Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಳ ಬದುಕಿನ ಮೂಲಕ ಮಾದರಿ ವ್ಯಕ್ತಿತ್ವದ...

ಸರಳ ಬದುಕಿನ ಮೂಲಕ ಮಾದರಿ ವ್ಯಕ್ತಿತ್ವದ ಪ್ರತೀಕ-ಕೊಂಡೆವೂರು ಶ್ರೀ

ಸಾಯಿರಾಂ ಭಟ್ ನೀಡುವ 235ನೇ ಉಚಿತ ಮನೆ ಕೀಲಿಕೈ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ25 April 2016 4:27 PM IST
share
ಸರಳ ಬದುಕಿನ ಮೂಲಕ ಮಾದರಿ ವ್ಯಕ್ತಿತ್ವದ ಪ್ರತೀಕ-ಕೊಂಡೆವೂರು ಶ್ರೀ

ಮಂಜೇಶ್ವರ ; ತಮ್ಮ ಅನುಕೂಲತೆಗಳನ್ನು ದೇವರ ಪ್ರಸಾದವೆಂದು ಭಾವಿಸಿ ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮನಸ್ಸು ಇತರರಿಗೆ ಮಾದರಿಯಾದುದು.ವೃಕ್ಷದಂತೆ ಫಲಾಪೇಕ್ಷೆಯಿಲ್ಲದೆ ನೆರವಾಗುವ ಸಾಯಿರಾಂ ಗೋಪಾಲಕೃಷ್ಣ ಭಟ್ಟರ ಸೇವಾ ಚಟುವಟಿಕೆ ಕರಾವಳಿ ಪ್ರದೇಶದಲ್ಲಿ ಅತ್ಯಪೂರ್ವವಾಗಿದ್ದು,ಭಗವದನುಗ್ರಹದ ಪೂರ್ಣ ರಕ್ಷೆ ಇಂತಹ ಸೇವೆಗಳಿಗೆ ಲಭಿಸುವುದೆಂದು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

 ಕಿಳಿಂಗಾರು ಸಾಯಿರಾಂ ಗೋಪಾಲಕೃಷ್ಣ ಭಟ್ ಕೊಡಮಾಡಿದ 235ನೇ ಉಚಿತ ಮನೆಯ ಕೀಲಿಕೈಯನ್ನು ಭಾನುವಾರ ಸುಂದರ ಕುಮಾರಮಂಗಲರವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

  ಸಂಪತ್ತು ಸೌಭಾಗ್ಯಗಳು ಸಾಕಷ್ಟು ಜನರಿಗಿದ್ದರೂ ಅದನ್ನು ಸ್ವಾರ್ಥ ಲಾಲಸೆ ಬಿಟ್ಟು ಪರೋಪಾರಕ್ಕಾಗಿ ಒಂದಂಶವನ್ನಾದರೂ ನೀಡದಿರುವುದು ಮಾನವ ಜನ್ಮಕ್ಕೆ ಮಾಡುವ ಮೋಸವಾಗಿದ್ದು,ಪ್ರಸ್ತುತ ಸಂದರ್ಭದಲ್ಲಿ ಮಾನವೀಯತೆಗೆ ಬೆಲೆ ಕುಂಠಿತಗೊಳ್ಳುತ್ತಿರುವುದು ವಿಶಾದನೀಯ.ಆದರೆ ಸೀಮಿತ ಸರಳ ಬದುಕಿನ ಮೂಲಕ ಮಾದರಿ ಜೀವನ ನಡೆಸುತ್ತಿರುವ ಸಾಯಿರಾಂ ಗೋಪಾಲಕೃಷ್ಣ ಭಟ್ಟರು ಗಳಿಕೆಯ ಬಹು ಅಂಶವನ್ನೂ ಸಮಾಜ ಸೇವೆಗೆ,ದೀನರ ಶ್ರೇಯಸ್ಸಿಗೆ ಬಳಸುತ್ತಿರುವುದು ನಾಡಿನ ಪುಣ್ಯವೆಂದು ಅವರು ತಿಳಿಸಿದರು.ಭಟ್ಟರಿಗೆ ಇನ್ನಷ್ಟು ಸೇವಾ ಶಕ್ತಿ ಭಗವಂತ ಅನುಗ್ರಹಿಸಲೆಂದು ಹಾರೈಸಿದರು.

  ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಕೇಶವ ಪ್ರಸಾದ ನಾಣಿತ್ತಿಲು ಮಾತನಾಡಿ,ಹಿರಿಯರೂ ಮಾರ್ಗದರ್ಶಕರಾದ ಸಾಯಿರಾಂ ಗೋಪಾಲಕೃಷ್ಣರ ಜೀವನ ಯುವ ಸಮೂಹಕ್ಕೆ ಮಾದರಿಯಾಗಿದ್ದು,ಎಲ್ಲಾ ವರ್ಗದ ಸರ್ವ ಕಾಲಕ್ಕೂ ಮಾರ್ಗದರ್ಶಿ ವ್ಯಕ್ತಿತ್ವ ರೂಪಣೆಯ ಪ್ರತಿಮೆಯೆಂದು ತಿಳಿಸಿದರು.

 ಶಾರದಾ .ಭಟ್, ಶಾಂತಿ ಸಂದೇಶ್ ವಾರಣಾಸಿ,ಮಧುರಾ ಭಟ್ ಕಿಳಿಂಗಾರ್,ಶೀಲಾ ಕೆ.ಎನ್ ಭಟ್,ಸಂದೇಶ್ ವಾರಣಾಸಿ ಮೊದಲಾದವರು ಉಪಸ್ಥಿತರಿದ್ದರು.ಕೆ.ಎನ್ ಕೃಷ್ಣ ಭಟ್ ಸ್ವಾಗತಿಸಿ,ಎಂ.ಎಚ್.ಜನಾರ್ಧನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X