ಮರಳು ಸಮಸ್ಯೆ: ನಾಳೆ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಉಡುಪಿ, ಎ.20: ಜಿಲ್ಲೆಯಲ್ಲಿ ಕೃತಕ ಮರಳು ಅಭಾವದಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಎ.21ರೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಎ.22ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ಕಾರ್ಮಿಕ ವೇದಿಕೆ ಎಚ್ಚರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ರವಿ ಶೆಟ್ಟಿ, ಜಿಲ್ಲೆಯಲ್ಲಿ ಮರುಳುಗಾರಿಕೆಗೆ ಜಿಲ್ಲಾಡಳಿತ ಹೇರಿದ ನಿರ್ಬಂಧದಿಂದಾಗಿ ಮರಳಿನ ಕೊರತೆ ಉಂಟಾಗಿದೆ. ಅಕ್ರಮ ಮರಳುಗಾರಿಕೆ ಹೆಚ್ಚಿದೆ. ಇದನ್ನೇ ನಂಬಿದ ಸಾವಿರಾರು ಕಾರ್ಮಿಕರ ಬದುಕು ಅತಂತ್ರವಾಗಿದೆ. ಆದ್ದರಿಂದ ಜಿಲ್ಲಾಡಳಿತ ಹೇರಿರುವ ನಿರ್ಬಂಧವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಕೆ.ಸುರೇಶ್ ಶೇರೆಗಾರ್, ಚಂದ್ರಿಕಾ ಎಸ್. ಶೆಟ್ಟಿ, ರಾಘವೇಂದ್ರ ಕುಂದರ್, ರೋಹಿತ್ ಕರಂಬಳ್ಳಿ, ರವಿಶಾಸ್ತ್ರಿ ಮುಂತಾದವರು ಉಪಸ್ಥಿತರಿದ್ದರು.
Next Story