Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2050ರ ವೇಳೆಗೆ ಆಮದು ನೀರೇ ಗತಿ!?

2050ರ ವೇಳೆಗೆ ಆಮದು ನೀರೇ ಗತಿ!?

ವಾರ್ತಾಭಾರತಿವಾರ್ತಾಭಾರತಿ22 April 2016 6:08 PM IST
share
2050ರ ವೇಳೆಗೆ ಆಮದು ನೀರೇ ಗತಿ!?

ಮುಂಬೈ,ಎ.22: ಅಂತರ್ಜಲ ದಾಸ್ತಾನು ದಿನೇದಿನೇ ಕುಸಿಯುತ್ತಿದ್ದು, 2050ರ ವೇಳೆಗೆ ತಲಾ ವ್ಯಕ್ತಿಗೆ ದಿನವೊಂದಕ್ಕೆ ಲಭ್ಯವಾಗುವ ನೀರಿನ ಪ್ರಮಾಣ 3,120 ಲೀ.ಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಆಗ ದೇಶವು ಕುಡಿಯುವ ನೀರನ್ನು ಆಮದು ಮಾಡಿಕೊಳ್ಳುವ ಅನಿವಾರ್ಯತೆಗೊಳಗಾದರೆ ಆಶ್ಚರ್ಯ ಪಡಬೇಕಾಗಿಲ್ಲ.

2001ರ ಅಂಕಿಅಂಶಗಳನ್ನು ಪರಿಗಣಿಸಿದರೆ ಇಂದು ದೇಶದಲ್ಲಿ ದಿನವೊಂದಕ್ಕೆ ತಲಾ ವ್ಯಕ್ತಿಗೆ ಅಂತರ್ಜಲ ಲಭ್ಯತೆಯು 5,120 ಲೀ.ಗೆ ಇಳಿದಿದ್ದು, ಇದು 1951ರಲ್ಲಿ ಲಭ್ಯವಿದ್ದ 14,180 ಲೀ.ನ ಶೇ.35ರಷ್ಟಾಗಿದೆ. 1991ರಲ್ಲಿ ದೇಶದಲ್ಲಿ ಅಂತರ್ಜಲ ಪ್ರಮಾಣ 1951ರ ದಾಸ್ತಾನಿನ ಅರ್ಧದಷ್ಟೂ ಇರಲಿಲ್ಲ. 2025ರ ವೇಳೆಗೆ ದಿನವೊಂದಕ್ಕೆ ತಲಾ ವ್ಯಕ್ತಿಗೆ ನೀರಿನ ಲಭ್ಯತೆಯು ಮೂಲವರ್ಷದ ಶೇ.25ರಷ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಅಂತರ್ಜಲದ ಈಗಿನ ಬಳಕೆಯ ಪ್ರಮಾಣದ ಆಧಾರದಲ್ಲಿ 2050ರ ವೇಳೆಗೆ ಇದು ಶೇ.22ಕ್ಕೆ ಇಳಿಯಬಹುದು ಎಂದು ಕೇಂದ್ರ ಅಂತರ್ಜಲ ಮಂಡಳಿ(ಸಿಜಿಡಬ್ಲೂಬಿ)ಯ ಅಧ್ಯಯನವು ಎಚ್ಚರಿಕೆ ನೀಡಿದೆ.

ಕೆರೆ-ಸರೋವರಗಳು ಮತ್ತು ಬಾವಿಗಳಲ್ಲಿ ಮಳೆನೀರಿನ ಕೊಯ್ಲು ಕಣ್ಮರೆಯಾಗುತ್ತಿರುವುದು, ಅಂತರ್ಜಲದ ಬಗ್ಗೆ ಅರಿವಿನ ಕೊರತೆ ಮತ್ತು ಕಡಿಮೆಯಾಗುತ್ತಿರುವ ಹಸಿರು ಪರಿಸರ ಇವೆಲ್ಲ ನಮ್ಮ ಕಾಲ ಕೆಳಗಿನ ನೆಲದ ಒಡಲಲ್ಲಿಯ ನೀರಿನ ಮಟ್ಟ ತಗ್ಗುತ್ತಿರುವುದಕ್ಕೆ ಪ್ರಮುಖ ಕಾರಣಗಳಾಗಿವೆ.

ಕ್ಷಿಪ್ರ ಅಭಿವೃದ್ಧಿ ಮತ್ತು ವಿವಿಧ ಉದ್ದೇಶಗಳಿಗೆ ಅಂತರ್ಜಲದ ಬಳಕೆಯು ನೀರಾವರಿಯಾಶ್ರಿತ ಕೃಷಿಯ ವಿಸ್ತರಣೆ, ಒಟ್ಟಾರೆ ಆರ್ಥಿಕ ಬೆಳವಣಿಗೆ ಮತ್ತು ನಗರ ಪ್ರದೇಶದಲ್ಲಿ ಜೀವನಮಟ್ಟ ಸುಧಾರಣೆಗೆ ಕೊಡುಗೆಯನ್ನು ನೀಡಿದೆಯಾದರೂ, ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಹಾಗೂ ನೀರಾವರಿಗೆ ಅಗತ್ಯ ನೀರಿನ ಪ್ರಮುಖ ಮೂಲವಾಗಿರುವ ಅಂತರ್ಜಲದ ಪ್ರಮಾಣವು ತ್ವರಿತವಾಗಿ ಬರಿದಾಗುತ್ತಿದೆ ಎಂದು ಸಿಜಿಡಬ್ಲೂಬಿ ಅಂತರ್ಜಲವನ್ನು ಕೃತಕವಾಗಿ ಮರುಪೂರಣ ಮಾಡುವ ಕುರಿತ ತನ್ನ ಮಾಸ್ಟರ್ ಪ್ಲಾನ್‌ನಲ್ಲಿ ಹೇಳಿದೆ.

ತ್ವರಿತವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಅದರ ಹೆಚ್ಚುತ್ತಿರುವ ಬೇಡಿಕೆಗಳನ್ನು ಪರಿಗಣಿಸಿದರೆ ತಲಾ ವ್ಯಕ್ತಿಗೆ ನೀರಿನ ಲಭ್ಯತೆ ವಾಸ್ತವ ಬಳಕೆಯ ಪ್ರಮಾಣದಷ್ಟೇ ಆಗುವ ದಿನಗಳು ದೂರವಿಲ್ಲವೇನೋ...?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X