Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ದಾಂಪತ್ಯಕೆ್ಕ ಕಾಲಿಟ್ಟ 163...

ಶಿವಮೊಗ್ಗ: ದಾಂಪತ್ಯಕೆ್ಕ ಕಾಲಿಟ್ಟ 163 ಜೋಡಿಗಳು

ಖಲಂದರಿಯ ಅಸೋಸಿಯೇಶನ್‌ನಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 April 2016 10:06 PM IST
share
ಶಿವಮೊಗ್ಗ: ದಾಂಪತ್ಯಕೆ್ಕ ಕಾಲಿಟ್ಟ 163 ಜೋಡಿಗಳು

 ಶಿವಮೊಗ್ಗ,ಎ.23: ಸಾಮೂಹಿಕ ಮದುವೆಗಳು ಬಡವರ ಪಾಲಿಗೆ ವರದಾನ ಎಂದು ಖಲಂದರಿಯ ಅಸೋಸಿಯೇಶನ್ ಮುಖ್ಯಸ್ಥ ಮುಹಮ್ಮದ್ ಅನ್ವರ್ ಖಾದ್ರಿ ಹೇಳಿದರು. ಶನಿವಾರ ಬೆಳಗ್ಗೆ ಖಲಂದರಿಯ ಅಸೋಸಿಯೇಶನ್ ನಗರದ ಊರುಗಡೂರು ಬಡಾವಣೆಯ ಮತ್ತೂರು ರಸ್ತೆಯ ಸಮೀಪ ಆಯೋಜಿಸಿದ್ದ ಬೃಹತ್ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸೈಯದ್ ಶಾ ಮುಹಮ್ಮದ್ ಶಾ ಖಲಂದರ್ ಪೀರಾನ್ ವಲಿಯಲ್ಲಾ ಖಾದ್ರಿ ಜಾವಗಲ್ ಷರೀಫ್‌ರವರ, ಕೃಪೆ ಹಾಗೂ ಎಲ್ಲಾ ವಲಿಯುಲ್ಲಾಹ್‌ರವರ ಆಶೀರ್ವಾದದಿಂದ ಈ ಸಾಮೂಹಿಕ ವಿವಾಹ ಮಹೋತ್ಸವ ನಡೆಯುತ್ತಿದೆ. ದೇಶದಲ್ಲಿಯೇ ಇಂತಹ ಬಹುದೊಡ್ಡ ಮುಸ್ಲಿಮ್ ಸಾಮೂಹಿಕ ವಿವಾಹ ನಡೆಯುತ್ತಿರುವುದು ಇದೇ ಮೊದಲಾಗಿದೆ. ಸುಮಾರು 163 ಜೋಡಿಗಳು ದಾಂಪತ್ಯಕ್ಕೆ ಇಂದು ಕಾಲಿಟ್ಟಿದ್ದಾರೆ ಎಂದರು.

ಅತಿ ಕಡು ಬಡತನದಲ್ಲಿರುವವರಿಗೆ ಇಲ್ಲಿ ಆದ್ಯತೆ ನೀಡಲಾಗಿದೆ ಎಂದರು.

ಒಂದು ಸಂಸಾರಕ್ಕೆ ಬೇಕಾಗುವಷ್ಟು ವಸ್ತುಗಳನ್ನು ಉಡುಗೊರೆಯಾಗಿ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮದುವೆಯಾದ ದಂಪತಿಗಳಿಗೆ ನೀಡಲಾಗುತ್ತಿದೆ ಎಂದರು.

ತಂದೆ-ತಾಯಿ ಇಲ್ಲದವರು, ಅನಾಥರು ಮತ್ತು ಬಡತನದವರು ರಾಜ್ಯದಲ್ಲಿ ಎಲ್ಲೇ ಇರಲಿ ಇಲ್ಲಿ ರಿಜಿಸ್ಟ್ರೇಷನ್ ಮಾಡಿಕೊಂಡು ಮದುವೆಯಾಗಬಹುದು. ಕಳೆದ ಸಲ 57 ಜೋಡಿ ವಿವಾಹಕ್ಕೆ ಕಾಲಿಟ್ಟಿದ್ದರು. ಅವರೆಲ್ಲರೂ ಇಂದು ಸುಖ ಸಂತೋಷದಿಂದ ಇದ್ದಾರೆ. ಈ ಬಾರಿ ಈ ಅವಕಾಶ 163 ಜನರಿಗೆ ಸಿಕ್ಕಿದೆ ಎಂದರು.

ಅತೀ ಬಡವರು ಈಗಿನ ಸಂದರ್ಭದಲ್ಲಿ ಮದುವೆಯಾಗುವುದೇ ದುಸ್ತರವಾಗಿಬಿಟ್ಟಿದೆ. ವಯಸ್ಸಿಗೆ ಬಂದ ಮಕ್ಕಳ ಮದುವೆ ಮಾಡುವುದು ಅದೆಷ್ಟೋ ಪೋಷಕರಿಗೆ ಕಷ್ಟವಾಗಿದೆ. ಈ ಪರಿಸ್ಥಿತಿಯನ್ನು ಅರಿತಿರುವ ಖಲಂದರಿಯ ಅಸೋಸಿಯೇಶನ್ ಕಳೆದ ವರ್ಷದಿಂದ ಅತೀ ಬಡತನದಲ್ಲಿರುವ ಜೋಡಿಗಳನ್ನು ಹುಡುಕಿ, ಅವರ ಪೋಷಕರ ಸ್ಥಿತಿಗತಿಯನ್ನು ಪರಿಶೀಲಿಸಿ ಈ ಉಚಿತ ಸಾಮೂಹಿಕ ವಿವಾಹ ಮಹೋತ್ಸವವನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಬಿ ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಎನ್. ರಮೇಶ್, ಪ್ರಮುಖರಾದ ಮುಹಮ್ಮದ್ ಅನ್ವರ್ ಖಾದ್ರಿ, ಮುಹಮ್ಮದ್ ಶೌಕತ್ ಖಾದ್ರಿ, ಮುಹಮ್ಮದ್ ಖಲಂದರ್ ಖಾದ್ರಿ, ಮುಹಮ್ಮದ್ ನಸ್ರುಲ್ಲ ಖಾದ್ರಿ, ಮುಹಮ್ಮದ್ ನಿಜಾಮುಲ್ಲಾ ಖಾನ್ ಖಾದ್ರಿ, ಮುಕ್ತಿಯಾರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X