Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೆಹ್ರಮ್ ಕೋಟಾದಡಿಯಲ್ಲಿ 200 ಸೀಟು ಲಭ್ಯ

ಮೆಹ್ರಮ್ ಕೋಟಾದಡಿಯಲ್ಲಿ 200 ಸೀಟು ಲಭ್ಯ

ಹಜ್‌ಯಾತ್ರೆ-2016

ವಾರ್ತಾಭಾರತಿವಾರ್ತಾಭಾರತಿ22 April 2016 10:56 PM IST
share

ಬೆಂಗಳೂರು, ಎ.22: ಭಾರತದ ವಿದೇಶಾಂಗ ಸಚಿವಾಲಯವು ಕೇಂದ್ರೀಯ ಹಜ್ ಸಮಿತಿಗೆ ಮೆಹ್ರಮ್ ಕೋಟಾ(ಸಂಗಾತಿ)ದಡಿಯಲ್ಲಿ 200 ಹಜ್ ಸೀಟುಗಳನ್ನು ಸೌದಿ ಅರೇಬಿಯಾ ಸರಕಾರದ ನಿಯಮಾವಳಿಗಳ ಅನ್ವಯ ಹಂಚಿಕೆ ಮಾಡುವಂತೆ ನೀಡಿದೆ.
ಹಜ್‌ಯಾತ್ರೆಗೆ ತೆರಳುವ ಮಹಿಳೆ ಶರಿಯಾ ಕಾನೂನಿನ್ವಯ ತನ್ನ ಸಂಗಾತಿಯೊಂದಿಗೆ ಮಾತ್ರ ತೆರಳಬೇಕು. ಅರ್ಹ ಯಾತ್ರಿಗಳಿಗೆ ಈ ಸೀಟುಗಳನ್ನು ಹಂಚಿಕೆ ಮಾಡುವಂತೆ ಕೇಂದ್ರೀಯ ಹಜ್ ಸಮಿತಿಗೆ ಭಾರತ ಸರಕಾರವು ನಿರ್ದೇಶನ ನೀಡಿದೆ.
ಮೆಹ್ರಮ್ ಕೋಟಾದಡಿಯಲ್ಲಿ ಮಹಿಳೆಯೊಂದಿಗೆ ಪ್ರಯಾಣಿಸುವ ಸಂಗಾತಿಯು ಹಜ್‌ಯಾತ್ರೆಯ ಅರ್ಜಿಯೊಂದಿಗೆ 2016ನೆ ಸಾಲಿನ ಹಜ್‌ಯಾತ್ರೆಗೆ ಅರ್ಜಿ ಸಲ್ಲಿಸದಿರಲು ಕಾರಣವನ್ನು ತಿಳಿಸಬೇಕು. ಮಹಿಳಾ ಅರ್ಜಿದಾರರೊಂದಿಗೆ ಸಂಗಾತಿಗೆ ಇರುವ ಸಂಬಂಧವನ್ನು ದೃಢೀಕರಿಸುವ ದಾಖಲೆಗಳನ್ನು ಸಲ್ಲಿಸಬೇಕು.
ಅರ್ಜಿದಾರ ಮಹಿಳೆಯು ಇದೇ ವ್ಯಕ್ತಿಯನ್ನು ಯಾತ್ರೆಗಾಗಿ ತನ್ನ ಸಂಗಾತಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕಾರಣ ನೀಡಬೇಕು. ಅಲ್ಲದೆ, ಮುಂಬರುವ ವರ್ಷಗಳಲ್ಲಿ ಅರ್ಜಿದಾರ ಮಹಿಳೆ ಹಜ್‌ಯಾತ್ರೆ ಕೈಗೊಳ್ಳಲು ಯಾಕೆ ಸಾಧ್ಯವಾಗುವುದಿಲ್ಲ ಎಂಬ ಕಾರಣಗಳನ್ನು ನೀಡಬೇಕು.
ಮಹಿಳಾ ಅರ್ಜಿದಾರರ ವಯಸ್ಸು, ಶರಿಯಾ ಕಾನೂನಿನಡಿಯಲ್ಲಿರುವ ಮೆಹ್ರಮ್(ಸಂಗಾತಿ)ಗಳು ಕುಟುಂಬದಲ್ಲಿ ಯಾರ್ಯಾರು ಇದ್ದಾರೆ ಎಂಬುದನ್ನು ತಿಳಿಸಬೇಕು. ಭಾರತೀಯ ಹಜ್ ಸಮಿತಿಯು ಅರ್ಜಿಗಳನ್ನು ಸ್ವೀಕರಿಸಿ ಜೇಷ್ಠತೆಯ ಆಧಾರದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಿದೆ. ಲಾಟರಿ ಮೂಲಕವೆ ಅರ್ಹರನ್ನು ಆಯ್ಕೆ ಮಾಡಲಾಗುವುದು.
ಮೆಹ್ರಮ್ ಕೋಟಾದಡಿಯಲ್ಲಿ ಅರ್ಜಿ ಸಲ್ಲಿಸಲು ಮೇ 23 ಅಂತಿಮ ದಿನವಾಗಿದ್ದು, ಕಚೇರಿಯ ಕೆಲಸದ ಅವಧಿ(ಬೆಳಗ್ಗೆ 10:30ರಿಂದ ಸಂಜೆ 5ರವರೆಗೆ)ಯೊಳಗೆ ನಗರದ ರಿಚ್ಮಂಡ್ ರಸ್ತೆಯಲ್ಲಿರುವ ರಾಜ್ಯ ಹಜ್ ಸಮಿತಿ ಕಚೇರಿಗೆ ಅರ್ಜಿಗಳನ್ನು ತಲುಪಿಸಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಝ್‌ಖಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಂಗಡ ಹಣ ಪಾವತಿ ಅವಧಿ ವಿಸ್ತರಣೆ:
ಪ್ರಸಕ್ತ ಸಾಲಿನ ಪವಿತ್ರ ಹಜ್‌ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಗಳು ಮುಂಗಡ ಹಣ ಪಾವತಿಸಲು ಈ ಹಿಂದೆ ನೀಡಲಾಗಿದ್ದ ಎ.23ರ ಗಡುವನ್ನು ಎ.30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಭಾರತೀಯ ಹಜ್ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅತಾವುರ್ರಹ್ಮಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X