Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರುವಾಜೆ ಬ್ರಹ್ಮ ಕಲಶ: ಕೃತಜ್ಞತಾ ಸಭೆ

ಪೆರುವಾಜೆ ಬ್ರಹ್ಮ ಕಲಶ: ಕೃತಜ್ಞತಾ ಸಭೆ

ವಾರ್ತಾಭಾರತಿವಾರ್ತಾಭಾರತಿ24 April 2016 12:16 PM IST
share

ಸುಳ್ಯ, ಎ. 24:  ದೇವಾಲಯಗಳು ಭಕ್ತರ ಭಕ್ತಿ, ನಂಬಿಕೆಯ ನೆಲೆಯಾದರೆ, ಅದರ ಜೀರ್ಣೋದ್ಧಾರ ಕಠಿಣ ಅಲ್ಲ ಎನ್ನುವುದಕ್ಕೆ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಳ ಉದಾಹರಣೆ ಎಂದು ಶ್ರೀ ಕ್ಷೇತ್ರದ ಬ್ರಹ್ಮಕಲಶ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎನ್ ಮನ್ಮಥ ಹೇಳಿದರು.

ಅವರು ಶ್ರೀ ಕ್ಷೇತ್ರ ಬ್ರಹ್ಮಕಲಶ, ನೂತನ ಧ್ವಜಪ್ರತಿಷ್ಠೆ ಮತ್ತು ಜಾತ್ರೆಯ ಸಂದರ್ಭದಲ್ಲಿ ವಿವಿಧ ರೂಪದಲ್ಲಿ ಕರಸೇವಕರಾಗಿ ದುಡಿದ ಭಕ್ತ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿ, ಮಾತನಾಡಿದರು.

ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎಂ.ಬಿ ಮಾತನಾಡಿ, ಶ್ರೀ ಕ್ಷೇತ್ರದ ಅಧಿದೇವತೆ ಜಲದುರ್ಗಾದೇವಿಯ ಇಚ್ಛೆ ಏನಿತ್ತೋ ಅದು ನೆರವೇರಿದೆ. ಕರಸೇವೆಯ ಮೂಲಕ ಸಾವಿರಾರು ಜನರು ದೇವರ ಸೇವೆ ಮಾಡಿದ್ದಾರೆ. ಅವರೆಲ್ಲರ ಸೇವೆಗೆ ಸಮಿತಿ ಆಭಾರಿಯಾಗಿದೆ ಎಂದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ತಾರಾನಾಥ ಸವಣೂರು ಅಭಿನಂದನಾ ಭಾಷಣಗೈದರು. ಕಾರ್ಯಾಧ್ಯಕ್ಷ ಸತ್ಯನಾರಾಯಣ ಕೋಡಿಬೈಲು ಮಾತನಡಿದರು.

ಭಕ್ತ ಸಮುದಾಯದ ಪರವಾಗಿ ಸ್ಮರಣ ಸಂಚಿಕೆ ಸಮಿತಿ ಸದಸ್ಯ ಯು.ರಾಮ, ಅಲಂಕಾರ ಸಮಿತಿ ಸಹಸಂಚಾಲಕ ಬಾಬು ಎನ್, ಕಾರ್ಯಾಲಯ ಸಮಿತಿ ಸದಸ್ಯ ಪ್ರಸಾದ್ ಸೇವಿತ, ಆರ್ಥಿಕ ಸಮಿತಿ ಸಂಚಾಲಕ ಶ್ರೀರಾಮ ಪಾಟಾಜೆ ಮೊದಲಾದವರು ಅನಿಸಿಕೆ ವ್ಯಕ್ತಪಡಿಸಿದರು.

 ವೇದಿಕೆಯಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿ ಕಾರ್ಯದರ್ಶಿ ಎನ್.ಕುಶಾಲಪ್ಪ ಗೌಡ, ಕೋಶಾಧಿಕಾರಿ ಪಿ.ಮಂಜಪ್ಪ ರೈ, ಜತೆ ಕಾರ್ಯದರ್ಶಿ ರಾಮಕೃಷ್ಣ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ರಾಮಣ್ಣ ರೈ ವೈಪಾಲ, ದಾಮೋದರ ನಾಯ್ಕ, ಸುಜಾತ ಪದ್ಮನಾಭ ಶೆಟ್ಟಿ, ಭಾಮಿನಿ ಜತ್ತಪ್ಪ ಗೌಡ, ಸ್ವಾಗತ ಸಮಿತಿಯ ರಾಜೀವಿ ಆರ್ ರೈ ಪುಡ್ಕಜೆ, ಸೀತಾ ಕೇಶವ ಭಟ್ ಮಠತ್ತಡ್ಕ, ವ್ಯವಸ್ಥಾಪಕ ವಸಂತ ಆಚಾರ್ಯ ಪೆರುವಾಜೆ, ಆಮಂತ್ರಣ ವಿತರಣಾ ಸಮಿತಿ ಸಹಸಂಚಾಲಕ ಸುರೇಶ್ ಕುಮಾರ್ ಪೆರುವಾಜೆ, ವಾಹನ ನಿಲುಗಡೆ ಸಮಿತಿ ಸಂಚಾಲಕ ಹೂವಪ್ಪ ಗೌಡ, ಸ್ವಯಂಸೇವಾ ಸಮಿತಿ ಸಂಚಾಲಕ ಜಯಪ್ರಕಾಶ್ ರೈ ಪೆರುವಾಜೆ, ಹೊರೆಕಾಣಿಕೆ ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ ಪೆರುವಾಜೆ, ಸಹ ಸಂಚಾಲಕ ಸದಾಶಿವ ಮಣಿಯಾಣಿ, ಆಸನ ಸಮಿತಿ ಸಂಚಾಲಕ ಕಿರಣ್ ಕೊಟ್ಟೆಕಾ, ಉಗ್ರಾಣ ಸಮಿತಿ ಸಂಚಾಲಕ ಲೋಕನಾಥ ಶೆಟ್ಟಿ ಪೆರುವಾಜೆ, ನೀರಾವರಿ ಸಮಿತಿ ಸಂಚಾಲಕ ಜಗನ್ನಾಥ ರೈ, ಕರಸೇವಾ ಸಮಿತಿ ಸಂಚಾಲಕ ಪ್ರೇಮನಾಥ ಶೆಟ್ಟಿ ಪೆರುವಾಜೆ, ಸಹಸಂಚಾಲಕ ವೆಂಕಟರಮಣ ಭಟ್, ಪ್ರಚಾರ ಸಮಿತಿ ಸಂಚಾಲಕ ಪ್ರೇಮಚಂದ್ರ ಬೆಳ್ಳಾರೆ, ಕಾರ್ಯಾಲಯ ಸಮಿತಿ ಸಹಸಂಚಾಲಕ ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಚಪ್ಪರ ಸಮಿತಿ ಸಂಚಾಲಕ ಮೋನಪ್ಪ ಪೂಜಾರಿ ಪೆರುವಾಜೆ, ಸಹಸಂಚಾಲಕ ವಿಶ್ವನಾಥ ಗೌಡ, ಅಲಂಕಾರ ಸಮಿತಿ ಸಂಚಾಲಕ ಜಯಂತ ಮಡಪ್ಪಾಡಿ, ಸ್ಮರಣ ಸಂಚಿಕೆ ಸಮಿತಿ ಸಹಸಂಚಾಲಕ ರಜನೀಶ ಸವಣೂರು, ಮಹಿಳಾ ಸ್ವಯಂಸೇವಕಿಯರ ಸಮಿತಿ ಸಂಚಾಲಕಿ ಆಶಾ ಸತೀಶ್, ಸಹಸಂಚಾಲಕಿ ನಯನತಾರಾ ಕಾಯರ್‌ಮಾರ್, ಸಾಗಾಟ ಸಮಿತಿ ಸಂಚಾಲಕ ವಿಜಯ ಪೆರುವಾಜೆ, ಸಹ ಸಂಚಾಲಕ ನಾರಾಯಣ ಪೆರುವಾಜೆ ಸೇರಿದಂತೆ ವಿವಿಧ ಸಮಿತಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಸಭಾ ನಿರ್ವಹಣಾ ಸಮಿತಿ ಸಂಚಾಲಕ ವಾಸುದೇವ ಪೆರುವಾಜೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X