಲಾ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವೇ ನೇರ ಹೊಣೆ ಯಾಗಿದೆ. 1952ರ ಭವಿಷ್ಯ ನಿಧಿ ಕಾನೂನು ಈ ದೇಶದ ದುಡಿಯುವ ಜನರ ಭವಿಷ್ಯದ ಕಾನೂನಾಗಿ ರೂಪುಗೊಂಡಿದೆ. ದುಡಿಯುವ ಜನರಿಗೆ ನಿವೃತ್ತಿ ಕಾಲಕ್ಕೆ ಕೂಡಿಟ್ಟ ಹಣ ಸಿಗುವುದಲ್ಲದೆ, ಮಕ್ಕಳ ವಿದ್ಯಾಭ್ಯಾಸ, ಮಕ್ಕಳ ಮದುವೆ, ಕಾಯಿಲೆಗಳು ಹಾಗೂ ಮನೆ ನಿರ್ಮಾಣ ಮುಂತಾದ ಆವಶ್ಯಕತೆಗೆ ಅನುಗುಣವಾಗಿ ಭವಿಷ್ಯ ನಿಧಿಯ ಉಳಿತಾಯ ಮೊತ್ತದ ಶೇ.60 ಕ್ಕಿಂತ ಹೆಚ್ಚಿಲ್ಲದಂತೆ ಪಡೆಯಬಹುದಾಗಿತ್ತು. ನರೇಂದ್ರ ಮೋದಿಯ ಕೇಂದ್ರ ಸರಕಾರ ಈಗಾಗಲೇ ಭವಿಷ್ಯ ನಿಧಿ ಹಣಕ್ಕೆ ತೆರಿಗೆ ಹಾಕುವ ಪ್ರಸ್ತಾಪವನ್ನು ಈ ವರ್ಷದ ಮುಂಗಡ ಪತ್ರದಲ್ಲಿ ತಂದಿದ್ದು, ದುಡಿಯುವ ವರ್ಗದ ಜನರ ಒತ್ತಾಯವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

ಕಾರ್ಮಿಕ ಸಂಘಟನೆಗಳ ಹಾಗೂ ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿದು ಪ್ರಸ್ತಾಪವನ್ನು ವಾಪಸ್ ತೆಗೆದುಕೊಂಡದ್ದು ಸ್ವಾಗತಾರ್ಹ. ಪುನಃ ಭವಿಷ್ಯ ನಿಧಿ ಮಾಲಕರ ಭಾಗದ ಹಣವನ್ನು ನಿವೃತ್ತಿಯಾಗುವವರೆಗೆ ಅಂದರೆ 58 ವರ್ಷದವರೆಗೆ ಪಡೆಯುವಂತಿಲ್ಲ ಎಂಬ ಕರಾಳ ತಿದ್ದುಪಡಿ ಮೂಲಕ ದುಡಿಯುವ ಜನರ ತುತ್ತಿನ ಬುತ್ತಿಗೆ ಕೇಂದ್ರ ಸರಕಾರ ಕೈ ಹಾಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಚಳವಳಿ ಮತ್ತು ಪೊಲೀಸರ ಹಲ್ಲೆಗೆ ಮೂಲ ಕಾರಣವಾಗಿದೆ. ಚಳವಳಿಯ ತೀವ್ರ ಸ್ವರೂಪವನ್ನು ಕಂಡ ಕೇಂದ್ರ ಸರಕಾರ ಆಗಸ್ಟ್ 2016ರವರೆಗೆ ಈ ತಿದ್ದುಪಡಿಯನ್ನು ಅಮಾನತಿನಲ್ಲಿ ಇಡುವುದಾಗಿ ಪ್ರಕಟಿಸುವ ಮೂಲಕ ಹೋರಾಟದ ತೀವ್ರತೆಯನ್ನು ತಗ್ಗಿಸುವ ತಂತ್ರ ಮಾಡಲು ಹೊರಟಿರುವುದು ಖಂಡನಾರ್ಹ ಎಂದು ದೂರಿದ್ದಾರೆ. ಕೂಡಲೆ ಕೇಂದ್ರ ಸರಕಾರವು ಭವಿಷ್ಯ ನಿಧಿ ಕಾನೂನಿಗೆ ತಂದಿರುವ ತಿದ್ದುಪಡಿಯನ್ನು ಗೊಂದಲ ಇಲ್ಲದೆ ಹಿಂದೆಗೆದುಕೊಳ್ಳಬೇಕೆಂದು ಜಿಲ್ಲೆಯ ಕಾರ್ಮಿಕ ಸಂಘಟನೆಗಳು ಒತ್ತಾಯಿಸುತ್ತವೆ. ಪೊಲೀಸರ ಹಲ್ಲೆಯನ್ನು ಖಂಡಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಎ.21ರಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X