Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡವರಿಗೆ ಉಚಿತ ಎಲ್‌ಪಿಜಿ ಸಂಪರ್ಕ:8,000...

ಬಡವರಿಗೆ ಉಚಿತ ಎಲ್‌ಪಿಜಿ ಸಂಪರ್ಕ:8,000 ಕೋ.ರೂ. ಯೋಜನೆಗೆ ಮೇ.1ರಂದು ಪ್ರಧಾನಿ ಮೋದಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 April 2016 7:14 PM IST
share
ಬಡವರಿಗೆ ಉಚಿತ ಎಲ್‌ಪಿಜಿ ಸಂಪರ್ಕ:8,000 ಕೋ.ರೂ. ಯೋಜನೆಗೆ ಮೇ.1ರಂದು ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ,ಎ.23: ಬಿಪಿಎಲ್ ಕುಟುಂಬಗಳಿಗೆ ಐದು ಕೋಟಿ ಉಚಿತ ಅಡುಗೆ ಅನಿಲ ಸಂಪರ್ಕಗಳನ್ನು ಒದಗಿಸುವ 8,000 ಕೋ.ರೂ.ಗಳ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ ’ಗೆ ಪ್ರಧಾನಿ ನರೇಂದ್ರ ಮೋದಿಯವರು ಮೇ 1ರಂದು ಉತ್ತರ ಪ್ರದೇಶದ ಬಲಿಯಾದಲ್ಲಿ ಚಾಲನೆ ನೀಡಲಿದ್ದಾರೆ. 1.13 ಕೋಟಿ ಎಲ್‌ಪಿಜಿ ಬಳಕೆದಾರರು ಸ್ವಯಿಚ್ಛೆಯಿಂದ ತಮ್ಮ ಸಬ್ಸಿಡಿಗಳನ್ನು ಬಿಟ್ಟುಕೊಟ್ಟಿರುವುದರಿಂದ ಉಳಿತಾಯವಾಗಿರುವ ಹಣವನ್ನು ಈ ಯೋಜನೆಗೆ ಬಳಸಲಾಗುವುದು.

ಇದೇ ಕಾರ್ಯಕ್ರಮ ಮೇ.15ರಂದು ಗುಜರಾತ್‌ನ ದಾಹೋಡ್‌ನಲ್ಲಿ ಪುನರಾವರ್ತನೆಗೊಳ್ಳಲಿದೆ.

ಎಲ್‌ಪಿಜಿ ಸಬ್ಸಿಡಿಯನ್ನು ತ್ಯಾಗ ಮಾಡುವಂತೆ ಆರ್ಥಿವಾಗಿ ಸಬಲ ಬಳಕೆದಾರರನ್ನು ಕೋರಿಕೊಳ್ಳುವ ‘ಗಿವ್-ಇಟ್-ಅಪ್’ಅಭಿಯಾನ 2015, ಜನವರಿಯಲ್ಲಿ ಆರಂಭಗೊಂಡಿತ್ತಾದರೂ ಪ್ರಧಾನಿಯವರು ಕಳೆದ ವರ್ಷದ ಮಾ.27ರಂದು ಅದಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದರು.

ಈ ಅಭಿಯಾನದಡಿ 1.13 ಕೋ.ಜನರು ತಮ್ಮ ಸಬ್ಸಿಡಿಗಳನ್ನು ತ್ಯಾಗ ಮಾಡಿ ಮಾರುಕಟ್ಟೆ ದರಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಖರೀದಿಸುತ್ತಿದ್ದಾರೆ ಎಂದು ತೈಲ ಸಚಿವ ಧಮೇಂದ್ರ ಪ್ರಧಾನ ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯ(16.44 ಲ.) ಬಳಕೆದಾರರು ಸಬ್ಸಿಡಿಯನ್ನು ತ್ಯಾಗ ಮಾಡಿದ್ದಾರೆ. ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ(13 ಲ.) ಮತ್ತು ದಿಲ್ಲಿ(7.26 ಲ) ಇದ್ದರೆ, ಪ್ರಧಾನಿಯವರ ತವರು ರಾಜ್ಯ ಗುಜರಾತಿನಲ್ಲಿ ಸಬ್ಸಿಡಿ ತ್ಯಾಗ ಮಾಡಿದವರ ಸಂಖ್ಯೆ ಕೇವಲ 4.2 ಲ. ಪ್ರಧಾನ ಅವರ ತವರು ರಾಜ್ಯ ಒಡಿಶಾದಲ್ಲಂತೂ ಈ ಸಂಖ್ಯೆ ಇನ್ನೂ ಕಡಿಮೆ...ಅಂದರೆ 1.3ಲ.ಮಾತ್ರ!

ಎಲ್‌ಪಿಜಿ ಸಬ್ಸಿಡಿ ತ್ಯಾಗ ಮಾಡಿದವರ ಪೈಕಿ ಅರ್ಧಕ್ಕೂ ಹೆಚ್ಚಿನ ಜನರು ಮಹಾರಾಷ್ಟ್ರ,ಉ.ಪ್ರದೇಶ,ದಿಲ್ಲಿ,ಕರ್ನಾಟಕ ಮತ್ತು ತಮಿಳುನಾಡು...ಈ ಐದು ರಾಜ್ಯಗಳಿಗೆ ಸೇರಿದ್ದಾರೆ ಎಂದು ಪ್ರಧಾನ ತಿಳಿಸಿದರು.

ಅಭಿಯಾನದ ಮೂಲಕ ಸುಮಾರು 5,000 ಕೋ.ರೂ.ಸಬ್ಸಿಡಿ ಉಳಿತಾಯವಾಗಿದ್ದು, ಈ ಮೊತ್ತವನ್ನು ಬಡವರಿಗೆ ಎಲ್‌ಪಿಜಿ ಸಂಪರ್ಕ ಒದಗಿಸಲು ಬಳಸಿಕೊಳ್ಳಲಾಗುತ್ತಿದೆ. ಕಳೆದೊಂದು ವರ್ಷದಲ್ಲಿ ಬಡವರಿಗಾಗಿ 60 ಲಕ್ಷ ಸಂಪರ್ಕಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಪ್ರಧಾನ ತಿಳಿಸಿದರು.

ಉಜ್ವಲ ಯೋಜನೆಯಡಿ ಐದು ಕೋಟಿ ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸಲು 8,000 ಕೋ.ರೂ.ಗಳನ್ನು ನಿಗದಿಗೊಳಿಸಲಾಗಿದೆ. ಮೊದಲ ವರ್ಷದಲ್ಲಿ 1.5 ಕೋ.ಸಂಪರ್ಕಗಳನ್ನು ಒದಗಿಸಲಾಗುವುದು ಎಂದರು.

ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಪ್ರತಿ ಎಲ್‌ಪಿಜಿ ಸಂಪರ್ಕಕ್ಕೆ 1,600 ರೂ.ಆರ್ಥಿಕ ನೆರವು ಒದಗಿಸಲಾಗುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X