Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ವಿಧಾನಸಭಾ ಚುನಾವಣೆ ಯನ್ನು...

ಕಾಸರಗೋಡು : ವಿಧಾನಸಭಾ ಚುನಾವಣೆ ಯನ್ನು ಪರಿಸರ ಸ್ನೇಹಿ ಚುನಾವಣೆಯನ್ನಾಗಿಸಲು ಜಿಲ್ಲಾಡಳಿತ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ22 April 2016 11:45 AM IST
share
ಕಾಸರಗೋಡು : ವಿಧಾನಸಭಾ ಚುನಾವಣೆ ಯನ್ನು ಪರಿಸರ  ಸ್ನೇಹಿ ಚುನಾವಣೆಯನ್ನಾಗಿಸಲು ಜಿಲ್ಲಾಡಳಿತ ತೀರ್ಮಾನ

ಕಾಸರಗೋಡು, ಎ. 22 :  ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಪರಿಸರ  ಸ್ನೇಹಿ ಚುನಾವಣೆಯನ್ನಾಗಿಸಲು  ಜಿಲ್ಲಾಡಳಿತ ತೀರ್ಮಾನಿಸಿದೆ.
ಪರಿಸರಕ್ಕೆ  ದೋಷವನ್ನುಂಟು ಮಾಡುವ  ಫ್ಲೆಕ್ಸ್ , ಪ್ಲಾಸ್ಟಿಕ್ , ಡಿಸ್ಪೋಸಲ್ ವಸ್ತುಗಳು ಬದಲು  ಮರುಬಳಕೆಗೆ  ಸಾಧ್ಯವಿರುವ  ಫ್ಲೆಕ್ಸ್ , ಪೇಪರ್ , ಮಡಲು , ಬಟ್ಟೆ  ಮೊದಲಾದವುಗಳನ್ನು  ಬಳಸುವಂತೆ  ರಾಜಕೀಯ ಪಕ್ಷಗಳಿಗೆ  ಮನವಿ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ  ಇ.ದೇವದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚುನಾವಣೆಗೆ ಸಂಬಂಧಿಸಿ ಎಲ್ಲಾ ರೀತಿಯ  ತರಬೇತಿ ನೀಡಲಾಗಿದೆ. ಮತಗಟ್ಟೆ ಗಳಲ್ಲಿ ಮತ್ತು ಇತರ ಕಡೆಗಳಲ್ಲಿ   ಬಳಸುವ ತ್ಯಾಜ್ಯ ವಸ್ತುಗಳನ್ನು  ಸಂಸ್ಕರಿಸಲು  ಚುನಾವಣಾ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಪರಿಸರ ಸ್ನೇಹಿ ಚುನಾವಣೆ ನಡೆಸಲು  ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಲಾಗುವುದು. ಜಿಲ್ಲೆಯ ಎಲ್ಲಾ ಮತಗಟ್ಟೆ ಗಳಲ್ಲಿ ಇದಕ್ಕಾಗಿ ಹಸಿರು ಸ್ವಯಂ ಸೇವಕರನ್ನು  ನೇಮಿಸಲಾಗುವುದು. ಆಯ್ದ ಮತಗಟ್ಟೆಗಳು ಮತ್ತು  ಪರಿಸರದಲ್ಲಿ  ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲಾಗುವುದು.  ಮತಗಟ್ಟೆಗಳಲ್ಲಿ ಊಟ ಸಹಿತ ಎಲ್ಲಾ ಚಟುವಟಿಕೆಗೆಗಳಿಗೆ  ಪ್ಲಾಸ್ಟಿಕ್ , ಡಿಸ್ಪಸಲ್  ವಸ್ತುಗಳ ಬಳಕೆ  ಬದಲು ಮರು ಬಳಸುವ ವಸ್ತುಗಳನ್ನು ಬಳಸಬೇಕಿದೆ. ಪರಿಸರ ಸ್ನೇಹಿ  ಚುನಾವಣೆ ಬಗ್ಗೆ  ತಿಳುವಳಿಕೆ  ಮೂಡಿಸಲಾಗುವುದು.   ಇದಕ್ಕಾಗಿ ವಿದ್ಯಾರ್ಥಿಗಳು , ಸಂಘ ಸಂಸ್ಥೆಗಳು , ಖಾಸಗಿ ಸಂಸ್ಥೆಗಳು , ರಾಜಕೀಯ ಪಕ್ಷಗಳು ,  ಸ್ಥಳೀಯಾಡಳಿತ ಸಂಸ್ಥೆಗಳು , ಕುಟುಂಬ ಶ್ರೀ ಕಾರ್ಯಕರ್ತರು ಮೊದಲಾದವರ ನೆರವು ಮಾಡಲಾಗುವುದು  ಎಂದು ಜಿಲ್ಲಾಧಿಕಾರಿ ತಿಳಿಸಿದರು.
 

ಚುನಾವಣೆಗೆ ಸಬಂಧಿಸಿದ ಕಛೇರಿಗಳು , ಪರಿಸರವನ್ನು  ಜೀರೋ ವೇಸ್ಟ್  ಆಗಿ  ಸಂರಕ್ಷಿಸಬೇಕು , ಡಿಸ್ಪೋಸಲ್ ಗ್ಲಾಸ್ , ಪ್ಲೇಟ್ , ಮಿನರಲ್  ಬಾಟಲಿ , ಆಹಾರ ಪ್ಯಾಕ್ ಮಾಡಿದ ಪ್ಲಾಸ್ಟಿಕ್  ಕವರ್ ಮೊದಲಾದವುಗಳನ್ನು ಕೈ ಬಿಡಬೇಕು , ಸ್ಟೀಲ್ ಗ್ಲಾಸ್ ,  ಸ್ಟೀಲ್ ಪ್ಲೇಟ್ ಮೊದಲಾದವುಗಳನ್ನು ಬಳಸಬೇಕು, ಪ್ರಚಾರಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು  ಎಂದು ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.  

ಈ ಸಂದರ್ಭದಲ್ಲಿ ಯೋಜನೆಯ ಲಾಂಛನವನ್ನು ಜಿಲ್ಲಾಧಿಕಾರಿ ಬಿಡುಗಡೆ ಗೊಳಿಸಿದರು. 
ಶುಚಿತ್ವ ಮಿಶನ್ ನ  ಸಂಯೋಜಕ  ಕೆ . ಪ್ರದೀಪ್ ಹಾಗೂ ವಾರ್ತಾ ಇಲಾಖೆ ಸಹಾಯಕ ಅಧಿಕಾರಿ  ಮಧುಸೂದನ್  ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X