Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದ ‘ಭಯೋತ್ಪಾದಕ’ರಿಗೆ ಭಾರತ ಭೇಟಿಗೆ...

ಚೀನಾದ ‘ಭಯೋತ್ಪಾದಕ’ರಿಗೆ ಭಾರತ ಭೇಟಿಗೆ ಅವಕಾಶ?

ಮಸೂದ್ ಅಝರ್‌ಗೆ ಚೀನಾ ನೀಡುತ್ತಿರುವ ಬೆಂಬಲಕ್ಕೆ ಭಾರತದ ಪ್ರತಿಕ್ರಿಯೆಯೇ?

ವಾರ್ತಾಭಾರತಿವಾರ್ತಾಭಾರತಿ22 April 2016 11:50 PM IST
share

ಬೀಜಿಂಗ್, ಎ. 22: ವಿಶ್ವ ಉಯ್‌ಘುರ್ ಕಾಂಗ್ರೆಸ್ (ಡಬ್ಲುಯುಸಿ)ನ ನಾಯಕ ಡೋಲ್ಕುನ್ ಇಸ ಭಾರತಕ್ಕೆ ನೀಡಿದ್ದಾರೆ ಎನ್ನಲಾದ ಭೇಟಿಯ ಬಗ್ಗೆ ಚೀನಾ ಇಂದು ಆತಂಕ ವ್ಯಕ್ತಪಡಿಸಿದೆ. ಆತ ಇಂಟರ್‌ಪೋಲ್‌ನ ರೆಡ್ ಕಾರ್ನರ್‌ನಲ್ಲಿರುವ ‘‘ಭಯೋತ್ಪಾದಕ’’ನಾಗಿದ್ದು, ಆತನನ್ನು ಕಾನೂನಿನ ವಶಕ್ಕೆ ಒಪ್ಪಿಸುವುದು ಎಲ್ಲ ದೇಶಗಳ ಬದ್ಧತೆಯಾಗಿದೆ ಎಂದು ಹೇಳಿದೆ.

‘‘ಡೋಲ್ಕುನ್ ಸೇರಿದಂತೆ ಡಬ್ಲುಯುಸಿ ನಾಯಕರಿಗೆ ಈ ತಿಂಗಳ ಕೊನೆಯಲ್ಲಿ ದಲಾಯಿ ಲಾಮಾರನ್ನು ಭೇಟಿಯಾಗಲು ಅನುಮತಿ ನೀಡಲಾಗಿದೆ ಎಂಬ ವರದಿಗಳ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ, ‘‘ಈ ಬಗ್ಗೆ ನನಗೆ ಗೊತ್ತಿಲ್ಲ’’ ಎಂದು ಚೀನಾದ ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ಹುವ ಚುನ್‌ಯಿಂಗ್ ಪಿಟಿಐಗೆ ಲಿಖಿತ ಪ್ರತಿಕ್ರಿಯೆ ನೀಡಿದ್ದಾರೆ.

‘‘ನಾನು ಹೇಳುವುದೇನೆಂದರೆ, ಡೋಲ್ಕುನ್ ಇಂಟರ್‌ಪೋಲ್‌ನ ರೆಡ್ ಕಾರ್ನರ್‌ನಲ್ಲಿರುವ ಭಯೋತ್ಪಾದಕ. ಆತನನ್ನು ಕಾನೂನಿಗೆ ಒಪ್ಪಿಸುವುದು ಎಲ್ಲ ದೇಶಗಳ ಬದ್ಧತೆಯಾಗಿದೆ’’ ಎಂದು ಹುವ ಹೇಳಿದ್ದಾರೆ.

ಚೀನಾದ ಭಿನ್ನಮತೀಯರಾಗಿರುವ ಡೋಲ್ಕುನ್ 1990ರ ದಶಕದಿಂದಲೂ ಜರ್ಮನಿಯಲ್ಲಿ ಆಶ್ರಯ ಪಡೆದಿದ್ದಾರೆ.

ಧರ್ಮಶಾಲಾದಲ್ಲಿ ನಡೆಯಲಿರುವ ಪ್ರಜಾಪ್ರಭುತ್ವ ಪರ ಸಮಾವೇಶವೊಂದರಲ್ಲಿ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ದಲಾಯಿ ಲಾಮಾ ಕೂಡ ಭಾಗವಹಿಸಲಿದ್ದಾರೆ. ಡಬ್ಲುಯುಸಿ ನಾಯಕರು ಗಲಭೆಪೀಡಿತ ಕ್ಸಿನ್‌ಜಿಯಾಂಗ್ ಪ್ರಾಂತದಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆಂದು ಚೀನಾ ಆರೋಪಿಸುತ್ತಿದೆ. ಭಾರತದ ವಿರುದ್ಧ ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿರುವ ಪಾಕಿಸ್ತಾನದ ಜೈಶೆ ಮುಹಮ್ಮದ್‌ನ ಮುಖ್ಯಸ್ಥ ಮಸೂದ್ ಅಝರ್‌ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಭಾರತದ ಪ್ರಯತ್ನಗಳಿಗೆ ಚೀನಾ ವೀಟೊ (ತಡೆ) ಚಲಾಯಿಸಿರುವುದನ್ನು ಸ್ಮರಿಸಬಹುದಾಗಿದೆ. ಚೀನಾದ ಈ ಕ್ರಮಕ್ಕೆ ಪ್ರತಿಯಾಗಿ, ಭಯೋತ್ಪಾದಕರೆಂದು ಚೀನಾ ಘೋಷಿಸಿರುವ ಡಬ್ಲುಯುಸಿ ನಾಯಕರನ್ನು ಭಾರತಕ್ಕೆ ಆಹ್ವಾನಿಸಿದೆ ಎಂದು ಹೇಳಲಾಗಿದೆ.

ಚೀನಾದ ವಿವಿಧ ಭಾಗಗಳಿಂದ ಹಾನ್ ಸಮುದಾಯಕ್ಕೆ ಸೇರಿದ ಜನರು ಕ್ಸಿನ್‌ಜಿಯಾಂಗ್ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ನೆಲೆಸುತ್ತಿರುವುದನ್ನು ವಿರೋಧಿಸಿ ಉಯ್‌ಘುರ್ ಸಮುದಾಯದವರು ಹಲವು ವರ್ಷಗಳಿಂದ ಪ್ರತಿಭಟಿಸುತ್ತಿದ್ದಾರೆ. ಈ ರಾಜ್ಯದಲ್ಲಿ ತುರ್ಕಿ ಮೂಲದ ಮುಸ್ಲಿಮರಾಗಿರುವ ಉಯ್‌ಘುರ್‌ಗಳ ಸಂಖ್ಯೆ ಒಂದು ಕೋಟಿಗೂ ಅಧಿಕವಿದೆ. ಈ ಘರ್ಷಣೆಯ ಹಿನ್ನೆಲೆಯಲ್ಲಿ ಕ್ಸಿನ್‌ಜಿಯಾಂಗ್ ರಾಜ್ಯವು ಬೆಂಕಿ ಕುಂಡದಂತಾಗಿದೆ.

ಕ್ಸಿನ್‌ಜಿಯಾಂಗ್ ಮತ್ತು ದೇಶದ ಇತರ ಭಾಗಗಳಲ್ಲಿ ಈಸ್ಟ್ ತುರ್ಕಿಸ್ತಾನ್ ಇಸ್ಲಾಮಿಕ್ ಮೂವ್‌ಮೆಂಟ್ (ಇಟಿಐಎಂ) ಎಂಬ ಸಂಘಟನೆ ಭಯೋತ್ಪಾದಕ ದಾಳಿ ನಡೆಸುತ್ತಿದೆ ಎಂಬುದಾಗಿ ಚೀನಾ ಆರೋಪಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X