Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ನಾತಕೋತ್ತರ ಪದವಿ ಪರೀಕ್ಷೆಗೆ ಹಾಜರಾದ...

ಸ್ನಾತಕೋತ್ತರ ಪದವಿ ಪರೀಕ್ಷೆಗೆ ಹಾಜರಾದ 97ರ ಯುವಕ!

ಕಲಿಕೆ ಉತ್ಸಾಹಕ್ಕೆ ಅಡ್ಡಿಯಾಗದ ವಯಸ್ಸು!

ವಾರ್ತಾಭಾರತಿವಾರ್ತಾಭಾರತಿ24 April 2016 5:39 PM IST
share
ಸ್ನಾತಕೋತ್ತರ ಪದವಿ ಪರೀಕ್ಷೆಗೆ ಹಾಜರಾದ 97ರ ಯುವಕ!

ಪಟ್ನಾ: ನಳಂದ ಮುಕ್ತ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪರೀಕ್ಷೆಗೆ ಹಾಜರಾದ "ಯುವಕ" ಎಲ್ಲರ ಹುಬ್ಬೇರಿಸಿದ್ದಾನೆ. 1938ರಲ್ಲಿ ಪದವಿ ಪಡೆದಿದ್ದ ಉತ್ಸಾಹದ ಚಿಲುಮೆ ರಾಜ್‌ಕುಮಾರ್ ವೈಶ್ಯ ಇತ್ತೀಚೆಗೆ ತಮ್ಮ 97ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ತಿಳಿಬಣ್ಣದ ಶರ್ಟ್ ಹಾಗೂ ಕಡು ಬಣ್ಣದ ಪ್ಯಾಂಟಿನೊಂದಿಗೆ ಪರೀಕ್ಷಾ ಕೊಠಡಿಗೆ ಬಂದು ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪರೀಕ್ಷೆಯ ಭಾಗ- 1ನ್ನು ಇಂಗ್ಲಿಷ್‌ನಲ್ಲಿ ಬರೆದು ಅಚ್ಚರಿ ಮೂಡಿಸಿದರು. 23 ಪುಟಗಳ ಉತ್ತರ ಬರೆದರು.

ಪರೀಕ್ಷಾ ಕೊಠಡಿಯಲ್ಲಿ ಇತರರಂತೆ ಮೂರು ಗಂಟೆ ಕಾಲ ಕುಳಿತುಕೊಂಡು ಗಂಭೀರವಾಗಿ ಪರೀಕ್ಷೆ ಬರೆದರು. ಪರೀಕ್ಷೆಗೆ ಹಾಜರಾದ ಅವರ ಸಹಪಾಠಿಗಳು ಅವರ ಮೊಮ್ಮಕ್ಕಳಿಗಿಂತಲೂ ಕಿರಿಯ ವಯಸ್ಸಿನವರು ಎಂದು ಅಧಿಕಾರಿಗಳು ಹೇಳಿದ್ದಾರೆ. ವೈಶ್ಯ ಕಳೆದ ವರ್ಷ ಎರಡು ಕಾರಣಗಳಿಗಾಗಿ ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿಗೆ ನೊಂದಾಯಿಸಿಕೊಂಡಿದ್ದರು. ಸ್ನಾತಕೋತ್ತರ ಪದವೀಧರರಾಗಬೇಕೆಂಬ ಧೀರ್ಘಕಾಲದ ಆಸೆ ಈಡೇರಿಸಿಕೊಳ್ಳುವುದು ಒಂದು ಕಾರಣವಾದರೆ ಭಾರತ ಬಡತನದಂಥ ಸಮಸ್ಯೆಯನ್ನು ಬಗೆಹರಿಸಲು ಯಾಕೆ ವಿಫಲವಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳುವುದು ಎರಡನೆಯದು.

ಈಗ ನಾನು ಪರೀಕ್ಷೆಗೆ ಹಾಜರಾಗಿದ್ದು, ನನ್ನ ಆಸೆ ಈಡೇರುವ ಹಂತದಲ್ಲಿದೆ ಎಂದು ಹೆಮ್ಮೆಯಿಂದ ಹೇಳುತ್ತಾರೆ. 1920ರ ಏಪ್ರಿಲ್ 1ರಂದು ಜನಿಸಿದ ವೈಶ್ಯ, ಆಗ್ರಾ ವಿವಿಯಿಂದ 1938ರಲ್ಲಿ ಪದವಿ ಪಡೆದಿದ್ದರು. 1940ರಲ್ಲಿ ಕಾನೂನು ಪದವಿಯನ್ನೂ ಪಡೆದರು. ಕುಟುಂಬದ ಜವಾಬ್ದಾರಿ ಹೆಚ್ಚಿದ ಕಾರಣದಿಂದ ಮುಂದೆ ಸ್ನಾತಕೋತ್ತರ ಪದವಿ ಪಡೆಯುವುದು ಸಾಧ್ಯವಾಗಲಿಲ್ಲ ಎಂದು ಅವರು ವಿವರಿಸುತ್ತಾರೆ.

ಪತ್ನಿ ಕಾಲವಾದ ಬಳಿಕ 10 ವರ್ಷಗಳಿಂದ ತಮ್ಮ ಎರಡನೇ ಮಗನ ಜತೆ ವೈಶ್ಯ ವಾಸವಾಗಿದ್ದಾರೆ. ಪಾಟ್ನಾ ಎನ್‌ಐಟಿನಿಂದ ನಿವೃತ್ತರಾದ ಮಗ ಹಾಗೂ ಪಾಟ್ನಾ ವಿವಿಯಿಂದ ನಿವೃತ್ತರಾದ ಸೊಸೆ ಇವರ ಸ್ನಾತಕೋತ್ತರ ಪದವಿ ಆಸೆಗೆ ಬೆಂಗಾವಲಾಗಿ ನಿಂತಿದ್ದಾರೆ. ನಳಂದ ವಿವಿಯಲ್ಲಿ 84 ವರ್ಷದ ಒಬ್ಬರು ಪಿಎಚ್‌ಡಿ ಪದವಿಗಾಗಿಯೂ ಹೆಸರು ನೊಂದಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X