ಪಂಜ: ಉಚಿತ ನೇತ್ರ ಚಿಕಿತ್ಸಾ ಶಿಬಿರ
ಪಂಜ, ಎ. 22: ಸ್ವಾಮಿ ವಿವೇಕನಂದ ಸೇವ ಸಂಸ್ಥೆ ಕಿನ್ನಿಗೋಳಿ, ಸಂಚಾರಿ ನೇತ್ರ ಘಟಕ ವೆನ್ಲಾಕ್, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಮಂಗಳೂರು, ಶ್ರೀ ಹರಿಪಾದ ಜಾರಂದಾಯ ಯುವಕ ಮತ್ತು ಯುವತಿ ಮಂಡಲ ಪಂಜ ಕೊಯ್ಕುಡೆ ಇವುಗಳ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರವು ಪಂಜ ಶ್ರೀ ಹರಿಪಾದ ಜಾರಂದಾಯ ಯುವಕ ಮತ್ತು ಯುವತಿ ಮಂಡಲದ ವಠಾರದಲ್ಲಿ ನಡೆಯಿತು.
ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಕಸ್ತೂರಿ ಪಂಜ, ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಗ್ರಾಮೀಣ ಪ್ರದೇಶದ ಬಡವರ ಕಲ್ಯಾಣಕ್ಕಾಗಿ ಪಣತೊಟ್ಟು ನಿಂತಿದ್ದು, ಲಕ್ಷಾಂತರ ರೂಪಾಯಿಗಳು ವ್ಯಯಿಸಬೇಕಾದ ಚಿಕಿತ್ಸೆ ಸಹಿತ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಕಲ್ಪಿಸುತ್ತಿದ್ದು ಎಲ್ಲರೂ ಇದರ ಪ್ರಯೋಜನ ಪಡೆದು ಕೊಂಡು ಅಂಧತ್ವ ನಿವಾರಣೆಯಲ್ಲಿ ಪಾಲುದಾರರಾಗಬೇಕು. ಅಂಧತ್ವ ನಿವಾರಣೆಯ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ವಿವೇಕಾನಂದ ಸೇವಾ ಸಂಸ್ಥೆ ಎಲ್ಲಾ ಸಂಘ ಸಂಸ್ಥೆಗಳಿಗೆ ಮಾದರಿ ಎಂದರು.
ಸ್ವಾಮಿ ವಿವೇಕನಂದ ಸೇವಾ ಸಂಸ್ಥೆ ಕಿನ್ನಿಗೋಳಿಯ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಪಂಜ ಶ್ರೀ ಹರಿಪಾದ ಜಾರಂದಾಯ ಯುವಕ ಮಂಡಲದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಯುವತಿ ಮಂಡಲದ ಅಧ್ಯಕ್ಷೆ ಲೋಲಾಕ್ಷಿ, ತಾ.ಪಂ. ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಪಂಜ ಶ್ರೀ ಹರಿಪಾದ ಜಾರಂದಾಯ ಯುವಕ ಮತ್ತು ಯುವತಿ ಮಂಡಲದ ಗೌರವಾಧ್ಯಕ್ಷ ವಾಸುದೇವ ಭಟ್, ಕೆಮ್ರಾಲ್ ಗ್ರಾ. ಪಂ. ಅಧ್ಯಕ್ಷ ನಾಗೇಶ್, ವೆನ್ಲಾಕ್ ಆಸ್ಪತ್ರೆಯ ನೇತ್ರ ವೈದ್ಯಾಧಿಕಾರಿಗಳಾದ ಡಾ. ಅನಿಲ್ ಕುಮಾರ್, ಡಾ. ಬಿಂಧು ಮತ್ತಿತರರು ಉಪಸ್ಥಿತರಿದ್ದರು.
ಸ್ವಾಮಿ ವಿವೇಕನಂದ ಸೇವಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೀತಾರಾಮ ಎಳತ್ತೂರು ಕಾರ್ಯಕ್ರಮ ನಿರೂಪಿಸಿ, ದನ್ಯವಾದ ಗೈದರು.