ವಿದ್ಯುತ್ ಆಘಾತಕ್ಕೆ ಯುವಕ ಬಲಿ
ಬೆಳ್ತಂಗಡಿ, ಎ.20: ಗೇರುಕಟ್ಟೆ ಬಸ್ ನಿಲ್ದಾಣದ ಬಳಿ ಸಿಸಿಟಿವಿ ಕ್ಯಾಮೆರಾ ಅಳವ ಡಿಒಸಿದ್ದ ಕಂಬದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಳಿಯ ಗ್ರಾಮ ಬೆರ್ಕೆತ್ತೋಡಿ ನಿವಾಸಿ ಮನೋಹರ(28) ಮೃತಪಟ್ಟವರು. ಅವರು ಇಂದು ಬೆಳಗ್ಗೆ ಗೇರುಕಟ್ಟೆ ಬಸ್ ನಿಲ್ದಾಣದ ಬಳಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದ ಕಂಬಕ್ಕೆ ಒರಗಿ ನಿಂತಾಗ ಅಚಾನಕ್ ಆಗಿ ವಿದ್ಯುತ್ ಆಘಾತ ಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಸಿಸಿಟಿವಿ ಕ್ಯಾಮೆರಾವನ್ನು ದೂರವಾಣಿ ಕಬ್ಬಿಣದ ಕಂಬಕ್ಕೆ ಅಳವಡಿಸಲಾಗಿದ್ದು, ಇಂದು ಆಕಸ್ಮಿಕವಾಗಿ ಇದರಲ್ಲಿ ವಿದ್ಯುತ್ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story