Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಪತಿಯ ನಿಧನದ ಬಳಿಕ ಪತ್ನಿಗೆ ಒತ್ತಡ...

ಪತಿಯ ನಿಧನದ ಬಳಿಕ ಪತ್ನಿಗೆ ಒತ್ತಡ ಕಡಿಮೆ....!

ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ25 April 2016 9:19 AM IST
share
ಪತಿಯ ನಿಧನದ ಬಳಿಕ ಪತ್ನಿಗೆ ಒತ್ತಡ ಕಡಿಮೆ....!

ಮದುವೆಯನ್ನು ಬಹಳ ಲಾಭಕರ ಎಂದು ಪರಿಗಣಿಸಲಾಗಿದೆ. ಆದರೆ ಹೊಸ ಅಧ್ಯಯನವೊಂದರ ಪ್ರಕಾರ ಪತಿ ಜೀವಂತವಾಗಿರುವ ಮಹಿಳೆಯರಿಗೆ ಹೋಲಿಸಿದರೆ ವಿಧವೆಯರು ಕಡಿಮೆ ಒತ್ತಡವನ್ನು ಅನುಭವಿಸುತ್ತಾರೆ.

ಮದುವೆಯು ಆರೋಗ್ಯ, ಹೃದಯ ರೋಗ, ಖಿನ್ನತೆ ಮತ್ತು ಕ್ಯಾನ್ಸರಿನಿಂದ ರಕ್ಷಣೆ ನೀಡುತ್ತದೆ ಎನ್ನುವ ಹಿಂದಿನ ಸಂಶೋಧನೆಗೆ ಇದು ತದ್ವಿರುದ್ಧವಾಗಿದೆ. ಪಡೋವ ವಿಶ್ವವಿದ್ಯಾಲಯದ ಹೊಸ ಅಧ್ಯಯನವು ಹೇಳಿರುವ ಪ್ರಕಾರ ತಮ್ಮ ಪತ್ನಿಯ ಮರಣದ ನಂತರ ವಿಧುರರು ನಕಾರಾತ್ಮಕ ಪರಿಣಾಮ ಅನುಭವಿಸುತ್ತಾರೆ. ಏಕೆಂದರೆ ಅವರು ಬಹುತೇಕ ಪತ್ನಿಯರನ್ನೇ ಅವಲಂಭಿಸಿರುತ್ತಾರೆ. ಆದರೆ ಪತಿ ಕಳೆದುಕೊಂಡ ಮೇಲೆ ಪತ್ನಿಯರು ಹೆಚ್ಚು ಆರೋಗ್ಯವಂತರಾಗಿರುವುದು ತಿಳಿದು ಬಂದಿದೆ.

ಮುಖ್ಯ ಸಂಶೋಧಕಿ ಕ್ಯಾಥರೀನಾ ಟ್ರೆವಿಸನ್ ಹೇಳಿರುವಂತೆ ಪತ್ನಿಯ ಅಸ್ತಿತ್ವವು ಮನೆ ನಿರ್ವಹಣೆ ಮತ್ತು ಆರೋಗ್ಯ ಸೇವೆಯಲ್ಲಿ ಪುರುಷರಿಗೆ ಲಾಭ ತರಬಹುದಾದರೂ, ಮಹಿಳೆಯರು ಹೆಚ್ಚು ಹತಾಶರಾಗಬಹುದು ಮತ್ತು ತಮ್ಮ ಪಾತ್ರ ಸೀಮಿತವೆಂದು ನಿರಾಶೆ ಹೊಂದುವ ಸಾಧ್ಯತೆಯಿರಬಹುದು. ಮಹಿಳೆಯರಿಗೆ ಪುರುಷರಿಗಿಂತ ಧೀರ್ಘ ಆಯುಸ್ಸು ಇರುವ ಕಾರಣದಿಂದ ವಿವಾಹಿತ ಮಹಿಳೆಯರು ಸೇವೆ ಮಾಡಬೇಕಾದ ವ್ಯಕ್ತಿಯ ಹೊರೆಯನ್ನು ಅನುಭವಿಸುತ್ತಾರೆ. ಏಕೆಂದರೆ ಅವರು ಸಾಮಾನ್ಯವಾಗಿ ಜೀವನಪೂರ್ತಿ ಪತಿಯ ಸೇವೆಯಲ್ಲಿ ಕಳೆದಿರುತ್ತಾರೆ ಎಂದು ಕ್ಯಾಥರೀನಾ ಹೇಳಿದ್ದಾರೆ.

ಏಕಾಂಗಿಯಾಗಿ ನೆಲೆಸಿರುವ ಮಹಿಳೆಯರು ಅವಿವಾಹಿತ ಯುವಕರಿಗಿಂತ ಕಡಿಮೆ ಒತ್ತಡ ಎದುರಿಸುತ್ತಾರೆ. ಉತ್ತಮ ಉದ್ಯೋಗ, ತೃಪ್ತಿ, ಕೆಲಸದಲ್ಲಿ ಉತ್ತಮ ಚಟುವಟಿಕೆ ಮಟ್ಟ ಮತ್ತು ಕುಟುಂಬ ಮತ್ತು ಸ್ನೇಹಿತರ ಜೊತೆಗೆ ಉತ್ತಮ ಬಲಿಷ್ಠ ಸಂಬಂಧಗಳನ್ನು ಹೊಂದಿರುವ ಕಾರಣ ಸಾಮಾಜಿಕ ಏಕಾಂಗಿತನ ಭಯ ಅವರಿಗೆ ಕಡಿಮೆ ಇರುತ್ತದೆ. ಸಂಗಾತಿಯನ್ನು ಕಳೆದುಕೊಂಡ ನೋವನ್ನು ವಿಧವೆಯರು ವಿಧುರರಿಗೆ ಹೋಲಿಸಿದಲ್ಲಿ ಉತ್ತಮವಾಗಿ ನಿಭಾಯಿಸುತ್ತಾರೆ.

ವಿಧುರರಲ್ಲಿ ಸಾಮಾನ್ಯವಾಗಿ ಖಿನ್ನತೆಯ ಅಪಾಯ ಹೆಚ್ಚಿರುತ್ತದೆ ಎಂದು ಸಂಶೋಧಕಿ ಅಭಿಪ್ರಾಯಪಡುತ್ತಾರೆ. ವಿವಾಹಿತ ಮಹಿಳೆಯರಿಗೆ ಹೋಲಿಸಿದರೆ ವಿಧವೆಯರು ಶೇ 23ರಷ್ಟು ಕಡಿಮೆ ದುರ್ಬಲರು ಎಂದು ಅಧ್ಯಯನ ಹೇಳಿದೆ.

ಈ ಅಧ್ಯಯನಕ್ಕಾಗಿ 733 ಇಟಲಿ ಪುರುಷರು ಮತ್ತು 1,154 ಮಹಿಳೆಯನ್ನು ನಾಲ್ಕೂವರೆ ವರ್ಷ ಅಧ್ಯಯನ ಮಾಡಲಾಗಿದೆ. ವಿವಾಹಿತರಿಗೆ ಹೋಲಿಸಿದರೆ ಅವಿವಾಹಿತರು ಬಹುತೇಕ ನಾಲ್ಕು ಪಟ್ಟು ಮತ್ತು ವಿಧವೆಯರು ಒಂದೂವರೆ ಪಟ್ಟು ಕಡಿಮೆ ದುರ್ಬಲರಾಗಿರುತ್ತಾರೆ. ಈ ಹೊಸ ಸಂಶೋಧನೆಯು ಹಿಂದಿನ ಸಂಶೋಧನೆಗಳಿಗೆ ಸ್ವಲ್ಪ ಬದಲಾಗಿದ್ದರೂ ಮದುವೆಯಿಂದ ಸಂತಾನ, ಆರೋಗ್ಯ ಸ್ಥಿತಿ ಮತ್ತು ಖಿನ್ನತೆ ಮಹಿಳೆ ಮತ್ತು ಪುರುಷರಲ್ಲಿ ರಕ್ಷಣಾತ್ಮಕ ಪರಿಣಾಮವಾಗಿರುವುದೂ ತಿಳಿದು ಬಂದಿದೆ.

 ಕೃಪೆ: deccanherald.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X