Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಗರೇಟು ಕಂಪೆನಿಗಳಿಗೆ ಮಣೆಹಾಕುವ...

ಸಿಗರೇಟು ಕಂಪೆನಿಗಳಿಗೆ ಮಣೆಹಾಕುವ ಭರದಲ್ಲಿ ಬಡ ಬೀಡಿಕಾರ್ಮಿಕರನ್ನು ನಿರ್ಗತಿಕರನ್ನಾಗಿಸುತ್ತಿದೆ -ಸೀತರಾಮ ಡೇರಿಂಜೆ

ವಾರ್ತಾಭಾರತಿವಾರ್ತಾಭಾರತಿ23 April 2016 4:07 PM IST
share
ಸಿಗರೇಟು ಕಂಪೆನಿಗಳಿಗೆ ಮಣೆಹಾಕುವ ಭರದಲ್ಲಿ ಬಡ ಬೀಡಿಕಾರ್ಮಿಕರನ್ನು ನಿರ್ಗತಿಕರನ್ನಾಗಿಸುತ್ತಿದೆ -ಸೀತರಾಮ ಡೇರಿಂಜೆ

ಮುಲ್ಕಿ, ಎ. 23: ಕೇಂದ್ರ ಸರಕಾರ ವಿದೇಶಿ ಸಿಗರೇಟು ಕಂಪೆನಿಗಳಿಗೆ ಮಣೆಹಾಕುವ ಭರದಲ್ಲಿ ಬಡ ಬೀಡಿಕಾರ್ಮಿಕರನ್ನು ನಿರ್ಗತಿಕರನ್ನಾಗಿಸುತ್ತಿದೆ ಎಂದು ಎಐಟಿಯುಸಿಯ ಕಾರ್ಯದರ್ಶಿ ಸೀತರಾಮ ಡೇರಿಂಜೆ ಆರೋಪಿಸಿದ್ದಾರೆ.

  ಶನಿವಾರ ಟೆಲಿಫೋನ್ ಬೀಡಿ ಕಂಪೆನಿಯ ಮುಲ್ಕಿ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದರು.

 ಬೀಡಿಗೆ ಸುಮಾರು ನೂರು ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸವಿದೆ. ಬೀಡಿ ಸೇದುವುದರಿಂದ ಪ್ರಾಣಕ್ಕೆ ಹಾನಿ ಎಂಬ ಕುಂಟು ನೆಪವೊಡ್ಡಿ ಕೇಂದ್ರ ಸರಕಾರ ಬೀಡಿ ನಿಶೇಧಿಸಲು ಮುಂದಾಗಿದೆ. ಈವರೆಗೆ ಬೀಡಿಸೇದಿ ಸಾವನ್ನಪ್ಪಿದವರ ವಿವರಣೆ ನೀಡಬೇಕೆಂದು ಆಗ್ರಹಿಸಿದರು.

  ಟೆಲಿಫೋನ್ ಬೀಡಿ ಗುಜರಾತ್ ಮೂಲದ ಕಂಪೆನಿಯಾಗಿದ್ದು, ಕಂಪೆನಿಯ ನಿರ್ಲಕ್ಯದ ಪರಮಾವಧಿಗೆ ದೇಶಾಧ್ಯಂತ ಸುಮಾರು 10 ಕೋಟಿಗೂ ಮಿಕ್ಕಿ ಬೀಡಿ ಕಾರ್ಮಿಕರು ಕೆಲಸ ಕಳೆದು ಕೊಳ್ಳುವಂತಾಗಿದೆ. ಶೀಘ್ರ ಎಲ್ಲಾ ಬೀಡಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿದ ಅವರು, ಸರಕಾರ ವಿಧಿಸಿರುವ ನಿಯಮಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

 ದೇಶದಲ್ಲೇ ಬೀಡಿ ಕೈಗಾರಿಕೆ ದೇಶದ ಮುಖ್ಯ ಉದ್ದಿಮೆಯಾಗಿ ಬೆಳೆದಿದೆಯಾದರೂ ಪ್ರಸ್ತುತ ಕನಿಷ್ಠ 135 ರೂ. ಮಜೂರಿ ನೀಡಲಾಗುತ್ತಿದೆ. ಇದನ್ನು 300 ರೂ. ಗೆ ಏರಿಸಬೇಕು. ಬೀಡಿ ಕಾರ್ಮಿಕರಿಗೆ ಈ ವರೆಗೆ ಸರಕಾರ ಮತ್ತು ಕಂಪೆನಿಗಳು ಯಾವುದೇ ಭದ್ರತೆ ಕಲ್ಪಸುವಲ್ಲಿ ವಿಫಲವಾಗಿದ್ದು, ಎಲ್ಲಾ ರೀತಿಯ ಭದ್ರತೆ ನೀಡಬೇಕು. ಕಾರ್ಮಿಕರಿಗೆ ನೀಡಲಾಗುತ್ತಿದ್ದ ತುಟ್ಟಿ ಭತ್ತೆ ಕಳೆದ ವರ್ಷದಿಂದ ಕಾರ್ಮಿಕರಿಗೆ ವಿತರಿಸಿಲ್ಲ ಎಂದ ಎಐಟಿಯುಸಿಯ ಕೋಶಾಧಿಕಾರಿ ಎಂ. ಕರುಣಾಕರ ಬೀಡಿ ಕಾರ್ಮಿಕರ ಬದುಕು ಡೋಲಾಯಮಾನ ಸ್ಥಿತಿಗೆ ತಲುಪಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕೋಟ್ಯಾನ್, ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷೆ ಶ್ರೀಮತಿ ಸುಲೋಚನಾ, ಯೂನಿಯನ್ ಉಪಾಧ್ಯಕ್ಷ ಶಿವಪ್ಪ ಕೋಟ್ಯಾನ್, ಚಿತ್ರಾಕ್ಷಿ ಗುತ್ತಿಗೆದಾರರು ಉಪಸ್ಥಿತರಿದ್ದರು.

ಏಳು ಮಂದಿಯಿರುವ ತುಂಬು ಸಂಸಾರ ನಮ್ಮದು. ಬೀಡಿ ಕಟ್ಟಿ ದಿನದ ಒಪ್ಪೊತ್ತು ತಿನ್ನುವವರು ನಾವು. ಕಳೆದ ಹಲವು ದಿನಗಳಿಂದ ಕೆಲಸವಿಲ್ಲದೆ ಗಂಜಿಗೂ ಪರದಾಡುವಂತಗಿದ್ದು, ದಿನ ಸಾಗಿಸುವುದೇ ದುಸ್ಥರವಾಗಿದೆ.

 ಶಾರದಾ, ಹೊಯ್ಗೆಗುಡ್ಡೆ

 (ಬೀಡಿ ಕಾರ್ಮಿಕರು)

ಮಕ್ಕಳ ವಿಧ್ಯಾಭ್ಯಾಸ, ಮನೆ ರಿಪೇರಿ ಹೀಗೆ ಹಲವು ಸಮಸ್ಯೆಗಳಿಗೆ ಬೀಡಿಯನ್ನು ನಂಬಿಕೊಂಡು ಸ್ವಸಹಾಯ ಗುಂಪುಗಳು, ಬ್ಯಾಂಕ್‌ಗಳಿಂದ ಲೋನ್ ಪಡೆದು ಕೊಂಡಿದ್ದೇವೆ. ಹಲವುದಿನಗಳಿಂದ ಬೀಡಿ ಕೆಲಸ ಸ್ಥಬ್ಧಗೊಂಡಿರುವುದು ಆಕಶವೇ ತಲೆಯಮೇಲೆ ಬಿದ್ದಂತಾಗಿದೆ.

ಆಯಿಶಾ ಬಾನು,ಮುಲ್ಕಿ (ಬೀಡಿ ಕಾರ್ಮಿಕರು)

ಪ್ರತಿಭಟನೆಗಳ ಕಾವೇರುತ್ತಿರುವಂತೆಯೇ ಎಚ್ಚೆತ್ತುಕೊಂಡ ಟೆಲಿಪೋನ್ ಕಂಪೆನಿ ಸೋಮವಾರದಿಂದ ಕೆಲಸ ಕಲ್ಪಿಸುವ ಭರವಸೆ ನೀಡಿದೆ. ಮುಂದಿನ ದಿನಗಳಲ್ಲಿ ಭರವಸೆ ಟೊಳ್ಳಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಎಲ್ಲಾ ಬೀಡಿ ಕಂಪೆನಿಗಳ ಕಾರ್ಮಿಕರು ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯ ತೀವೃತೆಯನ್ನು ಹೆಚ್ಚಿಸಲಾಗುವುದು ಎಂದು ಎಐಟಿಯುಸಿಯ ಕೋಶಾಧಿಕಾರಿ ಎಂ. ಕರುಣಾಕರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X