ಸರಣಿ ಅಪಘಾತ: ಓರ್ವನಿಗೆ ಗಾಯ
ಸಂಪ್ಯ, ಎ.23: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಎರಡು ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಚರಂಡಿಗೆ ಬಿದ್ದು ಚಾಲಕ ಗಾಯಗೊಂಡ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಸಂಪ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಮುಂಭಾಗದಿಂದ ಬರುತ್ತಿದ್ದ ಲಾರಿಯೊಂದರ ಹಿಂಬದಿ ಚಕ್ರಕ್ಕೆ ಢಿಕ್ಕಿ ಹೊಡೆದು ಬಳಿಕ ಇನ್ನೊಂದು ಲಾರಿಗೆ ಢಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಈ ಸಂದರ್ಭ ಕಾರು ಚಾಲಕ ಕೈಪ ನಿವಾಸಿ ಗಣೇಶ್ಕುಮಾರ್ ಗಾಯಗೊಂಡಿದ್ದಾರೆ. ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story