Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋನಿಯಾ ಗಾಂಧಿಗೇ ಕೈ ಕೊಟ್ಟರೆ...

ಸೋನಿಯಾ ಗಾಂಧಿಗೇ ಕೈ ಕೊಟ್ಟರೆ ಕಾಂಗ್ರೆಸಿಗರು ?

ವಾರ್ತಾಭಾರತಿವಾರ್ತಾಭಾರತಿ21 April 2016 1:04 PM IST
share
ಸೋನಿಯಾ ಗಾಂಧಿಗೇ ಕೈ ಕೊಟ್ಟರೆ ಕಾಂಗ್ರೆಸಿಗರು ?

ಹೊಸದಿಲ್ಲಿ, ಎ. 20 : ಕಾಂಗ್ರೆಸ್ ನಾಯಕರ ಪಕ್ಷದೆಡೆಗಿನ ಬದ್ಧತೆ ಹಾಗು ನಾಯಕತ್ವದ ಮೇಲೆ ಇರುವ ಪ್ರಾಮಾಣಿಕ ನಂಬಿಕೆ ಬಗ್ಗೆ ಮತ್ತೆ ಪ್ರಶ್ನೆಗಳೆದ್ದಿವೆ. ಸೋನಿಯಾ ಎಂದರೆ ಅಮ್ಮ, ತಾಯಿ ಎಂದು ಬಹಿರಂಗವಾಗಿ ಘೋಷಿಸುವ, ಅವರೆದುರು ದೀನರಾಗಿ ನಿಲ್ಲುವ ಪಕ್ಷದ ನಾಯಕರು ಅಗತ್ಯ ಬಿದ್ದಾಗ , ಸೂಕ್ಷ್ಮ ಸಂದರ್ಭಗಳಲ್ಲಿ ಪಕ್ಷದ, ನಾಯಕತ್ವದ ರಕ್ಷಣೆಗೆ ಅಷ್ಟೇ ಬದ್ಧರಾಗಿ ನಿಲ್ಲುವುದಿಲ್ಲ ಎಂಬ ಮಾತು ಈಗ ಮತ್ತೆ ನಿಜವಾಗಿದೆ. ಪಕ್ಷವನ್ನು ಸಮರ್ಥಿಸಿಕೊಳ್ಳಲು, ತಮ್ಮ ನಾಯಕರ ಪರ ನಿಲ್ಲಲು ಹಿಂಜರಿಯುವ ನಾಯಕರು ಇರುವುದು ಕಾಂಗ್ರೆಸ್ ನಲ್ಲಿ ಮಾತ್ರ. 

ಇಷ್ರತ್  ಜಹಾನ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಆದೇಶದ ಮೇರೆಗೆ ಆಗಿನ ಗೃಹ ಸಚಿವ ಚಿದಂಬರಂ ಎರಡನೇ ಅಫಿದವಿತ್ ಸಲ್ಲಿಸಿ ಇಷ್ರತ್ ಅಮಾಯಕೆ ಎಂದು ಸುಳ್ಳು ಹೇಳಿದರು ಎಂದು ಬಿಜೆಪಿ ನೇರವಾಗಿ ಆರೋಪ ಮಾಡಿದೆ. ಇದು ಬಹು ಗಂಭೀರ ಆರೋಪ. ಇದನ್ನು ಸಮರ್ಥವಾಗಿ ಎದುರಿಸದಿದ್ದರೆ ರಾಜಕೀಯವಾಗಿ ಪಕ್ಷಕ್ಕೆ ಇದು ಬಹಳ ದುಬಾರಿಯಾಗಲಿದೆ. ಆದರೆ ಪಕ್ಷಾಧ್ಯಕ್ಷೆಯ ಮೇಲೆಯೇ ಇಂತಹ ಗಂಭೀರ ಆರೋಪ ಬಂದಾಗ ಅದನ್ನು ಅದಕ್ಕೆ ಸಮರ್ಥವಾಗಿ ಪ್ರತಿದಾಳಿ ನಡೆಸುವಲ್ಲಿ ಕಾಂಗ್ರೆಸಿಗರು ಎಡವಿದ್ದಾರೆ. ಹೀಗೆಂದು ಬೇರೆ ಯಾರೂ ಹೇಳಿಲ್ಲ. ಸ್ವತಹ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗೆ ಅನಿಸಿದೆ. ಇದಕ್ಕಾಗಿ ಅವರು ಪಕ್ಷದ ನಾಯಕರ ಮೇಲೆ ಭಾರೀ ಗರಂ ಆಗಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. 

ಮೊದಲು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು ಸೋನಿಯಾ ಹೆಸರು ಎಳೆದು ತಂದರು. ಮರುದಿನ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ನೇರವಾಗಿ ಸೋನಿಯಾ ವಿರುದ್ಧ ಆರೋಪ ಮಾಡಿ ಅವರೇ ಚಿದಂಬಂರಂ ಗೆ ಹೇಳಿ ಎರಡನೇ ಅಫಿದವಿತ್ ಸಲ್ಲಿಸುವ ಹಾಗೆ ಮಾಡಿದರು ಎಂದರು. ಈ ಎರಡೂ ಆರೋಪಕ್ಕೂ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿತಾದರೂ ಸೋನಿಯಾರನ್ನು ರಕ್ಷಿಸುವ ಪ್ರಯತ್ನ ಮಾಡಲೇ ಇಲ್ಲ. ಸಂಬಿತ್ ಪಾತ್ರ ಆರೋಪ ಮಾಡಿದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್ ಪ್ರತಿಕ್ರಿಯೆ  ಬಿಡುಗಡೆ ಮಾಡಿದರೂ ಅದರಲ್ಲಿ ಸೋನಿಯಾರ ಉಲ್ಲೇಖವೇ ಇರಲಿಲ್ಲ. ಬಹಳ ತಡವಾಗಿ ಬುಧವಾರ ಪಕ್ಷದ ವತಿಯಿಂದ  ಈ ಪ್ರಕರಣದಲ್ಲಿ ಸೋನಿಯಾ ಗಾಂಧೀ ಅವರ ಯಾವುದೇ ಪಾತ್ರ ಇಲ್ಲ ಎಂಬ ಹೇಳಿಕೆ ನೀಡಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X