Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಯೂ ಟರ್ನ್: ಉಯಿಗರ್ ನಾಯಕ ಡೋಲ್ಕನ್...

ಭಾರತ ಯೂ ಟರ್ನ್: ಉಯಿಗರ್ ನಾಯಕ ಡೋಲ್ಕನ್ ಈಸಾರಿಗೆ ವೀಸಾ ಇಲ್ಲ!

ವಾರ್ತಾಭಾರತಿವಾರ್ತಾಭಾರತಿ25 April 2016 3:33 PM IST
share
ಭಾರತ ಯೂ ಟರ್ನ್: ಉಯಿಗರ್ ನಾಯಕ ಡೋಲ್ಕನ್ ಈಸಾರಿಗೆ ವೀಸಾ ಇಲ್ಲ!

ಹೊಸದಿಲ್ಲಿ, ಎಪ್ರಿಲ್ 25: ಚೀನಾದ ಭಾರೀ ವಿರೋಧದ ಹಿನ್ನೆಲೆಯಲ್ಲಿ ಭಾರತ ಉಯಿಗುರ್ ನಾಯಕ ಡೋಲ್ಕನ್ ಈಸಾರಿಗೆ ವೀಸಾವನ್ನು ನಿರಾಕರಿಸಿದೆ. ಭಾರತವು ಅವರ ವಿರುದ್ಧ ಜಾರಿಯಾಗಿರುವ ರೆಡ್‌ಕಾರ್ನರ್ ನೋಟಿಸ್ ಹಿನ್ನೆಲೆಯಲ್ಲಿ ವೀಸಾ ನೀಡಲು ಸಾಧ್ಯವಿಲ್ಲ ಎಂದಿದೆ ಎಂದು ವರದಿಯಾಗಿದೆ. ಜರ್ಮನಿಯಲ್ಲಿ ವಾಸಿಸುತ್ತಿರುವ ವಿಶ್ವ ಉಯಿಗುರ್ ಕಾಂಗ್ರೆಸ್(ಡಬ್ಲ್ಯೂ ಯು ಸಿ) ನಾಯಕರಿಗೆ ಅಮೆರಿಕನ್ ಮೂಲದ ಕಂಪೆನಿ ಇನ್‌ಸಿಟಿಯೇಟಿವ್ಸ್ ಫಾರ್ ಚೈನಾ ಎಂಬ ಧರ್ಮಶಾಲಾದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಆಮಂತ್ರಿಸಿತ್ತು. ಈ ಸಂದರ್ಭದಲ್ಲಿ ಟಿಬೆಟಿಯನ್ ಧರ್ಮಗುರು ದಲಾಯಿಲಾಮರೊಂದಿಗೂ ಈಸಾ ಭೇಟಿಯಾಗಲಿದ್ದರು. ಆದರೆ ಈಗ ಭಾರತ ವೀಸಾ ನಿರಾಕರಿಸಿದ್ದು ಧರ್ಮಶಾಲಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಭಾಗವಹಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಈಸಾರಿಗೆ ವೀಸಾ ನೀಡಲು ವಿಶ್ವಸಂಸ್ಥೆಯಲ್ಲಿ ಮಸೂದ್ ಅಝರ್‌ನನ್ನು ವಿಶ್ವಸಂಸ್ಥೆಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಬೇಕೆಂಬ ಭಾರತದ ಮನವಿಯ ವಿರುದ್ಧ ವೀಟೊ ಚಲಾಯಿಸಿದ್ದಕ್ಕೆ ಪ್ರತಿಯಾಗಿ ಭಾರತ ನಿರ್ಧರಿಸಿತ್ತು. ಆದರೆ ಈಗ ಭಾರತ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ವರದಿಗಳು ತಿಳಿಸಿವೆ. ಡಬ್ಲ್ಯೂಯುಸಿಯ ಚೀನಾ ಭಯೋತ್ಪಾದಕರೆಂದು ಹೆಸರಿಸಿದ ನಾಯಕರಿಗೆ ಭಾರತ ವೀಸಾ ನೀಡಲು ಹೊರಟಿತ್ತು. ಡಬ್ಲ್ಯೂಯುಸಿ ನಾಯಕ ಡೋಲ್ಕನ್ ಈಸಾರ ವಿರುದ್ಧ ಚೀನದ ಮುಸ್ಲಿಮ್ ಬಹುಸಂಖ್ಯಾತ ಶಿನಿಜಿಯಾಂಗ್ ಪ್ರಾಂತದಲ್ಲಿ ಭಯೋತ್ಪಾದನೆ ಹರಡಲು ಯತ್ನಿಸಿದ ಆರೋಪವನ್ನು ಚೀನಾ ಹೊರಿಸಿ ಇಂಟರ್‌ಪೋಲ್ ಮೂಲಕ ರೆಡ್‌ಕಾರ್ನರ್ ನೋಟಿಸು ಜಾರಿ ಮಾಡಿತ್ತು. ಈ ಕುರಿತು ವಿದೇಶ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್‌ರನ್ನು ಪ್ರಶ್ನಿಸಿದಾಗ ವಿವರ ಮಾಧ್ಯಮಗಳ ಮೂಲಕ ತಿಳಿದಿದೆ ಈ ಕುರಿತು ಮಾಹಿತಿ ಇನ್ನಷ್ಟೇ ಕಲೆಹಾಕಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

ಚೀನಾದ ಶಿನಿಜಿಯಾಂಗ್ ಪ್ರಾಂತದ ಉಯಿಗುರ್‌ನ ಜನಸಂಖ್ಯೆ ಒಂದು ಕೋಟಿಗಿಂತಲೂ ಅಧಿಕವಾಗಿದೆ. ಇವರೆಲ್ಲ ಮೂಲತಃ ಟರ್ಕಿ ಮುಸ್ಲಿಮರಾಗಿದ್ದಾರೆ. ಚೀನಾದ ಶಿನ್‌ಜಿಯಾಂಗ್ ಪ್ರದೇಶದಲ್ಲಿ ಬಂದು ನೆಲೆಸಿದ್ದು ನಂತರ ಉಯಿಗುರ್ ಎಂಬ ಹೆಸರಿನಿಂದ ಈ ಪ್ರದೇಶವನ್ನು ಕರೆಯಲಾಯಿತು. ಶಿನ್‌ಜಿಯಾಂಗ್ ಪ್ರಾಂತದಲ್ಲಿ ಉಯಿಗುರ್ ಆಗಾಗ ವಿರೋಧ ಪ್ರತಿಭಟನೆ ನಡೆಯುತ್ತಿರುತ್ತದೆ. ಚೀನಾದಲ್ಲಿ ಉಯಿಗುರ್ ನಿವಾಸಿಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X