Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿಯನ್ನು ಟೀಕಿಸಬೇಡಿ !

ಮೋದಿಯನ್ನು ಟೀಕಿಸಬೇಡಿ !

ಸಂಕಷ್ಟದಲ್ಲಿರುವ ‘ತೆಹಲ್ಕಾ’ ಪತ್ರಕರ್ತರಿಗೆ ಫರ್ಮಾನು

ವಾರ್ತಾಭಾರತಿವಾರ್ತಾಭಾರತಿ22 April 2016 11:24 AM IST
share
ಮೋದಿಯನ್ನು ಟೀಕಿಸಬೇಡಿ !

ನವದೆಹಲಿ, ಎ.22: ತೆಹಲ್ಕಾ ಪತ್ರಿಕೆಯ ಉದ್ಯೋಗಿಗಳು ಸಂಕಷ್ಟದಿಂದಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಉದ್ಯೋಗಿಗಳನ್ನು ಕಚೇರಿಗೆ ಪ್ರವೇಶಿಲು ಬಿಟ್ಟಿಲ್ಲ. ಹೆಚ್ಚಿನವರು ಕಳೆದ ಮೂರು ತಿಂಗಳಿಗಳಿಂದ ವೇತನ ಪಡೆದಿಲ್ಲ. ಬಿಜೆಪಿ ಹಾಗೂ ಬಲಪಂಥೀಯ ಹಿಂದುತ್ವ ಸಂಘಟನೆಗಳನ್ನು ಟೀಕಿಸದಂತೆ ತಮಗೆ ಫರ್ಮಾನು ಹೊರಡಿಸಲಾಗಿದೆಯೆಂದು ಹಿರಿಯ ಉದ್ಯೋಗಿಗಳು ದೂರುತ್ತಿದ್ದಾರೆ.

ತನ್ನ ಮಾಜಿ ಮುಖ್ಯ ಸಂಪಾದಕ ತರುಣ್ ತೇಜ್‌ಪಾಲ್ ಲೈಂಗಿಕ ಕಿರುಕುಳ ಪ್ರಕರಣವೊಂದರಲ್ಲಿ ಸಿಕ್ಕಿಹಾಕಿಕೊಂಡು ಹುದ್ದೆ ತೊರೆದಂದಿನಿಂದ ಸಂಕಷ್ಟದಲ್ಲಿದ್ದ ತೆಹಲ್ಕಾಗೆ ಈಗ ಮತ್ತೊಂದು ತೊಂದರೆ ಎದುರಾಗಿದೆ. ಉದ್ಯೋಗಿಗಳು ತಮ್ಮ ಬಾಕಿ ವೇತನ ಆಗ್ರಹಿಸಿ ಹಾಗೂ ತಮ್ಮನ್ನು ರಾಜೀನಾಮೆ ನೀಡುವಂತೆ ಮಾಡಲು ಆಡಳಿತ ಮಂಡಳಿ ನಡೆಸುತ್ತಿರುವ ತಂತ್ರಗಾರಿಕೆಯನ್ನು ವಿರೋಧಿಸಿ ಈಗ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

ಉದ್ಯೋಗಿಗಳ ಸಂಖ್ಯೆಯನ್ನು ಅರ್ಧಕ್ಕೆ ಕಡಿತಗೊಳಿಸಿ ತೆಹಲ್ಕಾವನ್ನು ಪ್ರಾಕ್ಷಿಕವನ್ನಾಗಿಸಲು ಆಡಳಿತ ಮಂಡಳಿ ತೆಗೆದುಕೊಂಡ ನಿರ್ಧಾರದಿಂದ 20ಕ್ಕೂ ಹೆಚ್ಚು ಉದ್ಯೋಗಿಗಳು ದಾರಿ ಕಾಣದಾಗಿದ್ದಾರೆ. ಸಂಪಾದಕೀಯ ಉದ್ಯೋಗಿಗಳು ತಮ್ಮ ಸಮಸ್ಯೆಗಳನ್ನು ವಿವರಿಸಿ ಆಡಳಿತ ಮಂಡಳಿಗೆ ಬರೆದ ಮನವಿ ಪತ್ರಗಳು ಹಾಗೂ ಈಮೇಲ್‌ಗಳು ದಿ ವೈರ್ ಗೆ ಲಭ್ಯವಾಗಿವೆಯೆಂದು ಪತ್ರಿಕೆ ಹೇಳಿಕೊಂಡಿದೆ.

ತೆಹಲ್ಕಾ ಕಚೇರಿಯಲ್ಲಿ 43 ಮಂದಿ ಉದ್ಯೋಗಿಗಳಿದ್ದರೂ ಆಡಳಿತ ಮಂಡಳಿ ಇತ್ತೀಚೆಗೆ 20 ಮಂದಿ ಉದ್ಯೋಗಿಗಳ ಹೆಸರಿರುವ ಪಟ್ಟಿಯೊಂದನ್ನು ಬಿಡುಗಡೆಗೊಳಿಸಿದ್ದು ಈ ಪಟ್ಟಿಯಲ್ಲಿ ಹೆಸರಿರುವ ಉದ್ಯೋಗಿಗಳನ್ನಷ್ಟೇ ನೆಹ್ರೂ ಪ್ಲೇಸ್ ನಲ್ಲಿರುವ ಸಂಸ್ಥೆಯ ಕಚೇರಿಗೆ ಪ್ರವೇಶಿಸಲು ಅನುಮತಿಸಲಾಗಿದೆ. ಉಳಿದ ಉದ್ಯೋಗಿಗಳ ಸೇವೆಯನ್ನು ಅಂತ್ಯಗೊಳಿಸಲಾಗಿಲ್ಲ ಹಾಗೂ ಅವರು ರಾಜೀನಾಮೆಯನ್ನೂ ನೀಡಿಲ್ಲ. ಇದು ತಾವು ರಾಜೀನಾಮೆ ನೀಡುವಂತೆ ಬಲವಂತಪಡಿಸುವ ವಿಧಾನವಲ್ಲದೆ ಬೇರಿನ್ನೇನಲ್ಲವೆಂದು ಹಲವು ಉದ್ಯೋಗಿಗಳು ದೂರಿದ್ದಾರೆ.

ಬಿಜೆಪಿ ವಿರೋಧಿ ಹಾಗೂ ಸರಕಾರ ವಿರೋಧಿ ವರದಿಗಳನ್ನು ಯಾ ಲೇಖನಗಳನ್ನು ತಯಾರಿಸದಂತೆ ತಮಗೆ ತಾಕೀತು ಮಾಡಲಾಗಿದೆಯೆಂದು ಹಲವು ಉದ್ಯೋಗಿಗಳು ಹೇಳಿಕೊಂಡಿದ್ದಾರೆ. ತಮ್ಮಸಮಸ್ಯೆಗೆ ಪರಿಹಾರ ಕಾಣದೆ ಅವರೀಗ ದೆಹಲಿಯ ಕಾರ್ಮಿಕ ಆಯುಕ್ತರಿಗೆ ಪತ್ರ ಬರೆದಿದ್ದು ಈ ಪತ್ರದ ಪ್ರತಿ ಹಾಗೂ ಪತ್ರ ದೊರೆತ ಬಗ್ಗೆ ಕಾರ್ಮಿಕ ಸಚಿವ ಗೋಪಾಲ್ ರೈ ಕಚೇರಿಯಿಂದ ದೊರೆತ ಸ್ವೀಕೃತಿ ಪತ್ರದ ಪ್ರತಿ ತನ್ನಲ್ಲಿದೆಯೆಂದು ದಿ ವೈರ್ ಹೇಳಿಕೊಂಡಿದೆ.


ಪತ್ರಿಕೆಯನ್ನು ಪ್ರಕಟಿಸುವ ಅನಂತ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಲ್ಲಿ ಹೆಚ್ಚಿನ ಶೇರು ಹೊಂದಿರುವ ಹಾಗೂ ಆಲ್ಕೆಮಿಸ್ಟ್ ಸಮೂಹದ ಅಧ್ಯಕ್ಷ ಕೆ ಡಿ ಸಿಂಗ್ ಅವರನ್ನು ಸಂಪರ್ಕಿಸಲು ದಿ ವೈರ್ ನಡೆಸಿದ ಪ್ರಯತ್ನ ಸಫಲವಾಗಿಲ್ಲ. ತೆಹಲ್ಕಾದ ಪ್ರಕಾಶಕ ಹಾಗೂ ಜನರಲ್ ಮ್ಯಾನೇಜರ್ ಸ್ವಿಂದರ್ ಬಜ್ವಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X